ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್ ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ

ಜನರ ಕೆಲಸ ಮಾಡಿದ ತೃಪ್ತಿಯಿದೆ-ಓಸ್ವಾಲ್ ಹಿರಿಯರ ಆಶಯದಂತೆ ಚುನಾವಣೆಯಲ್ಲಿ ಪೆನಲ್ ರಚನೆ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಹಕರ ಆಶಯದಂತೆ ನಾವು ಕರ್ತವ್ಯ ನಿರ್ವಹಿಸಿದ್ದೇವೆ ಎಂಬ ತೃಪ್ತಿಯಿದೆ.ಊರಿನ ಹಿರಿಯರು ಸೇರಿ ಕೈಗೊಳ್ಳುವ ತೀರ್ಮಾನದಂತೆ ನಾವು ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ.ಹಿರಿಯರು ಬ್ಯಾಂಕಿಗೆ ಎಂತಹ ಸದಸ್ಯರು ಬೇಕು ಎಂದು ನಿರ್ಣಯಿಸಿ ಮಾಡುವ ಪೆನಲ್ ಆಯ್ಕೆಗೆ ನಾವು ಶ್ರಮಿಸುತ್ತೇವೆ ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶಕುಮಾರ ಓಸ್ವಾಲ ಹೇಳಿದರು.

ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬ್ಯಾಂಕ್‌ನ್ನು ಕಟ್ಟಿ ಬೆಳೆಸುವಲ್ಲಿ ಹಲವು ಹಿರಿಯರ ಪರಿಶ್ರಮವಿದೆ.ಈ ಊರಿನ ವ್ಯಾಪಾರಸ್ಥರಿಗೆ, ಗ್ರಾಹಕರಿಗೆ, ಅನುಕೂಲವಾಗುವ ಸೇವೆಯನ್ನು ಬ್ಯಾಂಕಿನಿAದ ನೀಡಿದ್ದೇವೆ ಎಂಬ ತೃಪ್ತಿಯಿದೆ.ಎ.ಟಿ.ಎಂ ಸ್ಥಾಪನೆ ಕೆಲಸ ಪೂರ್ಣಗೊಳಿಸುವ ಪ್ರಕ್ರಿಯೆ ಬಾಕಿ ಉಳಿಯಿತು. ಜನರ ಪ್ರೀತಿ, ವಿಶ್ವಾಸ ನಂಬಿಕೆಯಿAದ ಬ್ಯಾಂಕ್‌ನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದೇವೆ ಎಂದು ಹೇಳಿದರು.

ಈ ಸಲದ ಚುನಾವಣೆಯಲ್ಲಿ ಮತ್ತೊಮ್ಮೆ ಸ್ಪರ್ಧಿಸುವೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಊರಿನ ಹಿರಿಯರು, ಬ್ಯಾಂಕಿನ ಹಿತೈಷಿಗಳು ರಚಿಸುವ ಪೆನಲ್‌ನಲ್ಲಿ ಅವಕಾಶ ಕಲ್ಪಿಸುವವರಿಗೆ ನಮ್ಮ ಸ್ಪರ್ಧೆಯ ನಿರ್ಧಾರ ಇದೆ ಎಂದು ಹೇಳಿದರು.

ನಿರ್ದೇಶಕರಾದ ವೆಂಕನಗೌಡ ಪಾಟೀಲ್, ಶಶಿಕಾಂತ ಮಾಲಗತ್ತಿ ಮಾತನಾಡಿ,
ಕರ್ನಾಟಕ ಬ್ಯಾಂಕ್‌ನ್ನು ಕಟ್ಟಿ ಬೆಳೆಸಿದ ಹಿರಿಯರ ನಂಬಿಕೆಗೆ ಪಾತ್ರವಾಗುವಂತೆ ಆಡಳಿತ ನಡೆಸಿದ್ದೇವೆ.ನಮ್ಮ ಅವಧಿಯಲ್ಲಿ ಹೂವಿನ ಹಿಪ್ಪರಗಿಯಲ್ಲಿ ಹೊಸ ಶಾಖೆ, ಮುದ್ದೇಬಿಹಾಳದಲ್ಲಿ ಜನರಿಗೆ ಉಪಯುಕ್ತವಾಗುವಂತಹ ಸಭಾಭವನ ನಿರ್ಮಾಣಕ್ಕೆ ಶ್ರಮಿಸಿದ್ದೇವೆ ಎಂದರು.

ಸಭೆಯಲ್ಲಿ ನಿರ್ದೇಶಕರಾದ ನಾಗಭೂಷಣ ನಾವದಗಿ, ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಮಲ್ಲಿಕಾರ್ಜುನ ಬಿದರಕುಂದಿ, ಗುರುಲಿಂಗಪ್ಪಗೌಡ ಪಾಟೀಲ್ ಮಾತನಾಡಿದರು. ಬ್ಯಾಂಕಿನ ಉಪಾಧ್ಯಕ್ಷ ಸಿ.ಎಲ್.ಬಿರಾದಾರ, ನಿರ್ದೇಶಕರಾದ ರವಿ ಕಮತ, ರಾಜಶೇಖರ ಕರಡ್ಡಿ, ಪ್ರಭುರಾಜ ಕಲ್ಬುರ್ಗಿ, ಸುನೀಲ ಇಲ್ಲೂರ, ಮುತ್ತಣ್ಣ ಕಡಿ ಮೊದಲಾದವರು ಇದ್ದರು.

ಇದೇ ವೇಳೆ ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಅವರ ನಿಧನಕ್ಕೆ ಬ್ಯಾಂಕಿನ ಪರವಾಗಿ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್