Shankara Hebba is the unopposed choice for Banashankari Patta's cooperative society

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಂಕರ ಈ. ಹೆಬ್ಬಾಳ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.

ಇಲ್ಲಿನ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ತುರ್ತು ಸಭೆಯಲ್ಲಿ ಸರ್ವ ಸದಸ್ಯರು ಈ ಆಯ್ಕೆಗೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು.

ಸಂಘದ ಈ ಹಿಂದಿನ ಅಧ್ಯಕ್ಷರಾಗಿದ್ದ ಬಸಪ್ಪ ಹೆಬ್ಬಾಳ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಿರ್ದೇಶಕ ಶಂಕರ ಹೆಬ್ಬಾಳ ಅವರನ್ನು ಅಧ್ಯಕ್ಷರಾಗಿ ಸರ್ವ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಸಂಘದ ಪ್ರಧಾನ ವ್ಯವಸ್ಥಾಪಕರಾದ ವಿಜಯಲಕ್ಷ್ಮಿ ಪ್ಯಾಟಿಗೌಡರ ತಿಳಿಸಿದರು.

ಬಸಪ್ಪ ಹೆಬ್ಬಾಳ ಅವರ ನಿಧನದಿಂದ ತೆರವಾದ ನಿರ್ದೇಶಕ ಸ್ಥಾನಕ್ಕೆ ಅವರ ಪುತ್ರ ಚಂದ್ರಕಾಂತ ಹೆಬ್ಬಾಳ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರಮೇಶ ಹೆಬ್ಬಾಳ, ನಿರ್ದೇಶಕರಾದ ಸಂಗಪ್ಪ ಕಲ್ಲುಂಡಿ, ಸುಭಾಷ ರುದ್ರಗಂಟಿ, ಉಮೇಶ ಪ್ಯಾಟಿಗೌಡರ, ದ್ಯಾವಪ್ಪ ಹುಣಶ್ಯಾಳ, ಬಸಪ್ಪ ಹುಣಶ್ಯಾಳ, ಬಸವರಾಜ ಅಗಸಬಾಳ, ಶಂಕ್ರಮ್ಮ ಪ್ಯಾಟಿಗೌಡರ, ಜಯಶ್ರೀ ಹೆಬ್ಬಾಳ, ಚಂದ್ರಕಾಂತ ಹೆಬ್ಬಾಳ ಇದ್ದರು.

ಪ್ರಧಾನ ವ್ಯವಸ್ಥಾಪಕರಾದ ವಿಜಯಲಕ್ಷ್ಮಿ ಪ್ಯಾಟಿಗೌಡರ ನಿರೂಪಿಸಿ ವಂದಿಸಿದರು. ಅಗಲಿದ ಹಿಂದಿನ ಅಧ್ಯಕ್ಷ ಬಸಪ್ಪ ಹೆಬ್ಬಾಳ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು.

ಮುದ್ದೇಬಿಹಾಳದಲ್ಲಿ ಕಳೆದ ಇಪ್ಪತೈದು ವರ್ಷಗಳ ಹಿಂದೆ ಆರಂಭಗೊಂಡಿರುವ ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ ನನ್ನನ್ನು ಆಯ್ಕೆ ಮಾಡಿರುವ ಸರ್ವ ಆಡಳಿತ ಮಂಡಳಿ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.ನನ್ನ ಅವಧಿಯಲ್ಲಿ ಸಂಘದ ಗ್ರಾಹಕರು, ಶೇರುದಾರರ ವಿಶ್ವಾಸ ವೃದ್ಧಿಸಿ ಸಿಬ್ಬಂದಿಯ ಸಹಕಾರದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ.
–ಶಂಕರ ಈ.ಹೆಬ್ಬಾಳ,ಅಧ್ಯಕ್ಷ, ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘ

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ