ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್ ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ

ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್ ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಹಕರ ಆಶಯದಂತೆ ನಾವು ಕರ್ತವ್ಯ ನಿರ್ವಹಿಸಿದ್ದೇವೆ ಎಂಬ ತೃಪ್ತಿಯಿದೆ.ಊರಿನ ಹಿರಿಯರು ಸೇರಿ ಕೈಗೊಳ್ಳುವ ತೀರ್ಮಾನದಂತೆ ನಾವು ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ.ಹಿರಿಯರು ಬ್ಯಾಂಕಿಗೆ ಎಂತಹ ಸದಸ್ಯರು ಬೇಕು ಎಂದು ನಿರ್ಣಯಿಸಿ ಮಾಡುವ ಪೆನಲ್ ಆಯ್ಕೆಗೆ ನಾವು ಶ್ರಮಿಸುತ್ತೇವೆ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶಕುಮಾರ ಓಸ್ವಾಲ ಹೇಳಿದರು.

ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬ್ಯಾಂಕ್‌ನ್ನು ಕಟ್ಟಿ ಬೆಳೆಸುವಲ್ಲಿ ಹಲವು ಹಿರಿಯರ ಪರಿಶ್ರಮವಿದೆ.ಈ ಊರಿನ ವ್ಯಾಪಾರಸ್ಥರಿಗೆ, ಗ್ರಾಹಕರಿಗೆ, ಅನುಕೂಲವಾಗುವ ಸೇವೆಯನ್ನು ಬ್ಯಾಂಕಿನಿAದ ನೀಡಿದ್ದೇವೆ ಎಂಬ ತೃಪ್ತಿಯಿದೆ.ಎ.ಟಿ.ಎಂ ಸ್ಥಾಪನೆ ಕೆಲಸ ಪೂರ್ಣಗೊಳಿಸುವ ಪ್ರಕ್ರಿಯೆ ಬಾಕಿ ಉಳಿಯಿತು. ಜನರ ಪ್ರೀತಿ, ವಿಶ್ವಾಸ ನಂಬಿಕೆಯಿAದ ಬ್ಯಾಂಕ್‌ನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದೇವೆ ಎಂದು ಹೇಳಿದರು.

ಈ ಸಲದ ಚುನಾವಣೆಯಲ್ಲಿ ಮತ್ತೊಮ್ಮೆ ಸ್ಪರ್ಧಿಸುವೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಊರಿನ ಹಿರಿಯರು, ಬ್ಯಾಂಕಿನ ಹಿತೈಷಿಗಳು ರಚಿಸುವ ಪೆನಲ್‌ನಲ್ಲಿ ಅವಕಾಶ ಕಲ್ಪಿಸುವವರಿಗೆ ನಮ್ಮ ಸ್ಪರ್ಧೆಯ ನಿರ್ಧಾರ ಇದೆ ಎಂದು ಹೇಳಿದರು.

ನಿರ್ದೇಶಕರಾದ ವೆಂಕನಗೌಡ ಪಾಟೀಲ್, ಶಶಿಕಾಂತ ಮಾಲಗತ್ತಿ ಮಾತನಾಡಿ,
ಕರ್ನಾಟಕ ಬ್ಯಾಂಕ್‌ನ್ನು ಕಟ್ಟಿ ಬೆಳೆಸಿದ ಹಿರಿಯರ ನಂಬಿಕೆಗೆ ಪಾತ್ರವಾಗುವಂತೆ ಆಡಳಿತ ನಡೆಸಿದ್ದೇವೆ.ನಮ್ಮ ಅವಧಿಯಲ್ಲಿ ಹೂವಿನ ಹಿಪ್ಪರಗಿಯಲ್ಲಿ ಹೊಸ ಶಾಖೆ, ಮುದ್ದೇಬಿಹಾಳದಲ್ಲಿ ಜನರಿಗೆ ಉಪಯುಕ್ತವಾಗುವಂತಹ ಸಭಾಭವನ ನಿರ್ಮಾಣಕ್ಕೆ ಶ್ರಮಿಸಿದ್ದೇವೆ ಎಂದರು.

ಸಭೆಯಲ್ಲಿ ನಿರ್ದೇಶಕರಾದ ನಾಗಭೂಷಣ ನಾವದಗಿ, ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಗುರುಲಿಂಗಪ್ಪಗೌಡ ಪಾಟೀಲ್ ಮಾತನಾಡಿದರು. ಬ್ಯಾಂಕಿನ ಉಪಾಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕರಾದ ರವಿ ಕಮತ, ರಾಜಶೇಖರ ಕರಡ್ಡಿ, ಪ್ರಭುರಾಜ ಕಲ್ಬುರ್ಗಿ, ಸುನೀಲ ಇಲ್ಲೂರ, ಮುತ್ತಣ್ಣ ಕಡಿ ಮೊದಲಾದವರು ಇದ್ದರು.

ಇದೇ ವೇಳೆ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ನಿಧನಕ್ಕೆ ಬ್ಯಾಂಕಿನ ಪರವಾಗಿ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ