T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ 7 ಆಟಗಾರರು ಕಾಣಿಸಿಕೊಂಡಿಲ್ಲ. ಅಂದರೆ 2024 ರಲ್ಲಿ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಏಳು ಪ್ಲೇಯರ್ಸ್ ಈ ಬಾರಿ ತಂಡದಲ್ಲಿಲ್ಲ. ಹೀಗೆ ಭಾರತ ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿರುವ ಆಟಗಾರರು ಯಾರೆಂದರೆ…?

ಯಶಸ್ವಿ ಜೈಸ್ವಾಲ್: 2024 ಟಿ20 ವಿಶ್ವಕಪ್​ ತಂಡದಲ್ಲಿ ಹೆಚ್ಚುವರಿ ಆರಂಭಿಕ ದಾಂಡಿಗನಾಗಿ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದರು. ಎರಡು ವರ್ಷಗಳ ಹಿಂದೆ 15 ಸದಸ್ಯರುಗಳ ಬಳಗದಲ್ಲಿದ್ದ ಜೈಸ್ವಾಲ್​ ಮುಂಬರುವ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿಲ್ಲ.

ರಿಷಭ್ ಪಂತ್: ಕಳೆದ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿದ್ದ ರಿಷಭ್ ಪಂತ್ ಅವರನ್ನು ಸಹ ಈ ಬಾರಿ ಕೈ ಬಿಡಲಾಗಿದೆ. ಅವರ ಬದಲಿಗೆ ಈ ಬಾರಿ ಭಾರತ ತಂಡದಲ್ಲಿ ವಿಕೆಟ್ ಕೀಪರ್​​ಗಳಾಗಿ ಆಯ್ಕೆಯಾಗಿರುವುದು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್.

ಯುಜ್ವೇಂದ್ರ ಚಹಲ್: ಟಿ20 ವಿಶ್ವಕಪ್ 2024 ರಲ್ಲಿ ಭಾರತ ತಂಡದಲ್ಲಿ ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಲ್ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರಿಗೆ ಆಡುವ ಬಳಗದಲ್ಲಿ ಸ್ಥಾನ ಲಭಿಸಿರಲಿಲ್ಲ. ಇದೀಗ ಮುಂಬರುವ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲಿ ಚಹಲ್​ಗೆ ಸ್ಥಾನ ನೀಡಲಾಗಿಲ್ಲ.

ಮೊಹಮ್ಮದ್ ಸಿರಾಜ್: 2024ರ ಟಿ20 ವಿಶ್ವಕಪ್​ನಲ್ಲಿ ಜಸ್​ಪ್ರೀತ್ ಬುಮ್ರಾ ಜೊತೆಗೂಡಿ ಮೊಹಮ್ಮದ್ ಸಿರಾಜ್ ಕೂಡ ದಾಳಿ ಸಂಘಟಿಸಿದ್ದರು. ಆದರೆ ಈ ಬಾರಿ ಟೀಮ್ ಇಂಡಿಯಾದ 15 ಸದಸ್ಯರುಗಳ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಿರಾಜ್ ವಿಫಲರಾಗಿದ್ದಾರೆ.

ರೋಹಿತ್ ಶರ್ಮಾ: ಟಿ20 ವಿಶ್ವಕಪ್ 2024 ರಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ರೋಹಿತ್ ಶರ್ಮಾ. ಹಿಟ್​ಮ್ಯಾನ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿತ್ತು. ಭಾರತ ತಂಡವು ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಈ ಬಾರಿಯ ಭಾರತ ತಂಡದಲ್ಲಿ ಅವರು ಕಾಣಿಸಿಕೊಂಡಿಲ್ಲ.

ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮತ್ತೋರ್ವ ಆಟಗಾರ ವಿರಾಟ್ ಕೊಹ್ಲಿ. 2024 ರ ಟಿ20 ವಿಶ್ವಕಪ್​ ಫೈನಲ್ ಪಂದ್ಯದೊಂದಿಗೆ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಅವರು ಸಹ ಪ್ರಸ್ತುತ ಟಿ20 ತಂಡದಲ್ಲಿ ಕಾಣಿಸಿಕೊಂಡಿಲ್ಲ.

ರವೀಂದ್ರ ಜಡೇಜಾ: ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಬಳಿಕ ಟಿ20 ವಿಶ್ವಕಪ್ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮೂರನೇ ಆಟಗಾರ ರವೀಂದ್ರ ಜಡೇಜಾ. 2024 ರಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಜಡ್ಡು ಸದ್ಯ ಟೆಸ್ಟ್ ಹಾಗೂ ಏಕದಿನ ತಂಡಗಳಲ್ಲಿ ಮಾತ್ರ ಮುಂದುವರೆದಿದ್ದಾರೆ. ಹೀಗಾಗಿ ಅವರು ಸಹ 2026ರ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡಿಲ್ಲ.

2026ರ ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ