Shankara Hebba is the unopposed choice for Banashankari Patta's cooperative society

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಂಕರ ಈ. ಹೆಬ್ಬಾಳ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.

ಇಲ್ಲಿನ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ತುರ್ತು ಸಭೆಯಲ್ಲಿ ಸರ್ವ ಸದಸ್ಯರು ಈ ಆಯ್ಕೆಗೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು.

ಸಂಘದ ಈ ಹಿಂದಿನ ಅಧ್ಯಕ್ಷರಾಗಿದ್ದ ಬಸಪ್ಪ ಹೆಬ್ಬಾಳ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಿರ್ದೇಶಕ ಶಂಕರ ಹೆಬ್ಬಾಳ ಅವರನ್ನು ಅಧ್ಯಕ್ಷರಾಗಿ ಸರ್ವ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಸಂಘದ ಪ್ರಧಾನ ವ್ಯವಸ್ಥಾಪಕರಾದ ವಿಜಯಲಕ್ಷ್ಮಿ ಪ್ಯಾಟಿಗೌಡರ ತಿಳಿಸಿದರು.

ಬಸಪ್ಪ ಹೆಬ್ಬಾಳ ಅವರ ನಿಧನದಿಂದ ತೆರವಾದ ನಿರ್ದೇಶಕ ಸ್ಥಾನಕ್ಕೆ ಅವರ ಪುತ್ರ ಚಂದ್ರಕಾಂತ ಹೆಬ್ಬಾಳ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಮೇಶ ಹೆಬ್ಬಾಳ, ನಿರ್ದೇಶಕರಾದ ಸಂಗಪ್ಪ ಕಲ್ಲುಂಡಿ, ಸುಭಾಷ ರುದ್ರಗಂಟಿ, ಉಮೇಶ ಪ್ಯಾಟಿಗೌಡರ, ದ್ಯಾವಪ್ಪ ಹುಣಶ್ಯಾಳ, ಬಸಪ್ಪ ಹುಣಶ್ಯಾಳ, ಬಸವರಾಜ ಅಗಸಬಾಳ, ಶಂಕ್ರಮ್ಮ ಪ್ಯಾಟಿಗೌಡರ, ಜಯಶ್ರೀ ಹೆಬ್ಬಾಳ, ಚಂದ್ರಕಾಂತ ಹೆಬ್ಬಾಳ ಇದ್ದರು.

ಪ್ರಧಾನ ವ್ಯವಸ್ಥಾಪಕರಾದ ವಿಜಯಲಕ್ಷ್ಮಿ ಪ್ಯಾಟಿಗೌಡರ ನಿರೂಪಿಸಿ ವಂದಿಸಿದರು. ಅಗಲಿದ ಹಿಂದಿನ ಅಧ್ಯಕ್ಷ ಬಸಪ್ಪ ಹೆಬ್ಬಾಳ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು.

ಮುದ್ದೇಬಿಹಾಳದಲ್ಲಿ ಕಳೆದ ಇಪ್ಪತೈದು ವರ್ಷಗಳ ಹಿಂದೆ ಆರಂಭಗೊಂಡಿರುವ ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ನನ್ನನ್ನು ಆಯ್ಕೆ ಮಾಡಿರುವ ಸರ್ವ ಆಡಳಿತ ಮಂಡಳಿ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.ನನ್ನ ಅವಧಿಯಲ್ಲಿ ಸಂಘದ ಗ್ರಾಹಕರು, ಶೇರುದಾರರ ವಿಶ್ವಾಸ ವೃದ್ಧಿಸಿ ಸಿಬ್ಬಂದಿಯ ಸಹಕಾರದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ.
–ಶಂಕರ ಈ.ಹೆಬ್ಬಾಳ,ಅಧ್ಯಕ್ಷ, ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘ

Latest News

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ ;ಅಂಜುಮನ್‌ಗೆ 92.95% ರಷ್ಟು ಮತದಾನ

ಮುದ್ದೇಬಿಹಾಳ : ತೀವ್ರ ತುರುಸಿನಿಂದ ಕೂಡಿದ ಇಲ್ಲಿನ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ಸೋಮವಾರ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು ಒಟ್ಟು ಶೇ.92.95ರಷ್ಟು ಮತದಾನ ಆಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಒಟ್ಟು 2625 ಮತದಾರರಲ್ಲಿ 2440 ಮತದಾರರು ತಮ್ಮ ಹಕ್ಕು ಚಲಾಯಿಸಿದರು.ಆರಂಭದಲ್ಲಿ ಚುರುಕುಗೊಂಡಿದ್ದ ಮತದಾನ ಪ್ರಕ್ರಿಯೆ ಮದ್ಯಾಹ್ನದ ಹೊತ್ತಿಗೆ ಮಂದಗತಿಯಲ್ಲಿ ಸಾಗಿತ್ತು.ಅಂತಿಮ ಸಮಯ ಮೀರುವ ಮುನ್ನವೇ ಬಹುತೇಕ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಒಂದು ಮತಗಟ್ಟೆಯಲ್ಲಿ ಇಬ್ಬರು ಮತದಾರರು ನಕಲಿ ಮತದಾನಕ್ಕೆ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ರಸ್ತೆ ಮಧ್ಯೆ ಬೆಂಕಿ ಹಚ್ಚಿ, ಟೈರ್‌ ಸುಡಲು ಯತ್ನಿಸಿದರು. ಪೊಲೀಸರು ಟೈರ್‌ ಅನ್ನು ಕುಸಿದುಕೊಂಡಾಗ ನೂಕಾಟ ಉಂಟಾಯಿತು. ಕಾರ್ಯಕರ್ತರು ಒಮ್ಮೆಲೆ ನುಗ್ಗಿದ್ದರಿಂದ ಕಾರ್ಯಕರ್ತರೊಬ್ಬರ ಪ್ಯಾಂಟ್‌ಗೆ ಬೆಂಕಿ ತಾಗಿದೆ. ಅಲ್ಪ ಪ್ರಮಾಣದಲ್ಲಿ