ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್ ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ

ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್ ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಹಕರ ಆಶಯದಂತೆ ನಾವು ಕರ್ತವ್ಯ ನಿರ್ವಹಿಸಿದ್ದೇವೆ ಎಂಬ ತೃಪ್ತಿಯಿದೆ.ಊರಿನ ಹಿರಿಯರು ಸೇರಿ ಕೈಗೊಳ್ಳುವ ತೀರ್ಮಾನದಂತೆ ನಾವು ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ.ಹಿರಿಯರು ಬ್ಯಾಂಕಿಗೆ ಎಂತಹ ಸದಸ್ಯರು ಬೇಕು ಎಂದು ನಿರ್ಣಯಿಸಿ ಮಾಡುವ ಪೆನಲ್ ಆಯ್ಕೆಗೆ ನಾವು ಶ್ರಮಿಸುತ್ತೇವೆ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶಕುಮಾರ ಓಸ್ವಾಲ ಹೇಳಿದರು.

ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬ್ಯಾಂಕ್‌ನ್ನು ಕಟ್ಟಿ ಬೆಳೆಸುವಲ್ಲಿ ಹಲವು ಹಿರಿಯರ ಪರಿಶ್ರಮವಿದೆ.ಈ ಊರಿನ ವ್ಯಾಪಾರಸ್ಥರಿಗೆ, ಗ್ರಾಹಕರಿಗೆ, ಅನುಕೂಲವಾಗುವ ಸೇವೆಯನ್ನು ಬ್ಯಾಂಕಿನಿAದ ನೀಡಿದ್ದೇವೆ ಎಂಬ ತೃಪ್ತಿಯಿದೆ.ಎ.ಟಿ.ಎಂ ಸ್ಥಾಪನೆ ಕೆಲಸ ಪೂರ್ಣಗೊಳಿಸುವ ಪ್ರಕ್ರಿಯೆ ಬಾಕಿ ಉಳಿಯಿತು. ಜನರ ಪ್ರೀತಿ, ವಿಶ್ವಾಸ ನಂಬಿಕೆಯಿAದ ಬ್ಯಾಂಕ್‌ನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದೇವೆ ಎಂದು ಹೇಳಿದರು.

ಈ ಸಲದ ಚುನಾವಣೆಯಲ್ಲಿ ಮತ್ತೊಮ್ಮೆ ಸ್ಪರ್ಧಿಸುವೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಊರಿನ ಹಿರಿಯರು, ಬ್ಯಾಂಕಿನ ಹಿತೈಷಿಗಳು ರಚಿಸುವ ಪೆನಲ್‌ನಲ್ಲಿ ಅವಕಾಶ ಕಲ್ಪಿಸುವವರಿಗೆ ನಮ್ಮ ಸ್ಪರ್ಧೆಯ ನಿರ್ಧಾರ ಇದೆ ಎಂದು ಹೇಳಿದರು.

ನಿರ್ದೇಶಕರಾದ ವೆಂಕನಗೌಡ ಪಾಟೀಲ್, ಶಶಿಕಾಂತ ಮಾಲಗತ್ತಿ ಮಾತನಾಡಿ,
ಕರ್ನಾಟಕ ಬ್ಯಾಂಕ್‌ನ್ನು ಕಟ್ಟಿ ಬೆಳೆಸಿದ ಹಿರಿಯರ ನಂಬಿಕೆಗೆ ಪಾತ್ರವಾಗುವಂತೆ ಆಡಳಿತ ನಡೆಸಿದ್ದೇವೆ.ನಮ್ಮ ಅವಧಿಯಲ್ಲಿ ಹೂವಿನ ಹಿಪ್ಪರಗಿಯಲ್ಲಿ ಹೊಸ ಶಾಖೆ, ಮುದ್ದೇಬಿಹಾಳದಲ್ಲಿ ಜನರಿಗೆ ಉಪಯುಕ್ತವಾಗುವಂತಹ ಸಭಾಭವನ ನಿರ್ಮಾಣಕ್ಕೆ ಶ್ರಮಿಸಿದ್ದೇವೆ ಎಂದರು.

ಸಭೆಯಲ್ಲಿ ನಿರ್ದೇಶಕರಾದ ನಾಗಭೂಷಣ ನಾವದಗಿ, ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಗುರುಲಿಂಗಪ್ಪಗೌಡ ಪಾಟೀಲ್ ಮಾತನಾಡಿದರು. ಬ್ಯಾಂಕಿನ ಉಪಾಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕರಾದ ರವಿ ಕಮತ, ರಾಜಶೇಖರ ಕರಡ್ಡಿ, ಪ್ರಭುರಾಜ ಕಲ್ಬುರ್ಗಿ, ಸುನೀಲ ಇಲ್ಲೂರ, ಮುತ್ತಣ್ಣ ಕಡಿ ಮೊದಲಾದವರು ಇದ್ದರು.

ಇದೇ ವೇಳೆ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ನಿಧನಕ್ಕೆ ಬ್ಯಾಂಕಿನ ಪರವಾಗಿ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ