ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ; ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ; ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಮುದ್ದೇಬಿಹಾಳ : ನಾವು ಶಿಕ್ಷಣ ಕೊಡುವ ನೆಪದಲ್ಲಿ ನಮ್ಮ ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿದ್ದೇವೆ.ಅವರು ಆಟಗಳಲ್ಲಿ ಭಾಗಿಯಾಗುವ ಸಮಯವನ್ನು ಕಡಿಮೆಗೊಳಿಸಿದ್ದೇವೆ.ಶೇ.95 ಪಡೆದುಕೊಂಡರೂ ಮಗುವಿಗೆ ಪ್ರೋತ್ಸಾಹಿಸದೇ ಶೇ.98 ತಗೆದುಕೊಳ್ಳುವವರೆಗೂ ನಮಗಿಂದು ಸಮಾಧಾನ ಇರುವುದಿಲ್ಲ.ಅಂಕಗಳ ಬೆನ್ನು ಹತ್ತಿದ್ದೇವೆ ಎಂದು ಗದಗನ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಎ.ಎನ್.ನಾಗರಳ್ಳಿ ಹೇಳಿದರು.

ಪಟ್ಟಣದ ಶ್ರೀ ಕೃಷ್ಣ ಮಂಗಲಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿoದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಶೈಕ್ಷಣಿಕ ಕಾರ್ಯಾಗಾರ, ಉತ್ತಮ ಶಿಕ್ಷಕ,ಶಿಕ್ಷಕಿಯರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಉಪನ್ಯಾಸ ನೀಡಿದರು.

ಮಕ್ಕಳನ್ನು ವ್ಯವಹಾರಿಕ ಜ್ಞಾನ ಹೊಂದಿದವರನ್ನಾಗಿ ಬೆಳೆಸಬೇಕು.ಸಚ್ಛಾರಿತ್ರ‍್ಯವಂತರಾಗಲು ಸಲಹೆ ಮಾಡಬೇಕು.ಓದು ಬರಹ ಮುಖ್ಯವಲ್ಲ, ಹೃದಯವೈಶಾಲ್ಯತೆಯುಳ್ಳ ಮಕ್ಕಳನ್ನು ತಯಾರು ಮಾಡಬೇಕು ಎಂದು ಶಿಕ್ಷಕರಿಗೆ ಸಲಹೆ ಮಾಡಿದರು.ಮೌಲ್ಯ ಶಿಕ್ಷಣ ಕೊಡುವ ಕಾರ್ಯ ಮುಖ್ಯವಾಗಿದೆ. ಪ್ರಾಮಾಣಿಕರಾಗಿರುವವರಿಗೆ ಸಮಾಜದಲ್ಲಿ ಬೆಲೆ ಹೆಚ್ಚು ಎಂಬುದನ್ನು ಮರೆಯಬಾರದು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಗದಗ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಎಸ್.ಡಿ.ಗಾಂಜಿ ಮಾತನಾಡಿ,ಸಾವಿತ್ರಿಬಾಯಿ ಫುಲೆ ಎಲ್ಲ ಮಕ್ಕಳಿಗೆ ತಾಯಿಯಾಗಿ ನಾಡಿಗೆ ಅಕ್ಷರದ ಮೂಲಕ ಬೆಳಕು ಕೊಟ್ಟವರು.ಮಹಿಳೆ ಸಮಾಜದಲ್ಲಿ ಮುಖ್ಯವಾಹಿನಿಗೆ ಬಾರದಿರುವ ದಿನಗಳಲ್ಲೇ 18 ಶಾಲೆಗಳನ್ನು ಸ್ಥಾಪನೆ ಮಾಡಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಟ್ಟವರು.ಪತ್ನಿಯ ಹಂಬಲಕ್ಕೆ ಅವರ ಪತಿ ಜ್ಯೋತಿಬಾ ಫುಲೆ ಬೆಂಬಲ ನೀಡಿದರು.ರಾಜಕೀಯ,ಶೈಕ್ಷಣಿಕ,ಸಾಮಾಜಿಕವಾಗಿ ಬೆಳವಣಿಗೆಗೆ ಹೆಣ್ಣು ಮಕ್ಕಳು ಇಂದು ಬೆಳವಣಿಗೆ ಸಾಧಿಸಲು ಅದರಲ್ಲಿ ಸಾವಿತ್ರಿಬಾಯಿ ಫುಲೆ ಪಾತ್ರವಿದೆ ಎಂದರು.

ಕುAಟೋಜಿ ಭಾವೈಕ್ಯತಾ ಮಠದ ಚೆನ್ನವೀರ ಶಿವಾಚಾರ್ಯರು ಮಾತನಾಡಿ, ಸೇವಾ ಅವಧಿಯಲ್ಲಿಯೇ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿ ಕೊಟ್ಟು ಗೌರವಿಸುವ ಕೆಲಸ ಮಾಡುತ್ತಿರುವ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಇನ್ನಷ್ಟು ಉನ್ನತ ಸ್ಥಾನಕ್ಕೆ ಬೆಳೆಯಲಿ.ಸಮಯದ ಪ್ರಜ್ಞೆ,ಅರಿವು ಎಲ್ಲರಲ್ಲೂ ಬರಬೇಕು ಎಂದರು.

ಸಾವಿತ್ರಿಬಾಯಿ ಫುಲೆ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಎಂ.ಜಿ.ವಾಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳೆಯರ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ನೀಡಿರುವ ಕೊಡುಗೆ ಮಾದರಿಯಾದದ್ದು ಅವರ ಹೆಸರಿನಲ್ಲಿ ರಾಜ್ಯ,ರಾಷ್ಟçಮಟ್ಟದಲ್ಲಿ ಸಂಘಗಳು ರಚನೆಗೊಂಡು ಫುಲೆ ದಂಪತಿ ಹೆಸರು ಚಿರಸ್ಥಾಯಿ ಆಗಿದೆ ಎಂದರು.

ಪ್ರಥಮ ದರ್ಜೆ ಗುತ್ತಿಗೆದಾರ ಸಿ.ಬಿ.ಅಸ್ಕಿ ಮಾತನಾಡಿ, ನಾಲ್ಕು ರಾಜ್ಯಗಳಲ್ಲಿ ಗುತ್ತಿಗೆದಾರಿಕೆಯಲ್ಲಿ ಹೆಸರು ಮಾಡಿದ್ದ ಡಿ.ವೈ.ಉಪ್ಪಾರ ಈಚೇಗೆ ನಿಧನರಾಗಿದ್ದು ವಾರ್ಷಿಕ 20 ಸಾವಿರ ಕೋಟಿ ಕೆಲಸಗಳನ್ನು ಅವರು ಮಾಡುತ್ತಿದ್ದರು.ಅಂತಹ ಗುತ್ತಿಗೆದಾರರನ್ನು ಎತ್ತರ ಮಟ್ಟಕ್ಕೆ ಬೆಳೆಯುವಂತೆ ಮಾಡಿದ್ದು ಶಿಕ್ಷಕರ ಮಾರ್ಗದರ್ಶನ ಎಂಬುದನ್ನು ಮರೆಯುವಂತಿಲ್ಲ.ಸಾವಿತ್ರಿಬಾಯಿ ಫುಲೆ ಸಂಘದವರು ಸಂಘದ ಸಭಾಭವನ ಕಟ್ಟಡ ನಿರ್ಮಿಸಲು ಮುಂದಾದರೆ ಅದಕ್ಕೆ ತಮ್ಮಿಂದ ವಯಕ್ತಿಕ ಸಹಕಾರ ಮಾಡುವುದಾಗಿ ಹೇಳಿದರು.

ಗಣ್ಯರಾದ ಐ.ಜಿ.ಬೆನಕೊಪ್ಪ,ಬಿ.ಇ.ಒ ಬಿ.ಎಸ್.ಸಾವಳಗಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಅರವಿಂದ ಹೂಗಾರ, ಬಿಇಒ ಬಿ.ಎಸ್.ಸಾವಳಗಿ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಯಶ್ರೀ ಬೆಣ್ಣಿ, ಸಂಘದ ಜಿಲ್ಲಾಧ್ಯಕ್ಷ ಎ.ಬಿ.ನಾಯಕ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬಿ.ಆರ್.ಸಿ.ಆರ್.ಬಿ.ಧಮ್ಮೂರಮಠ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎo.ಬೆಳಗಲ್, ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಜೆ.ದಖನಿ , ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಎಚ್.ಮುದ್ನೂರ, ಸರ್ಕಾರಿ ನೌಕರರ ಸಂಘದ ಸದಸ್ಯ ಬಿ.ಎಸ್.ಶೇಖಣ್ಣವರ, ಆಲೂರ ಗ್ರಾಪಂ ಅಧ್ಯಕ್ಷೆ ಶೋಭಾ ಶೆಳ್ಳಗಿ,ಎಸ್,ಎಂ,ಪವಾರ,ಮೋಹನ ಚವ್ಹಾಣ ಉಪಸ್ಥಿತರಿದ್ದರು.ಸಂಗಮೇಶ ಶಿವಣಗಿ ಸಂಗಡಿಗರು ಪ್ರಾರ್ಥಿಸಿದರು.ದೀಪಾ ಕೇಶಾಪೂರ ಹಾಗೂ ಆರತಿ ರೂಗಿ ಸ್ವಾಗತಿಸಿದರು.ಬಿ.ಎಂ.ಗದ್ದಿ ಹಾಗೂ ಆರ್.ಬಿ.ಮ್ಯಾಗೇರಿ ನಿರೂಪಿಸಿದರು.ಆರ್.ಬಿ.ಮ್ಯಾಗೇರಿ ವಂದಿಸಿದರು.

ಕಾರ್ಯಕ್ರಮದಲ್ಲಿ ದಾನಿಗಳಾದ ಟಿ.ಎನ್.ರೂಢಗಿ,ಎಫ್.ಎಸ್.ಬಾಗವಾನ,ಶಾರದಾ ಅಡಗಲ್,ಝಡ್.ಬಿ.ಅಗ್ನಿ,ಸುಜಾತಾ ಕಡಿ,ಎಸ್.ಆರ್.ಬಾಗೇವಾಡಿ,ಶ್ರೀಕಾಂತ ಹಡಲಗೇರಿಎಸ್.ಬಿ.ತಳವಾರ,ಎಚ್.ಜಿ.ಗೌರೋಜಿ,ಅಫ್ತಾಬ ಮನಿಯಾರ ಅವರನ್ನು ಸನ್ಮಾನಿಸಲಾಯಿತು.

ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ ಪ್ರದಾನ : ಆಲೂರು ಕ್ಲಸ್ಟರ್‌ನಿಂದ ಪಿ.ಎಸ್.ವಡವಡಗಿ,ಶಕುಂತಲಾ ಇಲಕಲ್, ರಕ್ಕಸಗಿ ಕ್ಲಸ್ಟರ್‌ನಿಂದ ಸಂಗಣ್ಣ ಟಕ್ಕಳಕಿ, ಶರಣಮ್ಮ ಬಿರಾದಾರ, ನಾಲತವಾಡ ಕ್ಲಸ್ಟರ್‌ನಿಂದ ಬಾಬು ಲಮಾಣಿ ಹಾಗೂ ಶೃತಿ ಮುರಾಳ , ತಂಗಡಗಿ ಕ್ಲಸ್ಟರ್‌ನಿಂದ ಪಿ.ಬಿ.ಗುಬಚಿ ಹಾಗೂ ಶಾಂತಾ ರಾಮವಾಡಗಿ, ಇಂಗಳಗೇರಿ ಕ್ಲಸ್ಟರ್‌ನಿಂದ ಲಕ್ಷö್ಮಣ ಚಲವಾದಿ, ಆರ್.ಸಿ.ಸಂಗಮ ,ಯರಝರಿ ಕ್ಲಸ್ಟರ್‌ನಿಂದ ಎಚ್.ಬಿ.ಲಮಾಣಿ, ರುಕ್ಮಿಣಿ ಬಾಟಿ, ಬಳಬಟ್ಟಿ ಕ್ಲಸ್ಟರ್‌ನಿಂದ ರವಿ ಹಿಪ್ಪರಗಿ ಹಾಗೂ ಜಯಶ್ರೀ ಸಾಲಿಮಠ, ಮಡಿಕೇಶ್ವರ ಕ್ಲಸ್ಟರ್‌ನಿಂದ ಎಸ್.ಎಸ್.ಮಠ ಹಾಗೂ ಟಿ.ಡಿ.ರಾಠೋಡ, ಢವಳಗಿ ಕ್ಲಸ್ಟರ್‌ನಿಂದ ಬಸಮ್ಮ ಗುಡದಿನ್ನಿ ಹಾಗೂ ಸಿ.ಪಿ.ಮುತ್ತಿನ,ಬಸರಕೋಡ ಕ್ಲಸ್ಟರ್‌ನಿಂದ ಬಿ.ಎಸ್.ಜಮದರಖಾನಿ ಹಾಗೂ ಕೆ.ಆರ್.ದೊರೆಗೋಳ,ಅಡವಿ ಸೋಮನಾಳ ಕ್ಲಸ್ಟರ್‌ನಿಂದ ಈರಪ್ಪ ಮ್ಯಾಗೇರಿ ಹಾಗೂ ಸುವರ್ಣ ಬಡಿಗೇರ,ಪ್ರಿಯಾಂಕಾ ಮುರಾಳ,ಹಡಲಗೇರಿ ಕ್ಲಸ್ಟರ್‌ನಿಂದ ಸಿ.ಬಿ.ಯರಂತೇಲಿ ಹಾಗೂ ಬಿ.ಎಸ್.ಕಡು, ಹುಲ್ಲೂರ ಕ್ಲಸ್ಟರ್‌ನಿಂದ ವಾಯ್.ಬಿ.ನಾಯ್ಕೋಡಿ ಹಾಗೂ ಹಮೀದಾಬೇಗಂ ನದಾಫ, ಹಿರೇಮುರಾಳ ಕ್ಲಸ್ಟರ್‌ನಿಂದ ಎಚ್.ವಾಯ್.ಗಲಗಲಿ ಹಾಗೂ ಎಸ್.ಎಮ್.ಕಟ್ಟಿಮಠ,ಮುದ್ದೇಬಿಹಾಳ ಉರ್ದು ಕ್ಲಸ್ಟರ್‌ನಿಂದ ರಾವುತಪ್ಪ ಕೂಡಗಿ ಹಾಗೂ ಎಂ.ಎಸ್.ಅತ್ತಾರ,ಎ.ಆಯ್.ಮOದ್ರೂಪ, ಮುದ್ದೇಬಿಹಾಳ ಕ್ಲಸ್ಟರ್‌ದಿಂದ ಶಿವಲಿಂಗೇಶ ಗುಂಡಕನಾಳ,ಎ.ಎo.ಘoಟಿಮಠ,ಶ್ರೀಮತಿ ನಾಗರತ್ನಾ, ಬಿದರಕುಂದಿ ಕ್ಲಸ್ಟರ್‌ನಿಂದ ಜಮಾಲ್‌ಶೇಖ, ಎನ್.ಬಿ.ಪಿಂಜಾರ ಅವರುಗಳಿಗೆ ಸಾವಿತ್ರಿಬಾಯಿ,ಜ್ಯೋತಿಬಾಯಿ ಫುಲೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

NEWS BY: SHANKAR HEBBAL

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ