ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕರಾಗಿರುವ ಸಿ.ಎಸ್.ನಾಡಗೌಡ ಅವರಿಗೆ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಆದ್ಯತೆ ಕಲ್ಪಿಸಬೇಕು ಎಂದು ಗಣ್ಯವರ್ತಕ ಸಂಗನಗೌಡ ಬಿರಾದಾರ(ಜಿಟಿಸಿ) ಹೇಳಿದರು.

ಪಟ್ಟಣದ ಏಪಿಎಂಸಿಯಲ್ಲಿರುವ ಹನುಮಂತ ದೇವರ ಗುಡಿಯಲ್ಲಿ ದಿ ಅಡತ ಮರ್ಚಂಟ್ಸ್ ಅಸೋಸಿಯೇಷನ್‌ದಿಂದ ವರ್ತಕರ ನೇತೃತ್ವದಲ್ಲಿ ಶುಕ್ರವಾರ ನಾಡಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ನಿಷ್ಠಾವಂತರಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ನಾಡಗೌಡರಿಗೆ ಹೈಕಮಾಂಡ್ ಹೇಳಿದಂತೆ ಹಲವು ಬಾರಿ ಅಧಿಕಾರವನ್ನು ಮತ್ತೊಬ್ಬರಿಗೆ ತ್ಯಾಗ ಮಾಡಿದ್ದಾರೆ.ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಆದ್ಯತೆ ನೀಡಬೇಕು.ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷದ ಅಭಿಮಾನಿಗಳೆಲ್ಲಾ ಮುಂದಿನ ದಾರಿ ಕಂಡುಕೊಳ್ಳಬೇಕಾಗುತ್ತದೆ ಎಂದರು.

ಹಿರಿಯ ವರ್ತಕ ಮಂದೆಪ್ಪ ಗುರಿಕಾರ, ಬಿ.ಪಿ.ಮುರಾಳ,ವೀರೇಶ ಇಲಕಲ್ಲ,ಮುತ್ತು ಕಡಿ ಮಾತನಾಡಿ, ಶಾಸಕ ನಾಡಗೌಡರನ್ನು ನಿಗಮ ಮಂಡಳಿಗೆ ಸಿಮೀತಗೊಳಿಸದೇ ಸಚಿವ ಸ್ಥಾನ ನೀಡಿ ರಾಜ್ಯದ ಸೇವೆಗೆ ಹೈಕಮಾಂಡ್ ಬಳಸಿಕೊಳ್ಳಬೇಕು.ಹಿರಿಯ ರಾಜಕಾರಣಿಯಾಗಿರುವ ನಾಡಗೌಡರನ್ನು ಗೌರವದಿಂದ ಪಕ್ಷ ನಡೆಸಿಕೊಳ್ಳಬೇಕು ಎಂದು ಹೇಳಿದರು. ವರ್ತಕರಾದಎಂ.ಎನ್.ಪಾಟೀಲ,ಎಚ್.ಟಿ.ಬಿರಾದಾರ,ಮಲ್ಲನಗೌಡಬಿರಾದಾರ,ಬಿ.ಕೆ.ರಕ್ಕಸಗಿ,ಜಿ.ವಾಯ್.ಇಲ್ಲೂರ,ಸಿ.ಕೆ.ಮಂಗ್ಯಾಳ,ಬಿ.ಎಸ್.ಬಿರಾದಾರ,ಬಿ.ಸಿ.ಬೆಲ್ಲದ,ಎಸ್.ಎಸ್.ಕುAಟೋಜಿ,ಎ.ಎಸ್.ಗುಡ್ನಾಳ ಮತ್ತಿತರರು ಇದ್ದರು.ನಾಡಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ ಹನಮಂತ ದೇವರಿಗೆ ಕಾಯಿಕರ್ಪೂರ ಬೆಳಗಿ ಈಡುಗಾಯಿ ಒಡೆದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ