Seven athletes from Vijayapur district have been selected for bandy hockey training

ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಮುದ್ದೇಬಿಹಾಳ: ಹಾಕಿ ಬಳಿಕ ಇದೀಗ ಬ್ಯಾಂಡಿ ಹಾಕಿಯಲ್ಲಿ ಮಿಂಚಲು ವಿಜಯಪುರ ಜಿಲ್ಲೆಯ ಪ್ರತಿಭೆಗಳು ಸಿದ್ದರಾಗಿದ್ದಾರೆ.

ಐಸ್ ಸ್ಕೇಟಿಂಗ ಗುರಗಾಂವ್ (ದೆಹಲಿ) ನಲ್ಲಿ ಆಗಸ್ಟ್ 4 ರಿಂದ 6 ರ ವರೆಗೆ ನಡೆಯುವ ಹಾಕಿ ಬ್ಯಾಂಡಿ ಕ್ರೀಡಾ ತರಬೇತಿ ಶಿಬಿರದಲ್ಲಿ
ಮುದ್ದೇಬಿಹಾಳ ಪಟ್ಟಣದ ಏಕಲವ್ಯ ರೋಲರ್ ಸ್ಕೇಟಿಂಗ್ ಸಂಸ್ಥೆಯ 7 ಜನ ಕ್ರೀಡಾಪಟುಗಳಾದ, ಮಹ್ಮದ್ ಆಹಿಲ್ ಎಂ ಅಕ್ಕಲಕೋಟ್, ಹೃದಯಾನಂದ ಅರವಿಂದ ಕೊಪ್ಪ, ಅಬ್ದುಲ್ ರಜಾಕ್ ಗುಡ್ನಾಳ, ವಿಕ್ರಾಂತ ಶಾರದಳ್ಳಿ, ಶಕುಂತಲಾ ಶಾರದಳ್ಳಿ, ಪೃತ್ವಿಗೌಡ ಪಾಟೀಲ್, ನುಮಾನ ಹಾದಿಮನಿ, ಟೀಮ್ ಮ್ಯಾನೇಜರ್ ಆಗಿ ಉಮಾ ಶಾರದಳ್ಳಿ ಅವರು ತರಬೇತಿ ಶಿಬಿರ ಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಿವಕುಮಾರ ಶಾರದಳ್ಳಿ ಉತ್ತರ ಕರ್ನಾಟಕ ಮತ್ತು ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ್ಯಾಂಡಿ ಅಸೋಸಿಯೇಷನ, ಗುರುಮೂರ್ತಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬ್ಯಾಂಡಿ ಅಸೋಸಿಯೇಷನ್ ತಿಳಿಸಿದ್ದಾರೆ.

ತರಬೇತಿ ಬಳಿಕ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಹಾಗೂ ಇತರೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಈ ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಏನಿದು ಬ್ಯಾಂಡಿ(ಐಸ್) ಹಾಕಿ: ಸಾಮಾನ್ಯವಾಗಿ
ಹಾಕಿ ಚಿರಪರಿಚಿತ ಕ್ರೀಡೆ ಆದರೆ, ಇತ್ತೀಚೆಗೆ ಬ್ಯಾಂಡಿ ಹಾಕಿ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದೆ. ಸಾಂಪ್ರದಾಯಿಕ ಹಾಕಿಗಿಂತ ಈ ಆಟದ ನಿಯಮಗಳು ಭಿನ್ನವಾಗಿವೆ. ಬ್ಯಾಂಡಿ ಚಳಿಗಾಲದ ಕ್ರೀಡೆಯಾಗಿದೆ. ಪಂದ್ಯಗಳು ಹಿಮಾವೃತ ನೆಲದಲ್ಲಿ ನಡೆಯುತ್ತದೆ. ಐಸ್ ಹಾಕಿ(ಬ್ಯಾಂಡಿ) ಯನ್ನು ದೊಡ್ಡದಾದ ಸಮತಟ್ಟಾದ ಐಸ್ ಮೇಲೆ, ಮೂರು ಇಂಚಿನ (76.2 ಮಿ.ಮೀ) ವಿಸ್ತೀರ್ಣವುಳ್ಳ ಬಿರುಸು ಅಥವಾ ಮೆದು ರಬ್ಬರ್‌ನ ಪಕ್ ಎಂದು ಕರೆಯಲ್ಪಡುವ ಡಿಸ್ಕ್ ನಿಂದ ಆಡಲಾಗುತ್ತದೆ. ಪಕ್ ಅನ್ನು ಉನ್ನತ ಶ್ರೇಣಿಯ ಆಟಗಳಲ್ಲಿ ಐಸ್‌ನ‌ ಮೇಲೆ ಜಿಗಿತ ಮತ್ತು ಘರ್ಷಣೆಯನ್ನು ಕಡಿಮೆ ಮಾಡಲು ಗಟ್ಟಿಗೊಳಿಸಲಾಗಿರುತ್ತದೆ. ಎರಡು ಸ್ಟೇಟರ್ ತಂಡಗಳ ಮಧ್ಯೆ ಆಟದ ಸ್ಪರ್ಧೆ ಏರ್ಪಡುತ್ತದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ