Santosh lad: ಶಿಕ್ಷಕಿಯರೊಂದಿಗೆ ಜಾನಪದ ಹಾಡಿಗೆ ಹೆಜ್ಜೆ ಹಾಕಿದ ಸಚಿವ ಸಂತೋಷ ಲಾಡ್

Santosh lad: ಶಿಕ್ಷಕಿಯರೊಂದಿಗೆ ಜಾನಪದ ಹಾಡಿಗೆ ಹೆಜ್ಜೆ ಹಾಕಿದ ಸಚಿವ ಸಂತೋಷ ಲಾಡ್

ಧಾರವಾಡ: ಇಂದಿನ ಶೈಕ್ಷಣಿಕ ಪ್ರಗತಿ, ಗುಣಮಟ್ಟವನ್ನು ಪರಿಶೀಲಿಸಿದಾಗ, ಇಡೀ ಶಿಕ್ಷಕ ಸಮೂಹ ತಮ್ಮ ಆದರ್ಶತನ ಮತ್ತು ಕಾಯಕ ವೃತ್ತಿ ಮೌಲ್ಯಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಕಾಲ ಘಟ್ಟದಲ್ಲಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ (Santosh lad) ಅವರು ಹೇಳಿದರು.

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ರಾಜಕಾರಣಿಗಳ ಹಿಂಬಾಲಕರಾಗದೇ, ಅನಗತ್ಯ ತುಷ್ಟೀಕರಣ, ಓಲೈಕೆಗಳನ್ನು ಮಾಡದೇ, ಪೂಜ್ಯನೀಯ ಗುರು ಸ್ಥಾನದಲ್ಲಿರುವ ಶಿಕ್ಷಕರು ಬಸವಣ್ಣ, ಅಂಬೇಡ್ಕರ, ರಾಧಾಕೃಷ್ಣನ್ ಅವರು ಹೇಳಿದ ನೀತಿ ಮಾರ್ಗದಲ್ಲಿ ನಡೆದು ಶೈಕ್ಷಣಿಕ ಬದಲಾವಣೆ, ಆತ್ಮ ಸಂಸ್ಕಾರ ನೀಡುವ ಶಿಕ್ಷಣ ನೀಡುವಂತೆ ಆಗಬೇಕೆಂದರು.

ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಧಾರವಾಡ ಜಿಲ್ಲಾ ಉಪ ನಿರ್ದೇಶಕರ ಕಾರ್ಯಾಲಯದಿಂದ ಆಯೋಜಿಸಿದ್ದ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಜೃಷ್ಣನ್‍ರವರ ಜನ್ಮದಿನದ ಅಂಗವಾಗಿ ಜಿಲ್ಲಾಮಟ್ಟದ ಶಿಕ್ಷಕರ ದಿನೋತ್ಸವ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ನಮ್ಮ ಶಿಕ್ಷಕ ಸಮೂಹಕ್ಕೆ ಡಾ. ರಾಧಾಕೃಷ್ಣನ್ ಅವರದು ಮಾದರಿ ವ್ಯಕ್ತಿತ್ವ. ಅವರು ಶಿಕ್ಷಣ, ಸಮಾಜ, ಧರ್ಮ, ರಾಜಕೀಯ ಮತ್ತು ಸರಕಾರಿ ಸೇವೆಯಲ್ಲಿ ಅವರು ಆದರ್ಶವಾಗಿ ನಡೆದು, ಮಾರ್ಗದರ್ಶರಾಗಿದ್ದಾರೆ. ಶಿಕ್ಷಣ ಮತ್ತು ಸಂವಿಧಾನಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಈಗಾಗಲೇ ಶಿಕ್ಷರ ಬೇಡಿಕೆಗಳ ಬಗ್ಗೆ ಸರಕಾರ ಸಕಾರತ್ಮಕವಾಗಿ ಸ್ಪಂದಿಸಿ, 7ನೇ ವೇತನ ಆಯೋಗ ಜಾರಿಗೊಳಿಸಿದೆ. ಉಳಿದಂತೆ ಸರಕಾರಿ ನೌಕರರ ಎಲ್ಲ ಬೇಡಿಕೆಗಳು ಪರಿಶೀಲನಾ ಹಂತದಲ್ಲಿವೆ ಎಂದು ಸಚಿವರು ತಿಳಿಸಿದರು.

ಶಿಕ್ಷಕ ಸಮೂಹ ಇಂದು ಆತ್ಮವಲೋಕನ ಮಾಡಿಕೊಳ್ಳುವ ಕಾಲ ಬಂದಿದೆ. ವರದಿ ಒಂದರ ಪ್ರಕಾರ ಒಂದರಿಂದ ಹತ್ತನೇ ತರಗತಿವರೆಗೆ ಕಲಿಯುವ ಮಕ್ಕಳಿಗೆ ಸರಿಯಾಗಿ ಪೂರ್ಣಪ್ರಮಾಣದಲ್ಲಿ ಓದಲು ಬರುವದಿಲ್ಲ ಎಂಬ ಮಾಹಿತಿ ಇದೆ. ಓದು-ಬರಹದಲ್ಲಿ ಹಿಂದುಳಿದಿದ್ದಾರೆ ಎಂದು ವರದಿ ಹೇಳುತ್ತಿದೆ. ಅಂದರೆ ನಮ್ಮ ಕರ್ತವ್ಯ ಪ್ರಜ್ಞೆ ಮರೆಯುತ್ತಿದ್ದೆವೆ, ಬಸವಣ್ಣ, ಅಂಬೇಡ್ಕರ ಅವರ ವಿಚಾರ, ಜೀವನ ಸಂದೇಶಗಳು ಪಾಠಕ್ಕೆ ಮೀಸಲಾಗದೆ, ಜೀವನದಲ್ಲಿ ಅಳವಡಿಸಿಕೊಂಡು ಮಾದರಿ ಆಗಬೇಕು ಎಂದರು.

ಸಂವಿಧಾನ ಉಳಿಯುವುದು ಶಿಕ್ಷಕರಿಂದ ಮತ್ತು ಶಿಕ್ಷಕರು ಮಕ್ಕಳಿಗೆ ನೀಡುವ ಶಿಕ್ಷಣದಿಂದ ಮಾತ್ರ ಸಾಧ್ಯ. ಜಗತ್ತಿನ ಬದಲಾವಣೆ, ಸಮಾಜದ ಬದಲಾವಣೆ ಶಿಕ್ಷಕರಿಂದ ಮಾತ್ರ ಆಗುತ್ತದೆ. ರಾಜಕೀಯ ರಗಳೆಗೆ ಹೋಗದೆ ಶಿಕ್ಷಕರು ಉತ್ತಮ ಸಮಾಜ ಕಟ್ಟುವ ಕಾಯಕದಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ನೇತೃತ್ವದಲ್ಲಿ ಜಿಲ್ಲೆಯಲ್ಲಿ ಶೈಕ್ಷಣಿಕ ಬದಲಾವಣೆಗೆ ಮಿಷನ್ ವಿದ್ಯಾ ಕಾಶಿ ಯೋಜನೆ ಮೂಲಕ ಕ್ರಮವಹಿಸಿರುವುದು ಅಭಿನಂದನಾರ್ಹವಾಗಿದ್ದು, ಈ ಕಾರ್ಯಕ್ಕೆ ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿ, ಶಿಕ್ಷಕ ಸಮೂಹ ಮತ್ತು ಎಲ್ಲ ಪಾಲಕರು ಪ್ರಾಮಾಣಿಕವಾಗಿ ಕೈಜೋಡಿಸಿ, ಸಕ್ರಿಯವಾಗಿ ಪಾಲ್ಗೋಳ್ಳಬೇಕು ಎಂದು ಸಚಿವರು ತಿಳಿಸಿದರು.

ಸಂವಿಧಾನ ಒಂದೇ ನಮ್ಮನ್ನು ಸದಾಕಾಲ ರಕ್ಷಿಸುವ ರಕ್ಷಕ. ಸಂವಿಧಾನದ ಮೌಲ್ಯಗಳನ್ನು ಮಕ್ಕಳಲ್ಲಿ ಬಿತ್ತಬೇಕು. ಉತ್ತಮವಾಗಿ ಮಕ್ಕಳನ್ನು ಬೆಳೆಸಬೇಕು. ಪ್ರತಿ ದಿನ ಸಕಾರಾತ್ಮವಾಗಿ ಚಿಂತಿಸುವ ಮೂಲಕ ಮಕ್ಕಳಲ್ಕಿ ಜಾತ್ಯಾತೀತತೇ, ಸಾಮಾರಸ್ಯ, ಸಹೋದರತ್ವ, ಭ್ರಾತೃತ್ವದ ಗುಣಗಳನ್ನು ಬೆಳೆಸಬೇಕು ಎಂದು ಸಚಿವ ಸಂತೋಷ ಲಾಡ್ ಶಿಕ್ಷಕರಲ್ಲಿ ವಿನಂತಿಸಿದರು.

ಧಾರವಾಡ ಮುರಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸಾನಿಧ್ಯವಹಿಸಿ, ಆಶಿರ್ವಚನ ನೀಡಿದರು.

ಸಮಾರಂಭದ ಅಧ್ಯಕ್ಷತೆವಹಿಸಿದ್ದ ಶಾಸಕ ಎನ್.ಎಚ್.ಕೋನರಡ್ಡಿ ಅವರು ಮಾತನಾಡಿ, ಶಿಕ್ಷಕರು ಕಷ್ಟುಪಟ್ಟು ಕಲಿಸಿದರೆ ಮಾತ್ರ ನಮ್ಮ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ. ನಾವು ಉತ್ತಮ ಜೀವನ ಪಡೆಯಬೇಕಾದರೆ, ಉತ್ತಮ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಲಕ್ಷ್ಯ ಅಕಾಡೆಮಿ ಮುಖ್ಯಸ್ಥೆ ಲಕ್ಷ್ಮಿ ಹಿರೇಮಠ ಅವರು ಮಾತನಾಡಿದರು.

ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಹುಬ್ಬಳ್ಳಿಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿ.ಪಂ. ಸಿಇಓ ಸ್ವರೂಪ ಟಿ.ಕೆ., ಮಾಜಿ ಲೋಕಸಭಾ ಸದಸ್ಯ ಐ.ಜಿ.ಸನದಿ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್ ಸಿದ್ದನಗೌಡರ ಸೇರಿದಂತೆ ವಿವಿಧ ಅಧಿಕಾರಿಗಳು, ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳು ವೇದಿಕೆಯಲ್ಲಿದ್ದರು.

ಸಮಾರಂಭದಲ್ಲಿ ಕಿರಿಯ ಪ್ರಾಥಮಿಕ ಶಾಲೆಯ 7 ಜನ ಶಿಕ್ಷಕರಿಗೆ, ಹಿರಿಯ ಪ್ರಾಥಮಿಕ ಶಾಲೆಯ 7 ಜನ ಶಿಕ್ಷಕರಿಗೆ ಮತ್ತು ಪ್ರೌಢಶಾಲೆ ವಿಭಾಗದ 7 ಜನ ಸಹ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಭೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಶಿಕ್ಷಕ ಸಮೂಹದವರು ಭಾಗವಹಿಸಿದ್ದರು. ಪ್ರಕಾಶ ಭೂತಾಳಿ ಮತ್ತು ರೇಖಾ ಭಜಂತ್ರಿ ಕಾರ್ಯಕ್ರಮ ನಿರೂಪಿಸಿದರು.

ಶಿಕ್ಷಕರೊಂದಿಗೆ ಜಾನಪದ ನೃತ್ಯಕ್ಕೆ ಸಚಿವ ಸಂತೋಷ ಲಾಡ್ ಹೆಜ್ಜೆ:

ಸದಾ ವಿಭಿನ್ನವಾಗಿ ಗುರತಿಸಿಕೊಳ್ಳುವ, ಎಲ್ಲರೊಳಗು ಒಂದಾಗಿ ಬೆರೆಯುವ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಇಂದು ಸಂಜೆ ಧಾರವಾಡದಲ್ಲಿ ಜರುಗಿದ ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆಯಲ್ಲಿ ಶಿಕ್ಷಕರು ಪ್ರಸ್ತುತಪಡಿಸಿದ ಜಾನಪದ ನೃತ್ಯದಲ್ಲಿ ಬೆಂಕಿ ಕುಂಡದ ಗಡಿಗೆಯನ್ನು ತಲೆ ಮೇಲೆ ಹೊತ್ತು ನೃತ್ಯ ಮಾಡುವ ಮೂಲಕ ಶಿಕ್ಷಕರ ಸಂಭ್ರಮದ ಕ್ಷಣಗಳಿಗೆ ಹೆಜ್ಜೆ ಹಾಕಿದರು.

ಹೌದು, ಸಚಿವ ಸಂತೋಷ ಲಾಡ್ (Santosh lad) ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಕಚೇರಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕದ ಪ್ರಮುಖ ಮತ್ತು ವಿಶಿಷ್ಟವಾದ ಜೋಗುತಿ ಜಾನಪದ ನೃತ್ಯಕ್ಕೆ ಕಲಾವಿದ ಶಿಕ್ಷಕ, ಶಿಕ್ಷಕಿಯರ ಜೊತೆಗೆ ಬೆಂಕಿ ಕುಂಡದ ಗಡಿಗೆಯನ್ನು ತಲೆ ಮೇಲೆ ಹೊತ್ತು ನೃತ್ಯಕ್ಕೆ ಹೆಜ್ಜೆ ಹಾಕಿ, ಸಚಿವರು ಸಂಭ್ರಮಿಸಿದರು.

ಶಿಕ್ಷಕ ಕಲಾವಿದರ ಸಿರಿಗಂಧ ಜಾನಪದ ಕಲಾಬಳಗದ ಪ್ರಕಾಶ ಕಂಬಳಿ ಮತ್ತು ಜಯಲಕ್ಷ್ಮಿ ಎಚ್. ಅವರು ತಮ್ಮ ಸಹ ಕಲಾ ಶಿಕ್ಷಕರೊಂದಿಗೆ ಜಾನಪದ ನೃತ್ಯ ಪ್ರದರ್ಶಿಸಿ, ಪ್ರೇಕ್ಷಕರ ಮನ ಸೆಳೆದರು.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600