BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

ಬೆಳಗಾವಿ: ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ ಪಟ್ಟಾಭಿಷೇಕ ಆದ ನಂತರ ಬಿಜೆಪಿಯಲ್ಲಿ ಅತೃಪ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ಕುಟುಂಬ ರಾಜಕಾರಣ, ಹಣ ಆಮಿಷಕ್ಕೆ ನಿಷ್ಠಾವಂತ ಕಾರ್ಯಕರ್ತರನ್ನು ಬಲಿಕೊಟ್ಟು, ಹಣ ಇದ್ದರೆ ಸಾಕು ಎಂತಹ ಅನರ್ಹರಿಗೂ ಟಿಕೆಟ್ ನೀಡಲಾಗುತ್ತಿದೆ ಎಂಬ ಆಕ್ರೋಶದ ಕೂಗು ವ್ಯಾಪಕವಾಗಿದೆ.

ಮತ್ತೊಂದೆಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್, ವಿಜಯೇಂದ್ರ ನೇತೃತ್ವದ ಬಿಜೆಪಿ ರಾಜ್ಯ ನಾಯಕರ ವಿರುದ್ಧ, ಪದೇ ಪದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಬಯಲು ಮಾಡುತ್ತ, ಮುಜುಗರಕ್ಕೆ ಕಾರಣವಾಗುತ್ತಿದ್ದಾರೆ.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಕೂಗು ತೀವ್ರವಾಗುತ್ತಿದ್ದು, ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯವಾಗಿ ಪಾದಯಾತ್ರೆ ನಡೆಸುವ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಅತೃಪ್ತರು ಸಿದ್ದರಾಗಿದ್ದಾರೆ.

ಇಂದು ಬೆಳಗಾವಿಯ ಹೊರವಯಲದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಬಿಜೆಪಿಯ ರೆಬೆಲ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ 10ಕ್ಕೂ ಹೆಚ್ಚು ಮಂದಿ ನಾಯಕರು ಭಾಗಿಯಾಗಿದ್ದಾರೆ‌.

ಇದನ್ನೂ ಓದಿ: DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ(BJP) ಶಾಸಕ ಯತ್ನಾಳ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅದರಲ್ಲೂ ಬಿಎಸ್ವೈ ಮಾಜಿ ಆಪ್ತ ಸಹಾಯಕ ಭಾಗಿಯಾಗಿರುವುದು ಕುತೂಹಲಕ್ಕೂ ಕಾರಣವಾಗಿದೆ.

ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ ಭಾಗಿಯಾಗಿದ್ದಾರೆ.

ಈ ಸಭೆಯಲ್ಲಿ ಮೈಸೂರು ಪಾದಯಾತ್ರೆಗೆ ಟಕ್ಕರ್ ನೀಡಲು ಬಿಜೆಪಿ ರೆಬೆಲ್ ಟೀಂ ಮುಂದಾಗಿದೆ. ಪ್ರತ್ಯೇಕ ಪಾದಯಾತ್ರೆ ಮಾಡೋ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಪಾದಯಾತ್ರೆಗೆ ರೆಬೆಲ್ ಮುಖಂಡರಿಂದ ಮುಹೂರ್ತವೂ ಫಿಕ್ಸ್ ಮಾಡಿದಂತಿದೆ.

ಸೆಪ್ಟೆಂಬರ್ 17ರಿಂದಲೇ ರೆಬೆಲ್ ಮುಖಂಡರಿಂದ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಮಾಡೋ ಸಾಧ್ಯತೆಯೂ ಇದ್ದು, ವಾಲ್ಮೀಕಿ ನಿಗಮ ಹಗರಣ, ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಗೆ ವಿರೋಧ ಹೋರಾಟಕ್ಕೆ ಚಿಂತನೆ ನಡೆಸಲಾಗಿದೆ.

ಈ ಕುರಿತು ಹೈಕಮಾಂಡ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿ ತೀರ್ಮಾನ ಮಾಡಲಿದ್ದಾರೆ ಎನ್ನಲಾಗಿದ್ದು, ಮುಡಾ ಪಾದಯಾತ್ರೆ ಕೇವಲ ಮೈಸೂರಿಗೆ ಮಾತ್ರ ಸೀಮಿತ ಹೋರಾಟ ಆಗಿತ್ತು. ಆದರೆ ವಾಲ್ಮೀಕಿ ನಿಗಮದ ಹಗರಣ, ಎಸ್ಸಿ, ಎಸ್ಟಿ ಹಣ ದುರ್ಬಳಕೆ, ಇದೆಲ್ಲವೂ ರಾಜ್ಯಕ್ಕೆ ಸಂಬಂಧಿಸಿದ್ದು ಆಗಿದೆ. ಇದರ ವಿರುದ್ಧ ನಾವೂ ಹೋರಾಟ ಮಾಡಬೇಕಿದೆ.

ಪ್ರತ್ಯೇಕ ಪಾದಯಾತ್ರೆಯ ಬಗ್ಗೆ ಕೇಂದ್ರ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಿದ್ದಾರೆ. ಇನ್ನು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಶೀಘ್ರದಲ್ಲೇ ಮತ್ತೊಮ್ಮೆ ಸಭೆ ಸೇರಲು ಬಿಜೆಪಿ ರೆಬೆಲ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ