ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್ ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ

ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್ ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ

Ad
Ad

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಹಕರ ಆಶಯದಂತೆ ನಾವು ಕರ್ತವ್ಯ ನಿರ್ವಹಿಸಿದ್ದೇವೆ ಎಂಬ ತೃಪ್ತಿಯಿದೆ.ಊರಿನ ಹಿರಿಯರು ಸೇರಿ ಕೈಗೊಳ್ಳುವ ತೀರ್ಮಾನದಂತೆ ನಾವು ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ.ಹಿರಿಯರು ಬ್ಯಾಂಕಿಗೆ ಎಂತಹ ಸದಸ್ಯರು ಬೇಕು ಎಂದು ನಿರ್ಣಯಿಸಿ ಮಾಡುವ ಪೆನಲ್ ಆಯ್ಕೆಗೆ ನಾವು ಶ್ರಮಿಸುತ್ತೇವೆ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶಕುಮಾರ ಓಸ್ವಾಲ ಹೇಳಿದರು.

Ad
Ad

ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬ್ಯಾಂಕ್‌ನ್ನು ಕಟ್ಟಿ ಬೆಳೆಸುವಲ್ಲಿ ಹಲವು ಹಿರಿಯರ ಪರಿಶ್ರಮವಿದೆ.ಈ ಊರಿನ ವ್ಯಾಪಾರಸ್ಥರಿಗೆ, ಗ್ರಾಹಕರಿಗೆ, ಅನುಕೂಲವಾಗುವ ಸೇವೆಯನ್ನು ಬ್ಯಾಂಕಿನಿAದ ನೀಡಿದ್ದೇವೆ ಎಂಬ ತೃಪ್ತಿಯಿದೆ.ಎ.ಟಿ.ಎಂ ಸ್ಥಾಪನೆ ಕೆಲಸ ಪೂರ್ಣಗೊಳಿಸುವ ಪ್ರಕ್ರಿಯೆ ಬಾಕಿ ಉಳಿಯಿತು. ಜನರ ಪ್ರೀತಿ, ವಿಶ್ವಾಸ ನಂಬಿಕೆಯಿAದ ಬ್ಯಾಂಕ್‌ನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದೇವೆ ಎಂದು ಹೇಳಿದರು.

ಈ ಸಲದ ಚುನಾವಣೆಯಲ್ಲಿ ಮತ್ತೊಮ್ಮೆ ಸ್ಪರ್ಧಿಸುವೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಊರಿನ ಹಿರಿಯರು, ಬ್ಯಾಂಕಿನ ಹಿತೈಷಿಗಳು ರಚಿಸುವ ಪೆನಲ್‌ನಲ್ಲಿ ಅವಕಾಶ ಕಲ್ಪಿಸುವವರಿಗೆ ನಮ್ಮ ಸ್ಪರ್ಧೆಯ ನಿರ್ಧಾರ ಇದೆ ಎಂದು ಹೇಳಿದರು.

ನಿರ್ದೇಶಕರಾದ ವೆಂಕನಗೌಡ ಪಾಟೀಲ್, ಶಶಿಕಾಂತ ಮಾಲಗತ್ತಿ ಮಾತನಾಡಿ,
ಕರ್ನಾಟಕ ಬ್ಯಾಂಕ್‌ನ್ನು ಕಟ್ಟಿ ಬೆಳೆಸಿದ ಹಿರಿಯರ ನಂಬಿಕೆಗೆ ಪಾತ್ರವಾಗುವಂತೆ ಆಡಳಿತ ನಡೆಸಿದ್ದೇವೆ.ನಮ್ಮ ಅವಧಿಯಲ್ಲಿ ಹೂವಿನ ಹಿಪ್ಪರಗಿಯಲ್ಲಿ ಹೊಸ ಶಾಖೆ, ಮುದ್ದೇಬಿಹಾಳದಲ್ಲಿ ಜನರಿಗೆ ಉಪಯುಕ್ತವಾಗುವಂತಹ ಸಭಾಭವನ ನಿರ್ಮಾಣಕ್ಕೆ ಶ್ರಮಿಸಿದ್ದೇವೆ ಎಂದರು.

ಸಭೆಯಲ್ಲಿ ನಿರ್ದೇಶಕರಾದ ನಾಗಭೂಷಣ ನಾವದಗಿ, ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಗುರುಲಿಂಗಪ್ಪಗೌಡ ಪಾಟೀಲ್ ಮಾತನಾಡಿದರು. ಬ್ಯಾಂಕಿನ ಉಪಾಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕರಾದ ರವಿ ಕಮತ, ರಾಜಶೇಖರ ಕರಡ್ಡಿ, ಪ್ರಭುರಾಜ ಕಲ್ಬುರ್ಗಿ, ಸುನೀಲ ಇಲ್ಲೂರ, ಮುತ್ತಣ್ಣ ಕಡಿ ಮೊದಲಾದವರು ಇದ್ದರು.

ಇದೇ ವೇಳೆ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ನಿಧನಕ್ಕೆ ಬ್ಯಾಂಕಿನ ಪರವಾಗಿ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500