BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

ಬೆಳಗಾವಿ: ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ ಪಟ್ಟಾಭಿಷೇಕ ಆದ ನಂತರ ಬಿಜೆಪಿಯಲ್ಲಿ ಅತೃಪ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ಕುಟುಂಬ ರಾಜಕಾರಣ, ಹಣ ಆಮಿಷಕ್ಕೆ ನಿಷ್ಠಾವಂತ ಕಾರ್ಯಕರ್ತರನ್ನು ಬಲಿಕೊಟ್ಟು, ಹಣ ಇದ್ದರೆ ಸಾಕು ಎಂತಹ ಅನರ್ಹರಿಗೂ ಟಿಕೆಟ್ ನೀಡಲಾಗುತ್ತಿದೆ ಎಂಬ ಆಕ್ರೋಶದ ಕೂಗು ವ್ಯಾಪಕವಾಗಿದೆ.

ಮತ್ತೊಂದೆಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್, ವಿಜಯೇಂದ್ರ ನೇತೃತ್ವದ ಬಿಜೆಪಿ ರಾಜ್ಯ ನಾಯಕರ ವಿರುದ್ಧ, ಪದೇ ಪದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಬಯಲು ಮಾಡುತ್ತ, ಮುಜುಗರಕ್ಕೆ ಕಾರಣವಾಗುತ್ತಿದ್ದಾರೆ.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಕೂಗು ತೀವ್ರವಾಗುತ್ತಿದ್ದು, ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯವಾಗಿ ಪಾದಯಾತ್ರೆ ನಡೆಸುವ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಅತೃಪ್ತರು ಸಿದ್ದರಾಗಿದ್ದಾರೆ.

ಇಂದು ಬೆಳಗಾವಿಯ ಹೊರವಯಲದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಬಿಜೆಪಿಯ ರೆಬೆಲ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ 10ಕ್ಕೂ ಹೆಚ್ಚು ಮಂದಿ ನಾಯಕರು ಭಾಗಿಯಾಗಿದ್ದಾರೆ‌.

ಇದನ್ನೂ ಓದಿ: DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ(BJP) ಶಾಸಕ ಯತ್ನಾಳ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅದರಲ್ಲೂ ಬಿಎಸ್ವೈ ಮಾಜಿ ಆಪ್ತ ಸಹಾಯಕ ಭಾಗಿಯಾಗಿರುವುದು ಕುತೂಹಲಕ್ಕೂ ಕಾರಣವಾಗಿದೆ.

ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ ಭಾಗಿಯಾಗಿದ್ದಾರೆ.

ಈ ಸಭೆಯಲ್ಲಿ ಮೈಸೂರು ಪಾದಯಾತ್ರೆಗೆ ಟಕ್ಕರ್ ನೀಡಲು ಬಿಜೆಪಿ ರೆಬೆಲ್ ಟೀಂ ಮುಂದಾಗಿದೆ. ಪ್ರತ್ಯೇಕ ಪಾದಯಾತ್ರೆ ಮಾಡೋ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಪಾದಯಾತ್ರೆಗೆ ರೆಬೆಲ್ ಮುಖಂಡರಿಂದ ಮುಹೂರ್ತವೂ ಫಿಕ್ಸ್ ಮಾಡಿದಂತಿದೆ.

ಸೆಪ್ಟೆಂಬರ್ 17ರಿಂದಲೇ ರೆಬೆಲ್ ಮುಖಂಡರಿಂದ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಮಾಡೋ ಸಾಧ್ಯತೆಯೂ ಇದ್ದು, ವಾಲ್ಮೀಕಿ ನಿಗಮ ಹಗರಣ, ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಗೆ ವಿರೋಧ ಹೋರಾಟಕ್ಕೆ ಚಿಂತನೆ ನಡೆಸಲಾಗಿದೆ.

ಈ ಕುರಿತು ಹೈಕಮಾಂಡ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿ ತೀರ್ಮಾನ ಮಾಡಲಿದ್ದಾರೆ ಎನ್ನಲಾಗಿದ್ದು, ಮುಡಾ ಪಾದಯಾತ್ರೆ ಕೇವಲ ಮೈಸೂರಿಗೆ ಮಾತ್ರ ಸೀಮಿತ ಹೋರಾಟ ಆಗಿತ್ತು. ಆದರೆ ವಾಲ್ಮೀಕಿ ನಿಗಮದ ಹಗರಣ, ಎಸ್ಸಿ, ಎಸ್ಟಿ ಹಣ ದುರ್ಬಳಕೆ, ಇದೆಲ್ಲವೂ ರಾಜ್ಯಕ್ಕೆ ಸಂಬಂಧಿಸಿದ್ದು ಆಗಿದೆ. ಇದರ ವಿರುದ್ಧ ನಾವೂ ಹೋರಾಟ ಮಾಡಬೇಕಿದೆ.

ಪ್ರತ್ಯೇಕ ಪಾದಯಾತ್ರೆಯ ಬಗ್ಗೆ ಕೇಂದ್ರ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಿದ್ದಾರೆ. ಇನ್ನು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಶೀಘ್ರದಲ್ಲೇ ಮತ್ತೊಮ್ಮೆ ಸಭೆ ಸೇರಲು ಬಿಜೆಪಿ ರೆಬೆಲ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

Latest News

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮರು ಮೌಲ್ಯಮಾಪನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ಗಳಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ನಾಗರಬೆಟ್ಟದ ಆಕ್ಸಫರ್ಡ್

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ ತಾಲ್ಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಕೋಳೂರುಗೆ ಮತ್ತೆ ಎರಡು ಅಂಕಗಳು ಬಂದಿದ್ದು ಅದರೊಂದಿಗೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ತಾಳಿಕೋಟಿ ಪಟ್ಟಣದ ನಿವಾಸಿಯಾಗಿರುವ ಗಂಗಮ್ಮ ಅಶೋಕ ಕೋಳೂರ ಈ ಮೊದಲು ಫಲಿತಾಂಶ ಬಂದಾಗ 623 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಳು.ಆದರೆ ಶಾಲೆಯ