Scrutiny of documents by teachers in front of BEO

ಬಿಇಒ ಎದುರಲ್ಲೇ ಶಿಕ್ಷಕರಿಂದ ದಾಖಲೆಗಳ ತಪಾಸಣೆ: ಕೊಕ್ಕೊ ಪಂದ್ಯಾವಳಿ-ಮೈಲೇಶ್ವರದ ಬ್ರಿಲಿಯಂಟ್ ಶಾಲೆಯದ್ದೇ ಗೆಲುವು

ಬಿಇಒ ಎದುರಲ್ಲೇ ಶಿಕ್ಷಕರಿಂದ ದಾಖಲೆಗಳ ತಪಾಸಣೆ: ಕೊಕ್ಕೊ ಪಂದ್ಯಾವಳಿ-ಮೈಲೇಶ್ವರದ ಬ್ರಿಲಿಯಂಟ್ ಶಾಲೆಯದ್ದೇ ಗೆಲುವು

ಮುದ್ದೇಬಿಹಾಳ : ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಕೊಕ್ಕೊ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ನಾಗಬೇನಾಳ ಹಾಗೂ ಮೈಲೇಶ್ವರ ತಂಡಗಳ ಮಧ್ಯೆ ನಡೆದಿದ್ದ ವಿವಾದದ ಕುರಿತು ಅಂತಿಮ ಫಲಿತಾಂಶ ಪ್ರಕಟಿಸಲಾಗಿದ್ದು ತಾಳಿಕೋಟಿ ತಾಲ್ಲೂಕು ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿಗಳು ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ತಾಲ್ಲೂಕು ಕ್ರೀಡಾ ಸಮಿತಿ ಅಧ್ಯಕ್ಷ,ಬಿಇಒ ಬಿ.ಎಸ್.ಸಾವಳಗಿ ತಿಳಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಬಿಇಒ ಕಚೇರಿಯ ಎದುರಿಗೆ ಶನಿವಾರ ನಾಗಬೇನಾಳದ ಕೆಲವು ಯುವಕರೊಂದಿಗೆ ಕೊಕ್ಕೊ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಕರೆತಂದು ತಮಗೆ ಫೈನಲ್ ಪಂದ್ಯದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ಆರಂಭಿಸಿದ್ದರು.

ಕೊಕ್ಕೊ ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವ ಮೈಲೇಶ್ವರ ಶಾಲೆಯ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲನೆ ನಡೆಸಬೇಕು ಎಂದು ಪಟ್ಟು ಹಿಡಿದಿದ್ದರು.

ಬಿಇಒ ಅವರ ಸೂಚನೆ ಮೇರೆಗೆ ಇದಕ್ಕೆ ಸಹಮತ ವ್ಯಕ್ತಪಡಿಸಿದ ಮೈಲೇಶ್ವರ ಬ್ರಿಲಿಯಂಟ್ ಶಾಲೆಯ ಅಧ್ಯಕ್ಷ ನಾನಾಗೌಡ ನಡುವಿನಮನಿ, ಸಿಬ್ಬಂದಿ ಚನ್ನಬಸವ ಮೂಲಿಮನಿ ಆಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಎಸ್.ಟಿ.ಎಸ್ ಸಂಖ್ಯೆ, ಅಸಲಿ ಆಧಾರ್ ಕಾರ್ಡ ಹಾಗೂ ಆಟಗಾರರ ಪ್ರವೇಶ ಪತ್ರದ ಅರ್ಜಿಗಳನ್ನು ನಾಗಬೇನಾಳ ಶಾಲೆಯ ಶಿಕ್ಷಕ ಅಣ್ಣಪ್ಪ ಅವರ ಎದುರಿಗೆ ತಂದು ಪರಿಶೀಲನೆ ನಡೆಸಲು ತಿಳಿಸಿದರು.

ಬಿಆರ್‌ಸಿ ಯು.ಬಿ.ಧರಿಕಾರ, ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಬಿ.ಎಸ್.ಹೊಳಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ,ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರುಡಗಿ, ಶಿಕ್ಷಕ ಲೋಹಿತ ಭೋವಿ, ಸಂಗಮೇಶ ನವಲಿ ಹಾಗೂ ನಾಗಬೇನಾಳದ ಯುವಕರ ಸಮ್ಮುಖದಲ್ಲಿ ಮೈಲೇಶ್ವರ ಶಾಲೆಯ ವಿದ್ಯಾರ್ಥಿಗಳ ದಾಖಲೆಗಳನ್ನು ತಪಾಸಣೆ ನಡೆಸಲಾಯಿತು. ಆಗ ನಾಗಬೇನಾಳ ಶಾಲೆಯ ಶಿಕ್ಷಕ ಅಣ್ಣಪ್ಪ , ಎಲ್ಲ ದಾಖಲೆಗಳು ಶಾಲೆಯ ದಾಖಲೆಗಳಿಗೆ ಸರಿ ಹೊಂದುತ್ತಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಇಒ ಬಿ.ಎಸ್. ಸಾವಳಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ, ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರುಡಗಿ ಮತ್ತಿತರರು, ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿಗಳ ದಾಖಲೆಗಳು ಸರಿ ಇದ್ದು ಅವರೇ ಫೈನಲ್ ಪಂದ್ಯದಲ್ಲಿ ವಿಜಯಶಾಲಿಯಾಗಿದ್ದಾರೆ. ನಾಗಬೇನಾಳದ ಶಾಲೆಯ ವಿದ್ಯಾರ್ಥಿಗಳು, ಯುವಕರ ಆಪಾದನೆಯಲ್ಲಿ ಹುರುಳಿಲ್ಲ ಎಂದು ತಿಳಿಸಿದರು.

ಗೂಡ್ಸ್ ವಾಹನದಲ್ಲಿ ಬಂದು ಹಸಿವಿನಿಂದ ಕಂಗೆಟ್ಟ ವಿದ್ಯಾರ್ಥಿಗಳು

ತಮಗೆ ಫೈನಲ್ ಪಂದ್ಯಾವಳಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಕೆಲವು ಯುವಕರ ಮಾತು ಕೇಳಿಕೊಂಡು ಬಿಇಒ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದ ಕೊಕ್ಕೊ ತಂಡದಲ್ಲಿ ಪಾಲ್ಗೊಂಡಿದ್ದ ನಾಗಬೇನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಗೂಡ್ಸ್ ವಾಹನದಲ್ಲಿ ಅಸುರಕ್ಷಿತ ರೀತಿಯಲ್ಲಿ ಕರೆತಂದಿರುವುದು ಕಂಡು ಬಂದಿತು.

ವಿದ್ಯಾರ್ಥಿಗಳನ್ನು ಪಾಲಕರ, ಶಿಕ್ಷಕರ ಪೂರ್ವಾನುಮತಿ ಇಲ್ಲದೇ ಪ್ರತಿಭಟನೆಗೆ ಕಳಿಸಿಕೊಟ್ಟವರು ಯಾರು? ಎಂಬ ಬಗ್ಗೆ ಕೊನೆಯವರೆಗೂ ಸ್ಪಷ್ಟತೆ ದೊರೆಯಲಿಲ್ಲ. ಅಲ್ಲದೇ ನಾಲ್ಕು ತಾಸುಗಳ ಕಾಲ ಬಿಇಒ ಕಚೇರಿ ಆವರಣದಲ್ಲಿ ವಿದ್ಯಾರ್ಥಿಗಳು ಹಸಿವಿನಿಂದ ಬಳಲಿದರು.

ಪ್ರತಿಭಟನೆಗೆ ಕರೆತಂದಿದ್ದ ಯುವಕರಲ್ಲಿ ಕೊಕ್ಕೊ ಪಂದ್ಯಾವಳಿಯಲ್ಲಿ ಅನ್ಯಾಯ ಮಾಡಿದ ಕುರಿತಾಗಿ ಆಪಾದನೆ ಮಾಡಿದ ಬಗ್ಗೆ ಯಾವುದೇ ಅಧಿಕೃತ ದಾಖಲೆ ಇಲ್ಲದೇ ಇರುವುದು ಯಾರೋ ಹೇಳಿದ್ದನ್ನು ತಂದು ಆರೋಪಿಸಲು ಮುಂದಾಗಿದ್ದು ನಾಗಬೇನಾಳ ಯುವಕರ, ವಿದ್ಯಾರ್ಥಿಗಳ ಪ್ರತಿಭಟನೆ ಪ್ರತಿಷ್ಠೆಗಾಗಿ ಮಾಡಿದಂತೆ ಕಂಡು ಬಂದಿತು. ಅಚ್ಚರಿಯ ಸಂಗತಿ ಎಂದರೆ ಶಾಲೆಯ ಮಹತ್ವದ ದಾಖಲೆ ಇಟ್ಟಿದ್ದರೆನ್ನಲಾದ ಚೀಲವೊಂದನ್ನು ವಿದ್ಯಾರ್ಥಿಯ ಕೈಗೆ ಕೊಟ್ಟಿದ್ದು ಆ ಶಾಲೆಯ ಶಿಕ್ಷಕರ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಯಿತು.

ಪ್ರತಿಭಟನೆ ನಡೆದರೂ ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವೈ.ಕವಡಿ ಕೊನೆಯ ಕ್ಷಣದವರೆಗೂ ಕಚೇರಿ ಹತ್ತಿರವೇ ಸುಳಿಯಲಿಲ್ಲ. ತಾಳಿಕೋಟಿಯಲ್ಲಿ ದಸರಾ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದಾಗಿ ಸುದ್ದಿಗಾರರಿಗೆ ಕರೆ ಮಾಡಿದಾಗ ತಿಳಿಸಿದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು