ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.
ಪರೀಕ್ಷೆಗೆ ಕೂತಿದ್ದ 229 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಅದರಲ್ಲಿ ಆಸೀಫಾ ಕಾಶೀಮ್ ಖತೀಬ ಶೇ.98ರಷ್ಟು ಅಂಕ ಪಡೆದು ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಇನ್ನುಳಿದAತೆ ಶೇ.97.83 ಅಂಕ ಪಡೆದ ಲಕ್ಷಿö್ಮÃ ಉಂಡಿ ದ್ವಿತೀಯ,ಶೇ.97.33 ಅಂಕ ಪಡೆದ ಸುಷ್ಮಿತಾ ದನ್ನೂರ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.ಉತ್ತೀರ್ಣರಾದ 229ರಲ್ಲಿ ಅದರಲ್ಲಿ 142 ಡಿಸ್ಟಿಂಕ್ಷನ್,76 ಪ್ರಥಮ,11 ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಗಣಿತದಲ್ಲಿ 54,ಬಯೋಲಜಿ 48,ಫಿಸಿಕ್ಸ್ 32,ಕೆಮಿಸ್ಟಿç 6,ಕನ್ನಡದಲ್ಲಿ 8 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಪಡೆದುಕೊಂಡಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ,ಆಡಳಿತಾಧಿಕಾರಿ ಕಿರಣ ಮದರಿ,ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ,ಪ್ರಾಚಾರ್ಯ ಎಂ.ಎA.ಧನ್ನೂರ,ಮಾರ್ಗದರ್ಶಕರಾದ ರವಿ ಜಗಲಿ,ಬಸವರಾಜ ಗೂಡಲಮನಿ ಹಾಗೂ ಉಪನ್ಯಾಸಕರು,ಸಿಬ್ಬಂದಿ ಮೊದಲಾದವರು ಅಭಿನಂದಿಸಿದ್ದಾರೆ.


ಫಲಿತಾಂಶ ಖುಷಿ ತಂದಿದೆ :
ಪ್ರತಿಭಾವಂತರು ಶಿಕ್ಷಣದಿಂದ ವಂಚಿತರಾಗಬಾರದು-ಎಂ.ಎನ್.ಮದರಿ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಬಡ ಪ್ರತಿಭಾವಂತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ತಾಲ್ಲೂಕಿನ ಮೂರು ಕಡೆ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿದ್ದೇವೆ.ಇಂದು ಮಕ್ಕಳು ಉತ್ತಮ ಫಲಿತಾಂಶ ಸಾಧನೆ ಮಾಡುವ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸುತ್ತಿದ್ದಾರೆ ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು.

ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪಿಯು ಟಾಪರ್‌ಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.2016ರಲ್ಲಿ ಕಾಲೇಜಿಗೆ ಅನುಮತಿ ಪಡೆದುಕೊಂಡಿದ್ದೇವು.2017ರಲ್ಲಿ ಶೇ.60 ರಷ್ಟು ಮಾತ್ರ ಫಲಿತಾಂಶ ಕಾಲೇಜು ದಾಖಲಿಸಿತ್ತು.ಆದರೆ ಮುಂದಿನ ವರ್ಷಗಳಲ್ಲಿ ಶೇ.100ರಷ್ಟು ಫಲಿತಾಂಶ ದಾಖಲಿಸಿದ್ದು ಜನರ ಪ್ರೀತಿಗೆ ಪಾತ್ರವಾಗಿದೆ.ಶೇ.98 ರಷ್ಟು ಅಂಕ ಪಡೆದು ಆಸೀಫಾ ಖತೀಬ್ ಮುದ್ದೇಬಿಹಾಳ ನಗರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.ಅವರ ಪಾಲಕರು ಕೂಲಿಕಾರ್ಮಿಕರಿದ್ದು ಅವರ ಸಾಧನೆ ಹೆಮ್ಮೆ ತರಿಸಿದೆ ಎಂದು ಹೇಳಿದರು.

ಪಿಯುಸಿ ಟಾಪರ್ ಆಸೀಫಾ ಖಾತೀಬ್ ಮಾತನಾಡಿ, ಬೆಳಗಿನ ಜಾವವೇ ನಾನು ಓದುತ್ತಿದ್ದೆ.ತಂದೆ ತಾಯಿ ಬೆಂಬಲದಿAದ ಹಾಗೂ ಸಂಸ್ಥೆಯ ಪ್ರೋತ್ಸಾಹದಿಂದ ಈ ಸಾಧನೆ ಸಾಧ್ಯವಾಗಿದೆ ಎಂದರು.

ಇನ್ನೋರ್ವ ವಿದ್ಯಾರ್ಥಿನಿ ಸುಷ್ಮಿತಾ ದನ್ನೂರ ಮಾತನಾಡಿ, ಹಾಸ್ಟೆಲ್‌ನಲ್ಲಿದ್ದು ಓದಿ ಶೇ.97.33ರಷ್ಟು ಅಂಕ ಪಡೆದುಕೊಂಡಿದ್ದೇನೆ.ಇದಕ್ಕೆ ನನ್ನ ಬಡತನ ಎಂದಿಗೂ ಅಡ್ಡಿಯಾಗಲಿಲ್ಲ.ಓದಬೇಕು ಎಂಬ ಛಲ ಈ ಸಾಧನೆ ಮಾಡಲು ಕಾರಣವಾಗಿದೆ ಎಂದು ತಿಳಿಸಿದರು.

ಆಡಳಿತಾಧಿಕಾರಿ ಕಿರಣ್ ಮದರಿ, ಕಾಲೇಜಿನ ಪ್ರಾಚಾರ್ಯ ಎಂ.ಎಂ.ಧನ್ನೂರ,ಪಾಲಕ ಪ್ರತಿನಿಧಿ ಕಾಶೀಮ ಖತೀಬ್ ಮಾತನಾಡಿದರು. ಮಾರ್ಗದರ್ಶಕ ರವಿ ಜಗಲಿ,ಬಸವರಾಜ ಗೂಡ್ಲಮನಿ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರು,ಮುಖ್ಯಗುರು ವಿರೇಶ ಹುಲಿಕೇರಿ, ಪ್ರೊ.ಗುರು,ಪ್ರಶಾಂತ ಬಿರಾದಾರ, ನಾಗರಾಜ,ನವೀನ,ರಂಗಸ್ವಾಮಿ ಇದ್ದರು.ವಿದ್ಯಾರ್ಥಿಗಳಿಗೆ ಇದೇ ವೇಳೆಸಂಸ್ಥೆಯಿoದ ಸನ್ಮಾನಿಸಿ ಸಿಹಿ ನೀಡಿ ಗೌರವಿಸಲಾಯಿತು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ