BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

ಬೆಳಗಾವಿ: ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ ಪಟ್ಟಾಭಿಷೇಕ ಆದ ನಂತರ ಬಿಜೆಪಿಯಲ್ಲಿ ಅತೃಪ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ಕುಟುಂಬ ರಾಜಕಾರಣ, ಹಣ ಆಮಿಷಕ್ಕೆ ನಿಷ್ಠಾವಂತ ಕಾರ್ಯಕರ್ತರನ್ನು ಬಲಿಕೊಟ್ಟು, ಹಣ ಇದ್ದರೆ ಸಾಕು ಎಂತಹ ಅನರ್ಹರಿಗೂ ಟಿಕೆಟ್ ನೀಡಲಾಗುತ್ತಿದೆ ಎಂಬ ಆಕ್ರೋಶದ ಕೂಗು ವ್ಯಾಪಕವಾಗಿದೆ.

ಮತ್ತೊಂದೆಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್, ವಿಜಯೇಂದ್ರ ನೇತೃತ್ವದ ಬಿಜೆಪಿ ರಾಜ್ಯ ನಾಯಕರ ವಿರುದ್ಧ, ಪದೇ ಪದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಬಯಲು ಮಾಡುತ್ತ, ಮುಜುಗರಕ್ಕೆ ಕಾರಣವಾಗುತ್ತಿದ್ದಾರೆ.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಪಕ್ಷದಲ್ಲಿ ಅಸಮಾಧಾನದ ಕೂಗು ತೀವ್ರವಾಗುತ್ತಿದ್ದು, ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯವಾಗಿ ಪಾದಯಾತ್ರೆ ನಡೆಸುವ ಕುರಿತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಅತೃಪ್ತರು ಸಿದ್ದರಾಗಿದ್ದಾರೆ.

ಇಂದು ಬೆಳಗಾವಿಯ ಹೊರವಯಲದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಬಿಜೆಪಿಯ ರೆಬೆಲ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ 10ಕ್ಕೂ ಹೆಚ್ಚು ಮಂದಿ ನಾಯಕರು ಭಾಗಿಯಾಗಿದ್ದಾರೆ‌.

ಇದನ್ನೂ ಓದಿ: DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ(BJP) ಶಾಸಕ ಯತ್ನಾಳ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅದರಲ್ಲೂ ಬಿಎಸ್ವೈ ಮಾಜಿ ಆಪ್ತ ಸಹಾಯಕ ಭಾಗಿಯಾಗಿರುವುದು ಕುತೂಹಲಕ್ಕೂ ಕಾರಣವಾಗಿದೆ.

ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ ಭಾಗಿಯಾಗಿದ್ದಾರೆ.

ಈ ಸಭೆಯಲ್ಲಿ ಮೈಸೂರು ಪಾದಯಾತ್ರೆಗೆ ಟಕ್ಕರ್ ನೀಡಲು ಬಿಜೆಪಿ ರೆಬೆಲ್ ಟೀಂ ಮುಂದಾಗಿದೆ. ಪ್ರತ್ಯೇಕ ಪಾದಯಾತ್ರೆ ಮಾಡೋ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಪಾದಯಾತ್ರೆಗೆ ರೆಬೆಲ್ ಮುಖಂಡರಿಂದ ಮುಹೂರ್ತವೂ ಫಿಕ್ಸ್ ಮಾಡಿದಂತಿದೆ.

ಸೆಪ್ಟೆಂಬರ್ 17ರಿಂದಲೇ ರೆಬೆಲ್ ಮುಖಂಡರಿಂದ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಮಾಡೋ ಸಾಧ್ಯತೆಯೂ ಇದ್ದು, ವಾಲ್ಮೀಕಿ ನಿಗಮ ಹಗರಣ, ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆಗೆ ವಿರೋಧ ಹೋರಾಟಕ್ಕೆ ಚಿಂತನೆ ನಡೆಸಲಾಗಿದೆ.

ಈ ಕುರಿತು ಹೈಕಮಾಂಡ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿ ತೀರ್ಮಾನ ಮಾಡಲಿದ್ದಾರೆ ಎನ್ನಲಾಗಿದ್ದು, ಮುಡಾ ಪಾದಯಾತ್ರೆ ಕೇವಲ ಮೈಸೂರಿಗೆ ಮಾತ್ರ ಸೀಮಿತ ಹೋರಾಟ ಆಗಿತ್ತು. ಆದರೆ ವಾಲ್ಮೀಕಿ ನಿಗಮದ ಹಗರಣ, ಎಸ್ಸಿ, ಎಸ್ಟಿ ಹಣ ದುರ್ಬಳಕೆ, ಇದೆಲ್ಲವೂ ರಾಜ್ಯಕ್ಕೆ ಸಂಬಂಧಿಸಿದ್ದು ಆಗಿದೆ. ಇದರ ವಿರುದ್ಧ ನಾವೂ ಹೋರಾಟ ಮಾಡಬೇಕಿದೆ.

ಪ್ರತ್ಯೇಕ ಪಾದಯಾತ್ರೆಯ ಬಗ್ಗೆ ಕೇಂದ್ರ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಿದ್ದಾರೆ. ಇನ್ನು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲು ಶೀಘ್ರದಲ್ಲೇ ಮತ್ತೊಮ್ಮೆ ಸಭೆ ಸೇರಲು ಬಿಜೆಪಿ ರೆಬೆಲ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು