ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಹಿರಿಯ ರಾಜಕಾರಣಿ ನಾಡಗೌಡರನ್ನು ಕಾಂಗ್ರೆಸ್ ಹೈಕಮಾಂಡ್‌ ಗೌರವದಿಂದ ನಡೆಸಿಕೊಳ್ಳಬೇಕು – ಸಂಗನಗೌಡ ಬಿರಾದಾರ(ಜಿಟಿಸಿ)

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕರಾಗಿರುವ ಸಿ.ಎಸ್.ನಾಡಗೌಡ ಅವರಿಗೆ ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಆದ್ಯತೆ ಕಲ್ಪಿಸಬೇಕು ಎಂದು ಗಣ್ಯವರ್ತಕ ಸಂಗನಗೌಡ ಬಿರಾದಾರ(ಜಿಟಿಸಿ) ಹೇಳಿದರು.

ಪಟ್ಟಣದ ಏಪಿಎಂಸಿಯಲ್ಲಿರುವ ಹನುಮಂತ ದೇವರ ಗುಡಿಯಲ್ಲಿ ದಿ ಅಡತ ಮರ್ಚಂಟ್ಸ್ ಅಸೋಸಿಯೇಷನ್‌ದಿಂದ ವರ್ತಕರ ನೇತೃತ್ವದಲ್ಲಿ ಶುಕ್ರವಾರ ನಾಡಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ನಿಷ್ಠಾವಂತರಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ನಾಡಗೌಡರಿಗೆ ಹೈಕಮಾಂಡ್ ಹೇಳಿದಂತೆ ಹಲವು ಬಾರಿ ಅಧಿಕಾರವನ್ನು ಮತ್ತೊಬ್ಬರಿಗೆ ತ್ಯಾಗ ಮಾಡಿದ್ದಾರೆ.ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಆದ್ಯತೆ ನೀಡಬೇಕು.ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷದ ಅಭಿಮಾನಿಗಳೆಲ್ಲಾ ಮುಂದಿನ ದಾರಿ ಕಂಡುಕೊಳ್ಳಬೇಕಾಗುತ್ತದೆ ಎಂದರು.

ಹಿರಿಯ ವರ್ತಕ ಮಂದೆಪ್ಪ ಗುರಿಕಾರ, ಬಿ.ಪಿ.ಮುರಾಳ,ವೀರೇಶ ಇಲಕಲ್ಲ,ಮುತ್ತು ಕಡಿ ಮಾತನಾಡಿ, ಶಾಸಕ ನಾಡಗೌಡರನ್ನು ನಿಗಮ ಮಂಡಳಿಗೆ ಸಿಮೀತಗೊಳಿಸದೇ ಸಚಿವ ಸ್ಥಾನ ನೀಡಿ ರಾಜ್ಯದ ಸೇವೆಗೆ ಹೈಕಮಾಂಡ್ ಬಳಸಿಕೊಳ್ಳಬೇಕು.ಹಿರಿಯ ರಾಜಕಾರಣಿಯಾಗಿರುವ ನಾಡಗೌಡರನ್ನು ಗೌರವದಿಂದ ಪಕ್ಷ ನಡೆಸಿಕೊಳ್ಳಬೇಕು ಎಂದು ಹೇಳಿದರು. ವರ್ತಕರಾದಎಂ.ಎನ್.ಪಾಟೀಲ,ಎಚ್.ಟಿ.ಬಿರಾದಾರ,ಮಲ್ಲನಗೌಡಬಿರಾದಾರ,ಬಿ.ಕೆ.ರಕ್ಕಸಗಿ,ಜಿ.ವಾಯ್.ಇಲ್ಲೂರ,ಸಿ.ಕೆ.ಮಂಗ್ಯಾಳ,ಬಿ.ಎಸ್.ಬಿರಾದಾರ,ಬಿ.ಸಿ.ಬೆಲ್ಲದ,ಎಸ್.ಎಸ್.ಕುAಟೋಜಿ,ಎ.ಎಸ್.ಗುಡ್ನಾಳ ಮತ್ತಿತರರು ಇದ್ದರು.ನಾಡಗೌಡರಿಗೆ ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿ ಹನಮಂತ ದೇವರಿಗೆ ಕಾಯಿಕರ್ಪೂರ ಬೆಳಗಿ ಈಡುಗಾಯಿ ಒಡೆದರು.

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ