Scrutiny of documents by teachers in front of BEO

ಬಿಇಒ ಎದುರಲ್ಲೇ ಶಿಕ್ಷಕರಿಂದ ದಾಖಲೆಗಳ ತಪಾಸಣೆ: ಕೊಕ್ಕೊ ಪಂದ್ಯಾವಳಿ-ಮೈಲೇಶ್ವರದ ಬ್ರಿಲಿಯಂಟ್ ಶಾಲೆಯದ್ದೇ ಗೆಲುವು

ಬಿಇಒ ಎದುರಲ್ಲೇ ಶಿಕ್ಷಕರಿಂದ ದಾಖಲೆಗಳ ತಪಾಸಣೆ: ಕೊಕ್ಕೊ ಪಂದ್ಯಾವಳಿ-ಮೈಲೇಶ್ವರದ ಬ್ರಿಲಿಯಂಟ್ ಶಾಲೆಯದ್ದೇ ಗೆಲುವು

ಮುದ್ದೇಬಿಹಾಳ : ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಕೊಕ್ಕೊ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ನಾಗಬೇನಾಳ ಹಾಗೂ ಮೈಲೇಶ್ವರ ತಂಡಗಳ ಮಧ್ಯೆ ನಡೆದಿದ್ದ ವಿವಾದದ ಕುರಿತು ಅಂತಿಮ ಫಲಿತಾಂಶ ಪ್ರಕಟಿಸಲಾಗಿದ್ದು ತಾಳಿಕೋಟಿ ತಾಲ್ಲೂಕು ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿಗಳು ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ತಾಲ್ಲೂಕು ಕ್ರೀಡಾ ಸಮಿತಿ ಅಧ್ಯಕ್ಷ,ಬಿಇಒ ಬಿ.ಎಸ್.ಸಾವಳಗಿ ತಿಳಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಬಿಇಒ ಕಚೇರಿಯ ಎದುರಿಗೆ ಶನಿವಾರ ನಾಗಬೇನಾಳದ ಕೆಲವು ಯುವಕರೊಂದಿಗೆ ಕೊಕ್ಕೊ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಕರೆತಂದು ತಮಗೆ ಫೈನಲ್ ಪಂದ್ಯದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ಆರಂಭಿಸಿದ್ದರು.

ಕೊಕ್ಕೊ ಪಂದ್ಯಾವಳಿಯಲ್ಲಿ ಪಾಲ್ಗೊಂಡಿರುವ ಮೈಲೇಶ್ವರ ಶಾಲೆಯ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲನೆ ನಡೆಸಬೇಕು ಎಂದು ಪಟ್ಟು ಹಿಡಿದಿದ್ದರು.

ಬಿಇಒ ಅವರ ಸೂಚನೆ ಮೇರೆಗೆ ಇದಕ್ಕೆ ಸಹಮತ ವ್ಯಕ್ತಪಡಿಸಿದ ಮೈಲೇಶ್ವರ ಬ್ರಿಲಿಯಂಟ್ ಶಾಲೆಯ ಅಧ್ಯಕ್ಷ ನಾನಾಗೌಡ ನಡುವಿನಮನಿ, ಸಿಬ್ಬಂದಿ ಚನ್ನಬಸವ ಮೂಲಿಮನಿ ಆಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಎಸ್.ಟಿ.ಎಸ್ ಸಂಖ್ಯೆ, ಅಸಲಿ ಆಧಾರ್ ಕಾರ್ಡ ಹಾಗೂ ಆಟಗಾರರ ಪ್ರವೇಶ ಪತ್ರದ ಅರ್ಜಿಗಳನ್ನು ನಾಗಬೇನಾಳ ಶಾಲೆಯ ಶಿಕ್ಷಕ ಅಣ್ಣಪ್ಪ ಅವರ ಎದುರಿಗೆ ತಂದು ಪರಿಶೀಲನೆ ನಡೆಸಲು ತಿಳಿಸಿದರು.

ಬಿಆರ್‌ಸಿ ಯು.ಬಿ.ಧರಿಕಾರ, ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಬಿ.ಎಸ್.ಹೊಳಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ,ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರುಡಗಿ, ಶಿಕ್ಷಕ ಲೋಹಿತ ಭೋವಿ, ಸಂಗಮೇಶ ನವಲಿ ಹಾಗೂ ನಾಗಬೇನಾಳದ ಯುವಕರ ಸಮ್ಮುಖದಲ್ಲಿ ಮೈಲೇಶ್ವರ ಶಾಲೆಯ ವಿದ್ಯಾರ್ಥಿಗಳ ದಾಖಲೆಗಳನ್ನು ತಪಾಸಣೆ ನಡೆಸಲಾಯಿತು. ಆಗ ನಾಗಬೇನಾಳ ಶಾಲೆಯ ಶಿಕ್ಷಕ ಅಣ್ಣಪ್ಪ , ಎಲ್ಲ ದಾಖಲೆಗಳು ಶಾಲೆಯ ದಾಖಲೆಗಳಿಗೆ ಸರಿ ಹೊಂದುತ್ತಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಇಒ ಬಿ.ಎಸ್. ಸಾವಳಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ, ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರುಡಗಿ ಮತ್ತಿತರರು, ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿಗಳ ದಾಖಲೆಗಳು ಸರಿ ಇದ್ದು ಅವರೇ ಫೈನಲ್ ಪಂದ್ಯದಲ್ಲಿ ವಿಜಯಶಾಲಿಯಾಗಿದ್ದಾರೆ. ನಾಗಬೇನಾಳದ ಶಾಲೆಯ ವಿದ್ಯಾರ್ಥಿಗಳು, ಯುವಕರ ಆಪಾದನೆಯಲ್ಲಿ ಹುರುಳಿಲ್ಲ ಎಂದು ತಿಳಿಸಿದರು.

ಗೂಡ್ಸ್ ವಾಹನದಲ್ಲಿ ಬಂದು ಹಸಿವಿನಿಂದ ಕಂಗೆಟ್ಟ ವಿದ್ಯಾರ್ಥಿಗಳು

ತಮಗೆ ಫೈನಲ್ ಪಂದ್ಯಾವಳಿಯಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಕೆಲವು ಯುವಕರ ಮಾತು ಕೇಳಿಕೊಂಡು ಬಿಇಒ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದ ಕೊಕ್ಕೊ ತಂಡದಲ್ಲಿ ಪಾಲ್ಗೊಂಡಿದ್ದ ನಾಗಬೇನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಗೂಡ್ಸ್ ವಾಹನದಲ್ಲಿ ಅಸುರಕ್ಷಿತ ರೀತಿಯಲ್ಲಿ ಕರೆತಂದಿರುವುದು ಕಂಡು ಬಂದಿತು.

ವಿದ್ಯಾರ್ಥಿಗಳನ್ನು ಪಾಲಕರ, ಶಿಕ್ಷಕರ ಪೂರ್ವಾನುಮತಿ ಇಲ್ಲದೇ ಪ್ರತಿಭಟನೆಗೆ ಕಳಿಸಿಕೊಟ್ಟವರು ಯಾರು? ಎಂಬ ಬಗ್ಗೆ ಕೊನೆಯವರೆಗೂ ಸ್ಪಷ್ಟತೆ ದೊರೆಯಲಿಲ್ಲ. ಅಲ್ಲದೇ ನಾಲ್ಕು ತಾಸುಗಳ ಕಾಲ ಬಿಇಒ ಕಚೇರಿ ಆವರಣದಲ್ಲಿ ವಿದ್ಯಾರ್ಥಿಗಳು ಹಸಿವಿನಿಂದ ಬಳಲಿದರು.

ಪ್ರತಿಭಟನೆಗೆ ಕರೆತಂದಿದ್ದ ಯುವಕರಲ್ಲಿ ಕೊಕ್ಕೊ ಪಂದ್ಯಾವಳಿಯಲ್ಲಿ ಅನ್ಯಾಯ ಮಾಡಿದ ಕುರಿತಾಗಿ ಆಪಾದನೆ ಮಾಡಿದ ಬಗ್ಗೆ ಯಾವುದೇ ಅಧಿಕೃತ ದಾಖಲೆ ಇಲ್ಲದೇ ಇರುವುದು ಯಾರೋ ಹೇಳಿದ್ದನ್ನು ತಂದು ಆರೋಪಿಸಲು ಮುಂದಾಗಿದ್ದು ನಾಗಬೇನಾಳ ಯುವಕರ, ವಿದ್ಯಾರ್ಥಿಗಳ ಪ್ರತಿಭಟನೆ ಪ್ರತಿಷ್ಠೆಗಾಗಿ ಮಾಡಿದಂತೆ ಕಂಡು ಬಂದಿತು. ಅಚ್ಚರಿಯ ಸಂಗತಿ ಎಂದರೆ ಶಾಲೆಯ ಮಹತ್ವದ ದಾಖಲೆ ಇಟ್ಟಿದ್ದರೆನ್ನಲಾದ ಚೀಲವೊಂದನ್ನು ವಿದ್ಯಾರ್ಥಿಯ ಕೈಗೆ ಕೊಟ್ಟಿದ್ದು ಆ ಶಾಲೆಯ ಶಿಕ್ಷಕರ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಯಿತು.

ಪ್ರತಿಭಟನೆ ನಡೆದರೂ ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವೈ.ಕವಡಿ ಕೊನೆಯ ಕ್ಷಣದವರೆಗೂ ಕಚೇರಿ ಹತ್ತಿರವೇ ಸುಳಿಯಲಿಲ್ಲ. ತಾಳಿಕೋಟಿಯಲ್ಲಿ ದಸರಾ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದಾಗಿ ಸುದ್ದಿಗಾರರಿಗೆ ಕರೆ ಮಾಡಿದಾಗ ತಿಳಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ