BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

ಬೆಳಗಾವಿ: ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ ಪಟ್ಟಾಭಿಷೇಕ ಆದ ನಂತರ ಬಿಜೆಪಿಯಲ್ಲಿ ಅತೃಪ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ಕುಟುಂಬ ರಾಜಕಾರಣ, ಹಣ ಆಮಿಷಕ್ಕೆ ನಿಷ್ಠಾವಂತ ಕಾರ್ಯಕರ್ತರನ್ನು ಬಲಿಕೊಟ್ಟು, ಹಣ ಇದ್ದರೆ ಸಾಕು ಎಂತಹ ಅನರ್ಹರಿಗೂ ಟಿಕೆಟ್ ನೀಡಲಾಗುತ್ತಿದೆ ಎಂಬ ಆಕ್ರೋಶದ ಕೂಗು ವ್ಯಾಪಕವಾಗಿದೆ.

ಮತ್ತೊಂದೆಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್, ವಿಜಯೇಂದ್ರ ನೇತೃತ್ವದ ಬಿಜೆಪಿ ರಾಜ್ಯ ನಾಯಕರ ವಿರುದ್ಧ, ಪದೇ ಪದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಬಯಲು ಮಾಡುತ್ತ, ಮುಜುಗರಕ್ಕೆ ಕಾರಣವಾಗುತ್ತಿದ್ದಾರೆ.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಕೂಗು ತೀವ್ರವಾಗುತ್ತಿದ್ದು, ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯವಾಗಿ ಪಾದಯಾತ್ರೆ ನಡೆಸುವ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಅತೃಪ್ತರು ಸಿದ್ದರಾಗಿದ್ದಾರೆ.

ಇಂದು ಬೆಳಗಾವಿಯ ಹೊರವಯಲದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಬಿಜೆಪಿಯ ರೆಬೆಲ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ 10ಕ್ಕೂ ಹೆಚ್ಚು ಮಂದಿ ನಾಯಕರು ಭಾಗಿಯಾಗಿದ್ದಾರೆ‌.

ಇದನ್ನೂ ಓದಿ: DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ(BJP) ಶಾಸಕ ಯತ್ನಾಳ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅದರಲ್ಲೂ ಬಿಎಸ್ವೈ ಮಾಜಿ ಆಪ್ತ ಸಹಾಯಕ ಭಾಗಿಯಾಗಿರುವುದು ಕುತೂಹಲಕ್ಕೂ ಕಾರಣವಾಗಿದೆ.

ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ ಭಾಗಿಯಾಗಿದ್ದಾರೆ.

ಈ ಸಭೆಯಲ್ಲಿ ಮೈಸೂರು ಪಾದಯಾತ್ರೆಗೆ ಟಕ್ಕರ್ ನೀಡಲು ಬಿಜೆಪಿ ರೆಬೆಲ್ ಟೀಂ ಮುಂದಾಗಿದೆ. ಪ್ರತ್ಯೇಕ ಪಾದಯಾತ್ರೆ ಮಾಡೋ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಪಾದಯಾತ್ರೆಗೆ ರೆಬೆಲ್ ಮುಖಂಡರಿಂದ ಮುಹೂರ್ತವೂ ಫಿಕ್ಸ್ ಮಾಡಿದಂತಿದೆ.

ಸೆಪ್ಟೆಂಬರ್ 17ರಿಂದಲೇ ರೆಬೆಲ್ ಮುಖಂಡರಿಂದ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಮಾಡೋ ಸಾಧ್ಯತೆಯೂ ಇದ್ದು, ವಾಲ್ಮೀಕಿ ನಿಗಮ ಹಗರಣ, ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಗೆ ವಿರೋಧ ಹೋರಾಟಕ್ಕೆ ಚಿಂತನೆ ನಡೆಸಲಾಗಿದೆ.

ಈ ಕುರಿತು ಹೈಕಮಾಂಡ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿ ತೀರ್ಮಾನ ಮಾಡಲಿದ್ದಾರೆ ಎನ್ನಲಾಗಿದ್ದು, ಮುಡಾ ಪಾದಯಾತ್ರೆ ಕೇವಲ ಮೈಸೂರಿಗೆ ಮಾತ್ರ ಸೀಮಿತ ಹೋರಾಟ ಆಗಿತ್ತು. ಆದರೆ ವಾಲ್ಮೀಕಿ ನಿಗಮದ ಹಗರಣ, ಎಸ್ಸಿ, ಎಸ್ಟಿ ಹಣ ದುರ್ಬಳಕೆ, ಇದೆಲ್ಲವೂ ರಾಜ್ಯಕ್ಕೆ ಸಂಬಂಧಿಸಿದ್ದು ಆಗಿದೆ. ಇದರ ವಿರುದ್ಧ ನಾವೂ ಹೋರಾಟ ಮಾಡಬೇಕಿದೆ.

ಪ್ರತ್ಯೇಕ ಪಾದಯಾತ್ರೆಯ ಬಗ್ಗೆ ಕೇಂದ್ರ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಿದ್ದಾರೆ. ಇನ್ನು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಶೀಘ್ರದಲ್ಲೇ ಮತ್ತೊಮ್ಮೆ ಸಭೆ ಸೇರಲು ಬಿಜೆಪಿ ರೆಬೆಲ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ