BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

ಬೆಳಗಾವಿ: ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ ಪಟ್ಟಾಭಿಷೇಕ ಆದ ನಂತರ ಬಿಜೆಪಿಯಲ್ಲಿ ಅತೃಪ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ಕುಟುಂಬ ರಾಜಕಾರಣ, ಹಣ ಆಮಿಷಕ್ಕೆ ನಿಷ್ಠಾವಂತ ಕಾರ್ಯಕರ್ತರನ್ನು ಬಲಿಕೊಟ್ಟು, ಹಣ ಇದ್ದರೆ ಸಾಕು ಎಂತಹ ಅನರ್ಹರಿಗೂ ಟಿಕೆಟ್ ನೀಡಲಾಗುತ್ತಿದೆ ಎಂಬ ಆಕ್ರೋಶದ ಕೂಗು ವ್ಯಾಪಕವಾಗಿದೆ.

ಮತ್ತೊಂದೆಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್, ವಿಜಯೇಂದ್ರ ನೇತೃತ್ವದ ಬಿಜೆಪಿ ರಾಜ್ಯ ನಾಯಕರ ವಿರುದ್ಧ, ಪದೇ ಪದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಬಯಲು ಮಾಡುತ್ತ, ಮುಜುಗರಕ್ಕೆ ಕಾರಣವಾಗುತ್ತಿದ್ದಾರೆ.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಕೂಗು ತೀವ್ರವಾಗುತ್ತಿದ್ದು, ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯವಾಗಿ ಪಾದಯಾತ್ರೆ ನಡೆಸುವ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಅತೃಪ್ತರು ಸಿದ್ದರಾಗಿದ್ದಾರೆ.

ಇಂದು ಬೆಳಗಾವಿಯ ಹೊರವಯಲದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಬಿಜೆಪಿಯ ರೆಬೆಲ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ 10ಕ್ಕೂ ಹೆಚ್ಚು ಮಂದಿ ನಾಯಕರು ಭಾಗಿಯಾಗಿದ್ದಾರೆ‌.

ಇದನ್ನೂ ಓದಿ: DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ(BJP) ಶಾಸಕ ಯತ್ನಾಳ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅದರಲ್ಲೂ ಬಿಎಸ್ವೈ ಮಾಜಿ ಆಪ್ತ ಸಹಾಯಕ ಭಾಗಿಯಾಗಿರುವುದು ಕುತೂಹಲಕ್ಕೂ ಕಾರಣವಾಗಿದೆ.

ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ ಭಾಗಿಯಾಗಿದ್ದಾರೆ.

ಈ ಸಭೆಯಲ್ಲಿ ಮೈಸೂರು ಪಾದಯಾತ್ರೆಗೆ ಟಕ್ಕರ್ ನೀಡಲು ಬಿಜೆಪಿ ರೆಬೆಲ್ ಟೀಂ ಮುಂದಾಗಿದೆ. ಪ್ರತ್ಯೇಕ ಪಾದಯಾತ್ರೆ ಮಾಡೋ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಪಾದಯಾತ್ರೆಗೆ ರೆಬೆಲ್ ಮುಖಂಡರಿಂದ ಮುಹೂರ್ತವೂ ಫಿಕ್ಸ್ ಮಾಡಿದಂತಿದೆ.

ಸೆಪ್ಟೆಂಬರ್ 17ರಿಂದಲೇ ರೆಬೆಲ್ ಮುಖಂಡರಿಂದ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಮಾಡೋ ಸಾಧ್ಯತೆಯೂ ಇದ್ದು, ವಾಲ್ಮೀಕಿ ನಿಗಮ ಹಗರಣ, ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಗೆ ವಿರೋಧ ಹೋರಾಟಕ್ಕೆ ಚಿಂತನೆ ನಡೆಸಲಾಗಿದೆ.

ಈ ಕುರಿತು ಹೈಕಮಾಂಡ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿ ತೀರ್ಮಾನ ಮಾಡಲಿದ್ದಾರೆ ಎನ್ನಲಾಗಿದ್ದು, ಮುಡಾ ಪಾದಯಾತ್ರೆ ಕೇವಲ ಮೈಸೂರಿಗೆ ಮಾತ್ರ ಸೀಮಿತ ಹೋರಾಟ ಆಗಿತ್ತು. ಆದರೆ ವಾಲ್ಮೀಕಿ ನಿಗಮದ ಹಗರಣ, ಎಸ್ಸಿ, ಎಸ್ಟಿ ಹಣ ದುರ್ಬಳಕೆ, ಇದೆಲ್ಲವೂ ರಾಜ್ಯಕ್ಕೆ ಸಂಬಂಧಿಸಿದ್ದು ಆಗಿದೆ. ಇದರ ವಿರುದ್ಧ ನಾವೂ ಹೋರಾಟ ಮಾಡಬೇಕಿದೆ.

ಪ್ರತ್ಯೇಕ ಪಾದಯಾತ್ರೆಯ ಬಗ್ಗೆ ಕೇಂದ್ರ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಿದ್ದಾರೆ. ಇನ್ನು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಶೀಘ್ರದಲ್ಲೇ ಮತ್ತೊಮ್ಮೆ ಸಭೆ ಸೇರಲು ಬಿಜೆಪಿ ರೆಬೆಲ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ