T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ 7 ಆಟಗಾರರು ಕಾಣಿಸಿಕೊಂಡಿಲ್ಲ. ಅಂದರೆ 2024 ರಲ್ಲಿ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಏಳು ಪ್ಲೇಯರ್ಸ್ ಈ ಬಾರಿ ತಂಡದಲ್ಲಿಲ್ಲ. ಹೀಗೆ ಭಾರತ ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿರುವ ಆಟಗಾರರು ಯಾರೆಂದರೆ…?

ಯಶಸ್ವಿ ಜೈಸ್ವಾಲ್: 2024 ಟಿ20 ವಿಶ್ವಕಪ್​ ತಂಡದಲ್ಲಿ ಹೆಚ್ಚುವರಿ ಆರಂಭಿಕ ದಾಂಡಿಗನಾಗಿ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದರು. ಎರಡು ವರ್ಷಗಳ ಹಿಂದೆ 15 ಸದಸ್ಯರುಗಳ ಬಳಗದಲ್ಲಿದ್ದ ಜೈಸ್ವಾಲ್​ ಮುಂಬರುವ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿಲ್ಲ.

ರಿಷಭ್ ಪಂತ್: ಕಳೆದ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿದ್ದ ರಿಷಭ್ ಪಂತ್ ಅವರನ್ನು ಸಹ ಈ ಬಾರಿ ಕೈ ಬಿಡಲಾಗಿದೆ. ಅವರ ಬದಲಿಗೆ ಈ ಬಾರಿ ಭಾರತ ತಂಡದಲ್ಲಿ ವಿಕೆಟ್ ಕೀಪರ್​​ಗಳಾಗಿ ಆಯ್ಕೆಯಾಗಿರುವುದು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್.

ಯುಜ್ವೇಂದ್ರ ಚಹಲ್: ಟಿ20 ವಿಶ್ವಕಪ್ 2024 ರಲ್ಲಿ ಭಾರತ ತಂಡದಲ್ಲಿ ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಲ್ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರಿಗೆ ಆಡುವ ಬಳಗದಲ್ಲಿ ಸ್ಥಾನ ಲಭಿಸಿರಲಿಲ್ಲ. ಇದೀಗ ಮುಂಬರುವ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲಿ ಚಹಲ್​ಗೆ ಸ್ಥಾನ ನೀಡಲಾಗಿಲ್ಲ.

ಮೊಹಮ್ಮದ್ ಸಿರಾಜ್: 2024ರ ಟಿ20 ವಿಶ್ವಕಪ್​ನಲ್ಲಿ ಜಸ್​ಪ್ರೀತ್ ಬುಮ್ರಾ ಜೊತೆಗೂಡಿ ಮೊಹಮ್ಮದ್ ಸಿರಾಜ್ ಕೂಡ ದಾಳಿ ಸಂಘಟಿಸಿದ್ದರು. ಆದರೆ ಈ ಬಾರಿ ಟೀಮ್ ಇಂಡಿಯಾದ 15 ಸದಸ್ಯರುಗಳ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಿರಾಜ್ ವಿಫಲರಾಗಿದ್ದಾರೆ.

ರೋಹಿತ್ ಶರ್ಮಾ: ಟಿ20 ವಿಶ್ವಕಪ್ 2024 ರಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ರೋಹಿತ್ ಶರ್ಮಾ. ಹಿಟ್​ಮ್ಯಾನ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿತ್ತು. ಭಾರತ ತಂಡವು ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಈ ಬಾರಿಯ ಭಾರತ ತಂಡದಲ್ಲಿ ಅವರು ಕಾಣಿಸಿಕೊಂಡಿಲ್ಲ.

ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮತ್ತೋರ್ವ ಆಟಗಾರ ವಿರಾಟ್ ಕೊಹ್ಲಿ. 2024 ರ ಟಿ20 ವಿಶ್ವಕಪ್​ ಫೈನಲ್ ಪಂದ್ಯದೊಂದಿಗೆ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಅವರು ಸಹ ಪ್ರಸ್ತುತ ಟಿ20 ತಂಡದಲ್ಲಿ ಕಾಣಿಸಿಕೊಂಡಿಲ್ಲ.

ರವೀಂದ್ರ ಜಡೇಜಾ: ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಬಳಿಕ ಟಿ20 ವಿಶ್ವಕಪ್ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮೂರನೇ ಆಟಗಾರ ರವೀಂದ್ರ ಜಡೇಜಾ. 2024 ರಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಜಡ್ಡು ಸದ್ಯ ಟೆಸ್ಟ್ ಹಾಗೂ ಏಕದಿನ ತಂಡಗಳಲ್ಲಿ ಮಾತ್ರ ಮುಂದುವರೆದಿದ್ದಾರೆ. ಹೀಗಾಗಿ ಅವರು ಸಹ 2026ರ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡಿಲ್ಲ.

2026ರ ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ