BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

ಬೆಳಗಾವಿ: ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ ಪಟ್ಟಾಭಿಷೇಕ ಆದ ನಂತರ ಬಿಜೆಪಿಯಲ್ಲಿ ಅತೃಪ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ಕುಟುಂಬ ರಾಜಕಾರಣ, ಹಣ ಆಮಿಷಕ್ಕೆ ನಿಷ್ಠಾವಂತ ಕಾರ್ಯಕರ್ತರನ್ನು ಬಲಿಕೊಟ್ಟು, ಹಣ ಇದ್ದರೆ ಸಾಕು ಎಂತಹ ಅನರ್ಹರಿಗೂ ಟಿಕೆಟ್ ನೀಡಲಾಗುತ್ತಿದೆ ಎಂಬ ಆಕ್ರೋಶದ ಕೂಗು ವ್ಯಾಪಕವಾಗಿದೆ.

ಮತ್ತೊಂದೆಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್, ವಿಜಯೇಂದ್ರ ನೇತೃತ್ವದ ಬಿಜೆಪಿ ರಾಜ್ಯ ನಾಯಕರ ವಿರುದ್ಧ, ಪದೇ ಪದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಬಯಲು ಮಾಡುತ್ತ, ಮುಜುಗರಕ್ಕೆ ಕಾರಣವಾಗುತ್ತಿದ್ದಾರೆ.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಕೂಗು ತೀವ್ರವಾಗುತ್ತಿದ್ದು, ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯವಾಗಿ ಪಾದಯಾತ್ರೆ ನಡೆಸುವ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಅತೃಪ್ತರು ಸಿದ್ದರಾಗಿದ್ದಾರೆ.

ಇಂದು ಬೆಳಗಾವಿಯ ಹೊರವಯಲದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಬಿಜೆಪಿಯ ರೆಬೆಲ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ 10ಕ್ಕೂ ಹೆಚ್ಚು ಮಂದಿ ನಾಯಕರು ಭಾಗಿಯಾಗಿದ್ದಾರೆ‌.

ಇದನ್ನೂ ಓದಿ: DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ(BJP) ಶಾಸಕ ಯತ್ನಾಳ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅದರಲ್ಲೂ ಬಿಎಸ್ವೈ ಮಾಜಿ ಆಪ್ತ ಸಹಾಯಕ ಭಾಗಿಯಾಗಿರುವುದು ಕುತೂಹಲಕ್ಕೂ ಕಾರಣವಾಗಿದೆ.

ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ ಭಾಗಿಯಾಗಿದ್ದಾರೆ.

ಈ ಸಭೆಯಲ್ಲಿ ಮೈಸೂರು ಪಾದಯಾತ್ರೆಗೆ ಟಕ್ಕರ್ ನೀಡಲು ಬಿಜೆಪಿ ರೆಬೆಲ್ ಟೀಂ ಮುಂದಾಗಿದೆ. ಪ್ರತ್ಯೇಕ ಪಾದಯಾತ್ರೆ ಮಾಡೋ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಪಾದಯಾತ್ರೆಗೆ ರೆಬೆಲ್ ಮುಖಂಡರಿಂದ ಮುಹೂರ್ತವೂ ಫಿಕ್ಸ್ ಮಾಡಿದಂತಿದೆ.

ಸೆಪ್ಟೆಂಬರ್ 17ರಿಂದಲೇ ರೆಬೆಲ್ ಮುಖಂಡರಿಂದ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಮಾಡೋ ಸಾಧ್ಯತೆಯೂ ಇದ್ದು, ವಾಲ್ಮೀಕಿ ನಿಗಮ ಹಗರಣ, ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಗೆ ವಿರೋಧ ಹೋರಾಟಕ್ಕೆ ಚಿಂತನೆ ನಡೆಸಲಾಗಿದೆ.

ಈ ಕುರಿತು ಹೈಕಮಾಂಡ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿ ತೀರ್ಮಾನ ಮಾಡಲಿದ್ದಾರೆ ಎನ್ನಲಾಗಿದ್ದು, ಮುಡಾ ಪಾದಯಾತ್ರೆ ಕೇವಲ ಮೈಸೂರಿಗೆ ಮಾತ್ರ ಸೀಮಿತ ಹೋರಾಟ ಆಗಿತ್ತು. ಆದರೆ ವಾಲ್ಮೀಕಿ ನಿಗಮದ ಹಗರಣ, ಎಸ್ಸಿ, ಎಸ್ಟಿ ಹಣ ದುರ್ಬಳಕೆ, ಇದೆಲ್ಲವೂ ರಾಜ್ಯಕ್ಕೆ ಸಂಬಂಧಿಸಿದ್ದು ಆಗಿದೆ. ಇದರ ವಿರುದ್ಧ ನಾವೂ ಹೋರಾಟ ಮಾಡಬೇಕಿದೆ.

ಪ್ರತ್ಯೇಕ ಪಾದಯಾತ್ರೆಯ ಬಗ್ಗೆ ಕೇಂದ್ರ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಿದ್ದಾರೆ. ಇನ್ನು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಶೀಘ್ರದಲ್ಲೇ ಮತ್ತೊಮ್ಮೆ ಸಭೆ ಸೇರಲು ಬಿಜೆಪಿ ರೆಬೆಲ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

Latest News

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸ್ ರಾಜೇಶ್ ಆರಾಧ್ಯ ಪತ್ನಿ ಲಕ್ಷಿಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್‌ ಆರಾಧ್ಯ ಮತ್ತು ಲಕ್ಷಿಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ8ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟಸ್‌್ರನಲ್ಲಿ ಈ ಕುಟುಂಬ ವಾಸವಾಗಿತ್ತು.

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,