BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

ಬೆಳಗಾವಿ: ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ ಪಟ್ಟಾಭಿಷೇಕ ಆದ ನಂತರ ಬಿಜೆಪಿಯಲ್ಲಿ ಅತೃಪ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ಕುಟುಂಬ ರಾಜಕಾರಣ, ಹಣ ಆಮಿಷಕ್ಕೆ ನಿಷ್ಠಾವಂತ ಕಾರ್ಯಕರ್ತರನ್ನು ಬಲಿಕೊಟ್ಟು, ಹಣ ಇದ್ದರೆ ಸಾಕು ಎಂತಹ ಅನರ್ಹರಿಗೂ ಟಿಕೆಟ್ ನೀಡಲಾಗುತ್ತಿದೆ ಎಂಬ ಆಕ್ರೋಶದ ಕೂಗು ವ್ಯಾಪಕವಾಗಿದೆ.

ಮತ್ತೊಂದೆಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್, ವಿಜಯೇಂದ್ರ ನೇತೃತ್ವದ ಬಿಜೆಪಿ ರಾಜ್ಯ ನಾಯಕರ ವಿರುದ್ಧ, ಪದೇ ಪದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಬಯಲು ಮಾಡುತ್ತ, ಮುಜುಗರಕ್ಕೆ ಕಾರಣವಾಗುತ್ತಿದ್ದಾರೆ.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಕೂಗು ತೀವ್ರವಾಗುತ್ತಿದ್ದು, ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯವಾಗಿ ಪಾದಯಾತ್ರೆ ನಡೆಸುವ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಅತೃಪ್ತರು ಸಿದ್ದರಾಗಿದ್ದಾರೆ.

ಇಂದು ಬೆಳಗಾವಿಯ ಹೊರವಯಲದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಬಿಜೆಪಿಯ ರೆಬೆಲ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ 10ಕ್ಕೂ ಹೆಚ್ಚು ಮಂದಿ ನಾಯಕರು ಭಾಗಿಯಾಗಿದ್ದಾರೆ‌.

ಇದನ್ನೂ ಓದಿ: DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ(BJP) ಶಾಸಕ ಯತ್ನಾಳ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅದರಲ್ಲೂ ಬಿಎಸ್ವೈ ಮಾಜಿ ಆಪ್ತ ಸಹಾಯಕ ಭಾಗಿಯಾಗಿರುವುದು ಕುತೂಹಲಕ್ಕೂ ಕಾರಣವಾಗಿದೆ.

ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ ಭಾಗಿಯಾಗಿದ್ದಾರೆ.

ಈ ಸಭೆಯಲ್ಲಿ ಮೈಸೂರು ಪಾದಯಾತ್ರೆಗೆ ಟಕ್ಕರ್ ನೀಡಲು ಬಿಜೆಪಿ ರೆಬೆಲ್ ಟೀಂ ಮುಂದಾಗಿದೆ. ಪ್ರತ್ಯೇಕ ಪಾದಯಾತ್ರೆ ಮಾಡೋ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಪಾದಯಾತ್ರೆಗೆ ರೆಬೆಲ್ ಮುಖಂಡರಿಂದ ಮುಹೂರ್ತವೂ ಫಿಕ್ಸ್ ಮಾಡಿದಂತಿದೆ.

ಸೆಪ್ಟೆಂಬರ್ 17ರಿಂದಲೇ ರೆಬೆಲ್ ಮುಖಂಡರಿಂದ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಮಾಡೋ ಸಾಧ್ಯತೆಯೂ ಇದ್ದು, ವಾಲ್ಮೀಕಿ ನಿಗಮ ಹಗರಣ, ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಗೆ ವಿರೋಧ ಹೋರಾಟಕ್ಕೆ ಚಿಂತನೆ ನಡೆಸಲಾಗಿದೆ.

ಈ ಕುರಿತು ಹೈಕಮಾಂಡ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿ ತೀರ್ಮಾನ ಮಾಡಲಿದ್ದಾರೆ ಎನ್ನಲಾಗಿದ್ದು, ಮುಡಾ ಪಾದಯಾತ್ರೆ ಕೇವಲ ಮೈಸೂರಿಗೆ ಮಾತ್ರ ಸೀಮಿತ ಹೋರಾಟ ಆಗಿತ್ತು. ಆದರೆ ವಾಲ್ಮೀಕಿ ನಿಗಮದ ಹಗರಣ, ಎಸ್ಸಿ, ಎಸ್ಟಿ ಹಣ ದುರ್ಬಳಕೆ, ಇದೆಲ್ಲವೂ ರಾಜ್ಯಕ್ಕೆ ಸಂಬಂಧಿಸಿದ್ದು ಆಗಿದೆ. ಇದರ ವಿರುದ್ಧ ನಾವೂ ಹೋರಾಟ ಮಾಡಬೇಕಿದೆ.

ಪ್ರತ್ಯೇಕ ಪಾದಯಾತ್ರೆಯ ಬಗ್ಗೆ ಕೇಂದ್ರ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಿದ್ದಾರೆ. ಇನ್ನು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಶೀಘ್ರದಲ್ಲೇ ಮತ್ತೊಮ್ಮೆ ಸಭೆ ಸೇರಲು ಬಿಜೆಪಿ ರೆಬೆಲ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

Latest News

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ 9ಕ್ಕೆ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಮಾಡಿದ ಕಳ್ಳರನ್ನು ಬಂಧಿಸಿದ ಪೊಲೀಸರಿಗೆ,ಪೊಲೀಸ್ ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಪ್ಪತ್ತಗುಡ್ಡ ನಂದಿವೇರಿಮಠದ ಶಿವಕುಮಾರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಜ್ಯೋತಿ ಬೆಳಗಿಸುವರು.ಸಂಸ್ಥೆ ಅಧ್ಯಕ್ಷ ಕೆ.ವಾಯ್.ಬಿರಾದಾರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಉಪಾಧ್ಯಕ್ಷ ಎಂ.ಆರ್.ನಾಡಗೌಡ್ರ,ಪ್ರಧಾನ ಕಾರ್ಯದರ್ಶಿ