BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

ಬೆಳಗಾವಿ: ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ ಪಟ್ಟಾಭಿಷೇಕ ಆದ ನಂತರ ಬಿಜೆಪಿಯಲ್ಲಿ ಅತೃಪ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ಕುಟುಂಬ ರಾಜಕಾರಣ, ಹಣ ಆಮಿಷಕ್ಕೆ ನಿಷ್ಠಾವಂತ ಕಾರ್ಯಕರ್ತರನ್ನು ಬಲಿಕೊಟ್ಟು, ಹಣ ಇದ್ದರೆ ಸಾಕು ಎಂತಹ ಅನರ್ಹರಿಗೂ ಟಿಕೆಟ್ ನೀಡಲಾಗುತ್ತಿದೆ ಎಂಬ ಆಕ್ರೋಶದ ಕೂಗು ವ್ಯಾಪಕವಾಗಿದೆ.

ಮತ್ತೊಂದೆಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್, ವಿಜಯೇಂದ್ರ ನೇತೃತ್ವದ ಬಿಜೆಪಿ ರಾಜ್ಯ ನಾಯಕರ ವಿರುದ್ಧ, ಪದೇ ಪದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಬಯಲು ಮಾಡುತ್ತ, ಮುಜುಗರಕ್ಕೆ ಕಾರಣವಾಗುತ್ತಿದ್ದಾರೆ.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಕೂಗು ತೀವ್ರವಾಗುತ್ತಿದ್ದು, ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯವಾಗಿ ಪಾದಯಾತ್ರೆ ನಡೆಸುವ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಅತೃಪ್ತರು ಸಿದ್ದರಾಗಿದ್ದಾರೆ.

ಇಂದು ಬೆಳಗಾವಿಯ ಹೊರವಯಲದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಬಿಜೆಪಿಯ ರೆಬೆಲ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ 10ಕ್ಕೂ ಹೆಚ್ಚು ಮಂದಿ ನಾಯಕರು ಭಾಗಿಯಾಗಿದ್ದಾರೆ‌.

ಇದನ್ನೂ ಓದಿ: DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ(BJP) ಶಾಸಕ ಯತ್ನಾಳ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅದರಲ್ಲೂ ಬಿಎಸ್ವೈ ಮಾಜಿ ಆಪ್ತ ಸಹಾಯಕ ಭಾಗಿಯಾಗಿರುವುದು ಕುತೂಹಲಕ್ಕೂ ಕಾರಣವಾಗಿದೆ.

ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ ಭಾಗಿಯಾಗಿದ್ದಾರೆ.

ಈ ಸಭೆಯಲ್ಲಿ ಮೈಸೂರು ಪಾದಯಾತ್ರೆಗೆ ಟಕ್ಕರ್ ನೀಡಲು ಬಿಜೆಪಿ ರೆಬೆಲ್ ಟೀಂ ಮುಂದಾಗಿದೆ. ಪ್ರತ್ಯೇಕ ಪಾದಯಾತ್ರೆ ಮಾಡೋ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಪಾದಯಾತ್ರೆಗೆ ರೆಬೆಲ್ ಮುಖಂಡರಿಂದ ಮುಹೂರ್ತವೂ ಫಿಕ್ಸ್ ಮಾಡಿದಂತಿದೆ.

ಸೆಪ್ಟೆಂಬರ್ 17ರಿಂದಲೇ ರೆಬೆಲ್ ಮುಖಂಡರಿಂದ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಮಾಡೋ ಸಾಧ್ಯತೆಯೂ ಇದ್ದು, ವಾಲ್ಮೀಕಿ ನಿಗಮ ಹಗರಣ, ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಗೆ ವಿರೋಧ ಹೋರಾಟಕ್ಕೆ ಚಿಂತನೆ ನಡೆಸಲಾಗಿದೆ.

ಈ ಕುರಿತು ಹೈಕಮಾಂಡ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿ ತೀರ್ಮಾನ ಮಾಡಲಿದ್ದಾರೆ ಎನ್ನಲಾಗಿದ್ದು, ಮುಡಾ ಪಾದಯಾತ್ರೆ ಕೇವಲ ಮೈಸೂರಿಗೆ ಮಾತ್ರ ಸೀಮಿತ ಹೋರಾಟ ಆಗಿತ್ತು. ಆದರೆ ವಾಲ್ಮೀಕಿ ನಿಗಮದ ಹಗರಣ, ಎಸ್ಸಿ, ಎಸ್ಟಿ ಹಣ ದುರ್ಬಳಕೆ, ಇದೆಲ್ಲವೂ ರಾಜ್ಯಕ್ಕೆ ಸಂಬಂಧಿಸಿದ್ದು ಆಗಿದೆ. ಇದರ ವಿರುದ್ಧ ನಾವೂ ಹೋರಾಟ ಮಾಡಬೇಕಿದೆ.

ಪ್ರತ್ಯೇಕ ಪಾದಯಾತ್ರೆಯ ಬಗ್ಗೆ ಕೇಂದ್ರ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಿದ್ದಾರೆ. ಇನ್ನು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಶೀಘ್ರದಲ್ಲೇ ಮತ್ತೊಮ್ಮೆ ಸಭೆ ಸೇರಲು ಬಿಜೆಪಿ ರೆಬೆಲ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

Latest News

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಸನ್ 2019-2026ರವರೆಗೆ ಬೆಳೆವಿಮೆ ತುಂಬಿದ ರೈತರಿಗೆ ವಿಮೆ ಹಣ ದೊರೆಯದಂತೆ ಅಧಿಕಾರಿಗಳು ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಆರೋಪಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ