Seven athletes from Vijayapur district have been selected for bandy hockey training

ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಬ್ಯಾಂಡಿ ಹಾಕಿ ತರಬೇತಿಗೆ ವಿಜಯಪುರ ಜಿಲ್ಲೆಯ ಏಳು ಕ್ರೀಡಾಪಟುಗಳು ಆಯ್ಕೆ

ಮುದ್ದೇಬಿಹಾಳ: ಹಾಕಿ ಬಳಿಕ ಇದೀಗ ಬ್ಯಾಂಡಿ ಹಾಕಿಯಲ್ಲಿ ಮಿಂಚಲು ವಿಜಯಪುರ ಜಿಲ್ಲೆಯ ಪ್ರತಿಭೆಗಳು ಸಿದ್ದರಾಗಿದ್ದಾರೆ.

ಐಸ್ ಸ್ಕೇಟಿಂಗ ಗುರಗಾಂವ್ (ದೆಹಲಿ) ನಲ್ಲಿ ಆಗಸ್ಟ್ 4 ರಿಂದ 6 ರ ವರೆಗೆ ನಡೆಯುವ ಹಾಕಿ ಬ್ಯಾಂಡಿ ಕ್ರೀಡಾ ತರಬೇತಿ ಶಿಬಿರದಲ್ಲಿ
ಮುದ್ದೇಬಿಹಾಳ ಪಟ್ಟಣದ ಏಕಲವ್ಯ ರೋಲರ್ ಸ್ಕೇಟಿಂಗ್ ಸಂಸ್ಥೆಯ 7 ಜನ ಕ್ರೀಡಾಪಟುಗಳಾದ, ಮಹ್ಮದ್ ಆಹಿಲ್ ಎಂ ಅಕ್ಕಲಕೋಟ್, ಹೃದಯಾನಂದ ಅರವಿಂದ ಕೊಪ್ಪ, ಅಬ್ದುಲ್ ರಜಾಕ್ ಗುಡ್ನಾಳ, ವಿಕ್ರಾಂತ ಶಾರದಳ್ಳಿ, ಶಕುಂತಲಾ ಶಾರದಳ್ಳಿ, ಪೃತ್ವಿಗೌಡ ಪಾಟೀಲ್, ನುಮಾನ ಹಾದಿಮನಿ, ಟೀಮ್ ಮ್ಯಾನೇಜರ್ ಆಗಿ ಉಮಾ ಶಾರದಳ್ಳಿ ಅವರು ತರಬೇತಿ ಶಿಬಿರ ಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಿವಕುಮಾರ ಶಾರದಳ್ಳಿ ಉತ್ತರ ಕರ್ನಾಟಕ ಮತ್ತು ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ್ಯಾಂಡಿ ಅಸೋಸಿಯೇಷನ, ಗುರುಮೂರ್ತಿ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬ್ಯಾಂಡಿ ಅಸೋಸಿಯೇಷನ್ ತಿಳಿಸಿದ್ದಾರೆ.

ತರಬೇತಿ ಬಳಿಕ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಹಾಗೂ ಇತರೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಈ ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಏನಿದು ಬ್ಯಾಂಡಿ(ಐಸ್) ಹಾಕಿ: ಸಾಮಾನ್ಯವಾಗಿ
ಹಾಕಿ ಚಿರಪರಿಚಿತ ಕ್ರೀಡೆ ಆದರೆ, ಇತ್ತೀಚೆಗೆ ಬ್ಯಾಂಡಿ ಹಾಕಿ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದೆ. ಸಾಂಪ್ರದಾಯಿಕ ಹಾಕಿಗಿಂತ ಈ ಆಟದ ನಿಯಮಗಳು ಭಿನ್ನವಾಗಿವೆ. ಬ್ಯಾಂಡಿ ಚಳಿಗಾಲದ ಕ್ರೀಡೆಯಾಗಿದೆ. ಪಂದ್ಯಗಳು ಹಿಮಾವೃತ ನೆಲದಲ್ಲಿ ನಡೆಯುತ್ತದೆ. ಐಸ್ ಹಾಕಿ(ಬ್ಯಾಂಡಿ) ಯನ್ನು ದೊಡ್ಡದಾದ ಸಮತಟ್ಟಾದ ಐಸ್ ಮೇಲೆ, ಮೂರು ಇಂಚಿನ (76.2 ಮಿ.ಮೀ) ವಿಸ್ತೀರ್ಣವುಳ್ಳ ಬಿರುಸು ಅಥವಾ ಮೆದು ರಬ್ಬರ್‌ನ ಪಕ್ ಎಂದು ಕರೆಯಲ್ಪಡುವ ಡಿಸ್ಕ್ ನಿಂದ ಆಡಲಾಗುತ್ತದೆ. ಪಕ್ ಅನ್ನು ಉನ್ನತ ಶ್ರೇಣಿಯ ಆಟಗಳಲ್ಲಿ ಐಸ್‌ನ‌ ಮೇಲೆ ಜಿಗಿತ ಮತ್ತು ಘರ್ಷಣೆಯನ್ನು ಕಡಿಮೆ ಮಾಡಲು ಗಟ್ಟಿಗೊಳಿಸಲಾಗಿರುತ್ತದೆ. ಎರಡು ಸ್ಟೇಟರ್ ತಂಡಗಳ ಮಧ್ಯೆ ಆಟದ ಸ್ಪರ್ಧೆ ಏರ್ಪಡುತ್ತದೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ