Scientifically there is no objection to soil transport: What is the share of the officials in the illegal transportation of soil?- Vali question

ವೈಜ್ಞಾನಿಕವಾಗಿ ಮಣ್ಣು ಸಾಗಿಸಲು ವಿರೋಧವಿಲ್ಲ:ಮಣ್ಣು ಅಕ್ರಮ ಸಾಗಾಟದಲ್ಲಿ ಅಧಿಕಾರಿಗಳ ಪಾಲು ಎಷ್ಟು ?- ವಾಲಿ ಪ್ರಶ್ನೆ

ವೈಜ್ಞಾನಿಕವಾಗಿ ಮಣ್ಣು ಸಾಗಿಸಲು ವಿರೋಧವಿಲ್ಲ:ಮಣ್ಣು ಅಕ್ರಮ ಸಾಗಾಟದಲ್ಲಿ ಅಧಿಕಾರಿಗಳ ಪಾಲು ಎಷ್ಟು ?- ವಾಲಿ ಪ್ರಶ್ನೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಹಲವು ದಿನಗಳಿಂದ ನಡೆದಿರುವ ಅಕ್ರಮವಾಗಿ ನದಿ ಪಾತ್ರದ ಮಣ್ಣು ಸಾಗಾಟ ಮಾಡುತ್ತಿರುದನ್ನು ತಡೆಗಟ್ಟದೇ ಯಾಕೆ ತಾಲ್ಲೂಕಾಡಳಿತದ ಅಧಿಕಾರಿಗಳು ಮೌನವಾಗಿದ್ದಾರೆ? ಎಂದು ಯುವಜನ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಪ್ರಶ್ನಿಸಿದರು.

ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ವಿವಿಧ ಸಂಘಟನೆಗಳ ಹೋರಾಟಗಾರರು ಹಮ್ಮಿಕೊಂಡಿದ್ದ ಕೃಷ್ಣಾ ನದಿ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಸಾಗಾಟ ತಡೆಗೆ ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನದಿಪಾತ್ರದ ಮಣ್ಣನ್ನು 20ಕ್ಕೂ ಹೆಚ್ಚು ಟಿಪ್ಪರ್ ಬಳಸಿ ಹಿಟಾಚಿ ಯಂತ್ರದಿಂದ ಸಾಗಿಸಲಾಗುತ್ತಿದೆ. ಆಳವಾದ ಗುಂಡಿಗಳು ಬಿದ್ದಿದ್ದು ಭವಿಷ್ಯದಲ್ಲಿ ನದಿಯ ಹರಿವಿನ ದಿಕ್ಕು ಬದಲಾಗುವ ಸಾಧ್ಯತೆಯೂ ಇದೆ. ಮಣ್ಣು ಗುಣಮಟ್ಟದ್ದಾಗಿದೆಯೋ ಇಲ್ಲವೋ ಎಂಬುದನ್ನು ಕೃಷಿ ವಿಜ್ಞಾನಿಗಳಿಂದ ತಪಾಸಣೆ ಮಾಡಿಸಿದ್ದೀರಾ? ಟಿಪ್ಪರ್ ಒಂದಕ್ಕೆ 2-3 ಸಾವಿರದಂತೆ ರೈತರ ಜಮೀನುಗಳಿಗೆ ಕಾನೂನು ಬದ್ಧವಾಗಿ ಅಧಿಕಾರಿಗಳ ಅನುಮತಿ ಪಡೆದುಕೊಂಡು ಮಣ್ಣು ಸಾಗಿಸಿದರೆ ನಮ್ಮ ವಿರೋಧವಿಲ್ಲ ಎಂದು ಅವರು ಹೇಳಿದರು. ಬಾಲಾಜಿ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಈಗ ಧ್ವನಿ ಎತ್ತುವ ರೈತ ಸಂಘದವರು ಕಾರ್ಖಾನೆ ಎದುರಿಗೆ ಕಬ್ಬು ತೂಕದ ಯಂತ್ರ ಹಾಕುವುದಕ್ಕೆ ಸಿದ್ಧರಿದ್ದರೆ ನಾನು ಕೈ ಜೋಡಿಸುತ್ತೇನೆ. ಯಂತ್ರದಲ್ಲಿ ಆಗುವ ಮೋಸದ ಕುರಿತು ರೈತ ಸಂಘದವರಿಗೆ ಅರಿವು ಇಲ್ಲವೇ? ಅದರ ಬಗ್ಗೆ ಯಾಕೆ ಧ್ವನಿ ಎತ್ತುವುದಿಲ್ಲ ಎಂದು ಪ್ರಶ್ನಿಸಿದರು.

ಹೋರಾಟದ ನೇತೃತ್ವ ವಹಿಸಿದ್ದ ತಂಗಡಗಿ ಗ್ರಾಪಂ ಮಾಜಿ ಅಧ್ಯಕ್ಷ ಸಂಗಯ್ಯ ಸಾರಂಗಮಠ, ವಾಲ್ಮೀಕಿ ಸಮಾಜದ ಯುವ ಮುಖಂಡ ಶಿವು ಕನ್ನೊಳ್ಳಿ ಮಾತನಾಡಿ, ನದಿ ಪಾತ್ರದಲ್ಲಿ ಉಸುಕು ದೊರೆಯುತ್ತಿದ್ದು ರೈತರ ಹೆಸರಲ್ಲಿ ಟಿಪ್ಪರ್ ಮಾಲೀಕರು ಅಕ್ರಮವಾಗಿ ಮಣ್ಣು ಸಾಗಿಸಿ ಲಾಭ ಮಾಡಿಕೊಳ್ಳುತ್ತಿದ್ದಾರೆ. ಅಕ್ರಮವಾಗಿ ಮಣ್ಣು ಸಾಗಿಸಿದರೆ ಭವಿಷ್ಯದಲ್ಲಿ ನದಿ ತೀರದ ಅಕ್ಕಪಕ್ಕದ ಜಮೀನುಗಳಲ್ಲಿ ನೀರಿನ ಬಸಿ ಇಟ್ಟು ಸವಳು ಜವಳು ಸಮಸ್ಯೆ ಸೃಷ್ಟಿಯಾಗುತ್ತದೆ. ನೈಸರ್ಗಿಕ ಸಂಪತ್ತು ಉಳಿಸಬೇಕಾದ ಅಧಿಕಾರಿಗಳು ಒಬ್ಬರ ಮೇಲೊಬ್ಬರು ಬೆರಳು ತೋರಿಸುತ್ತಿದ್ದು ಹೋರಾಟಗಾರರಿಗೂ ರಕ್ಷಣೆ ಕೊಡುತ್ತಿಲ್ಲ ಎಂದು ದೂರಿದರು.

ಧರಣಿ ಸ್ಥಳಕ್ಕೆ ತಹಸೀಲ್ದಾರ್ ಅನುಪಸ್ಥಿತಿಯಲ್ಲಿ ಶಿರಸ್ತೇದಾರ ಎಂ. ಎಸ್. ಬಾಗೇವಾಡಿ ಆಗಮಿಸಿ ತಹಸೀಲ್ದಾರ್‌ರು ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಬರೆದ ಪತ್ರವನ್ನು ನೀಡಿದರು. ಪೊಲೀಸ್ ಇಲಾಖೆಯಿಂದಲೂ ಹೋರಾಟಗಾರ ಸಂಗಯ್ಯ ಸಾರಂಗಮಠ ಅವರಿಗೆ ನೋಟಿಸ್ ನೀಡಲಾಯಿತು. ಹೋರಾಟದಲ್ಲಿ ಅಂಬೇಡ್ಕರ್ ಸೇನೆ ತಾಲ್ಲೂಕು ಅಧ್ಯಕ್ಷ ಪ್ರಕಾಶ ಚಲವಾದಿ, ಚಂದ್ರು ಹಡಪದ, ಅಜಯಕುಮಾರ ಕೋಟಿಖಾನಿ, ಕಾಶಿಮಸಾಬ ಗಂಗೂರ, ಬಾಬು ತೆಗ್ಗಿನಮನಿ, ಗಂಗು ಗಂಗನಗೌಡ್ರ, ರಾಜು ಮಸಿಬಿನಾಳ, ಶಿವು ವಣಕಿಹಾಳ ಮೊದಲಾದವರು ಇದ್ದರು. ತಾಲ್ಲೂಕು ಆಡಳಿತ ಮಣ್ಣು ಅಕ್ರಮ ಸಾಗಾಟದ ಕುರಿತು ಯಾವುದೇ ಕ್ರಮ ಕೈಗೊಳ್ಳದೇ ಮೌನಕ್ಕೆ ಶರಣಾಗಿರುವುದನ್ನು ಖಂಡಿಸಿ ಮೂರು ಕೋತಿಗಳನ್ನು ಚಿತ್ರಿಸಿದ ಬ್ಯಾನರ್ ಅಳವಡಿಸಿ ತಾಲ್ಲೂಕಿನಲ್ಲಿ ಏನೇ ನಡೆದರೂ ಪ್ರಶ್ನಿಸಬಾರದು ಕಿವಿ, ಬಾಯಿ, ಕಣ್ಣು ಮುಚ್ಚಿಕೊಂಡು ಮೌನವಾಗಿರಬೇಕು ಎಂಬಂತೆ ವಿನೂತನವಾಗಿ ಪ್ರತಿಭಟಿಸಲಾಯಿತು.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ