Scientifically there is no objection to soil transport: What is the share of the officials in the illegal transportation of soil?- Vali question

ವೈಜ್ಞಾನಿಕವಾಗಿ ಮಣ್ಣು ಸಾಗಿಸಲು ವಿರೋಧವಿಲ್ಲ:ಮಣ್ಣು ಅಕ್ರಮ ಸಾಗಾಟದಲ್ಲಿ ಅಧಿಕಾರಿಗಳ ಪಾಲು ಎಷ್ಟು ?- ವಾಲಿ ಪ್ರಶ್ನೆ

ವೈಜ್ಞಾನಿಕವಾಗಿ ಮಣ್ಣು ಸಾಗಿಸಲು ವಿರೋಧವಿಲ್ಲ:ಮಣ್ಣು ಅಕ್ರಮ ಸಾಗಾಟದಲ್ಲಿ ಅಧಿಕಾರಿಗಳ ಪಾಲು ಎಷ್ಟು ?- ವಾಲಿ ಪ್ರಶ್ನೆ

Ad
Ad

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಹಲವು ದಿನಗಳಿಂದ ನಡೆದಿರುವ ಅಕ್ರಮವಾಗಿ ನದಿ ಪಾತ್ರದ ಮಣ್ಣು ಸಾಗಾಟ ಮಾಡುತ್ತಿರುದನ್ನು ತಡೆಗಟ್ಟದೇ ಯಾಕೆ ತಾಲ್ಲೂಕಾಡಳಿತದ ಅಧಿಕಾರಿಗಳು ಮೌನವಾಗಿದ್ದಾರೆ? ಎಂದು ಯುವಜನ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಪ್ರಶ್ನಿಸಿದರು.

Ad
Ad

ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ವಿವಿಧ ಸಂಘಟನೆಗಳ ಹೋರಾಟಗಾರರು ಹಮ್ಮಿಕೊಂಡಿದ್ದ ಕೃಷ್ಣಾ ನದಿ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಸಾಗಾಟ ತಡೆಗೆ ಆಗ್ರಹಿಸಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನದಿಪಾತ್ರದ ಮಣ್ಣನ್ನು 20ಕ್ಕೂ ಹೆಚ್ಚು ಟಿಪ್ಪರ್ ಬಳಸಿ ಹಿಟಾಚಿ ಯಂತ್ರದಿಂದ ಸಾಗಿಸಲಾಗುತ್ತಿದೆ. ಆಳವಾದ ಗುಂಡಿಗಳು ಬಿದ್ದಿದ್ದು ಭವಿಷ್ಯದಲ್ಲಿ ನದಿಯ ಹರಿವಿನ ದಿಕ್ಕು ಬದಲಾಗುವ ಸಾಧ್ಯತೆಯೂ ಇದೆ. ಮಣ್ಣು ಗುಣಮಟ್ಟದ್ದಾಗಿದೆಯೋ ಇಲ್ಲವೋ ಎಂಬುದನ್ನು ಕೃಷಿ ವಿಜ್ಞಾನಿಗಳಿಂದ ತಪಾಸಣೆ ಮಾಡಿಸಿದ್ದೀರಾ? ಟಿಪ್ಪರ್ ಒಂದಕ್ಕೆ 2-3 ಸಾವಿರದಂತೆ ರೈತರ ಜಮೀನುಗಳಿಗೆ ಕಾನೂನು ಬದ್ಧವಾಗಿ ಅಧಿಕಾರಿಗಳ ಅನುಮತಿ ಪಡೆದುಕೊಂಡು ಮಣ್ಣು ಸಾಗಿಸಿದರೆ ನಮ್ಮ ವಿರೋಧವಿಲ್ಲ ಎಂದು ಅವರು ಹೇಳಿದರು. ಬಾಲಾಜಿ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಈಗ ಧ್ವನಿ ಎತ್ತುವ ರೈತ ಸಂಘದವರು ಕಾರ್ಖಾನೆ ಎದುರಿಗೆ ಕಬ್ಬು ತೂಕದ ಯಂತ್ರ ಹಾಕುವುದಕ್ಕೆ ಸಿದ್ಧರಿದ್ದರೆ ನಾನು ಕೈ ಜೋಡಿಸುತ್ತೇನೆ. ಯಂತ್ರದಲ್ಲಿ ಆಗುವ ಮೋಸದ ಕುರಿತು ರೈತ ಸಂಘದವರಿಗೆ ಅರಿವು ಇಲ್ಲವೇ? ಅದರ ಬಗ್ಗೆ ಯಾಕೆ ಧ್ವನಿ ಎತ್ತುವುದಿಲ್ಲ ಎಂದು ಪ್ರಶ್ನಿಸಿದರು.

ಹೋರಾಟದ ನೇತೃತ್ವ ವಹಿಸಿದ್ದ ತಂಗಡಗಿ ಗ್ರಾಪಂ ಮಾಜಿ ಅಧ್ಯಕ್ಷ ಸಂಗಯ್ಯ ಸಾರಂಗಮಠ, ವಾಲ್ಮೀಕಿ ಸಮಾಜದ ಯುವ ಮುಖಂಡ ಶಿವು ಕನ್ನೊಳ್ಳಿ ಮಾತನಾಡಿ, ನದಿ ಪಾತ್ರದಲ್ಲಿ ಉಸುಕು ದೊರೆಯುತ್ತಿದ್ದು ರೈತರ ಹೆಸರಲ್ಲಿ ಟಿಪ್ಪರ್ ಮಾಲೀಕರು ಅಕ್ರಮವಾಗಿ ಮಣ್ಣು ಸಾಗಿಸಿ ಲಾಭ ಮಾಡಿಕೊಳ್ಳುತ್ತಿದ್ದಾರೆ. ಅಕ್ರಮವಾಗಿ ಮಣ್ಣು ಸಾಗಿಸಿದರೆ ಭವಿಷ್ಯದಲ್ಲಿ ನದಿ ತೀರದ ಅಕ್ಕಪಕ್ಕದ ಜಮೀನುಗಳಲ್ಲಿ ನೀರಿನ ಬಸಿ ಇಟ್ಟು ಸವಳು ಜವಳು ಸಮಸ್ಯೆ ಸೃಷ್ಟಿಯಾಗುತ್ತದೆ. ನೈಸರ್ಗಿಕ ಸಂಪತ್ತು ಉಳಿಸಬೇಕಾದ ಅಧಿಕಾರಿಗಳು ಒಬ್ಬರ ಮೇಲೊಬ್ಬರು ಬೆರಳು ತೋರಿಸುತ್ತಿದ್ದು ಹೋರಾಟಗಾರರಿಗೂ ರಕ್ಷಣೆ ಕೊಡುತ್ತಿಲ್ಲ ಎಂದು ದೂರಿದರು.

ಧರಣಿ ಸ್ಥಳಕ್ಕೆ ತಹಸೀಲ್ದಾರ್ ಅನುಪಸ್ಥಿತಿಯಲ್ಲಿ ಶಿರಸ್ತೇದಾರ ಎಂ. ಎಸ್. ಬಾಗೇವಾಡಿ ಆಗಮಿಸಿ ತಹಸೀಲ್ದಾರ್‌ರು ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಬರೆದ ಪತ್ರವನ್ನು ನೀಡಿದರು. ಪೊಲೀಸ್ ಇಲಾಖೆಯಿಂದಲೂ ಹೋರಾಟಗಾರ ಸಂಗಯ್ಯ ಸಾರಂಗಮಠ ಅವರಿಗೆ ನೋಟಿಸ್ ನೀಡಲಾಯಿತು. ಹೋರಾಟದಲ್ಲಿ ಅಂಬೇಡ್ಕರ್ ಸೇನೆ ತಾಲ್ಲೂಕು ಅಧ್ಯಕ್ಷ ಪ್ರಕಾಶ ಚಲವಾದಿ, ಚಂದ್ರು ಹಡಪದ, ಅಜಯಕುಮಾರ ಕೋಟಿಖಾನಿ, ಕಾಶಿಮಸಾಬ ಗಂಗೂರ, ಬಾಬು ತೆಗ್ಗಿನಮನಿ, ಗಂಗು ಗಂಗನಗೌಡ್ರ, ರಾಜು ಮಸಿಬಿನಾಳ, ಶಿವು ವಣಕಿಹಾಳ ಮೊದಲಾದವರು ಇದ್ದರು. ತಾಲ್ಲೂಕು ಆಡಳಿತ ಮಣ್ಣು ಅಕ್ರಮ ಸಾಗಾಟದ ಕುರಿತು ಯಾವುದೇ ಕ್ರಮ ಕೈಗೊಳ್ಳದೇ ಮೌನಕ್ಕೆ ಶರಣಾಗಿರುವುದನ್ನು ಖಂಡಿಸಿ ಮೂರು ಕೋತಿಗಳನ್ನು ಚಿತ್ರಿಸಿದ ಬ್ಯಾನರ್ ಅಳವಡಿಸಿ ತಾಲ್ಲೂಕಿನಲ್ಲಿ ಏನೇ ನಡೆದರೂ ಪ್ರಶ್ನಿಸಬಾರದು ಕಿವಿ, ಬಾಯಿ, ಕಣ್ಣು ಮುಚ್ಚಿಕೊಂಡು ಮೌನವಾಗಿರಬೇಕು ಎಂಬಂತೆ ವಿನೂತನವಾಗಿ ಪ್ರತಿಭಟಿಸಲಾಯಿತು.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ