Shivaji Murthy Unveiling Program: Srikanta Shetty is a Puneetha who fills the restricted seat

ಶಿವಾಜಿ ಮೂರ್ತಿ ಅನಾವರಣ ಕಾರ್ಯಕ್ರಮ: ಶ್ರೀಕಾಂತ ಶೆಟ್ಟಿ ನಿರ್ಬಂಧದ ಸ್ಥಾನ ತುಂಬಿದ ಪುನೀತ

ಶಿವಾಜಿ ಮೂರ್ತಿ ಅನಾವರಣ ಕಾರ್ಯಕ್ರಮ: ಶ್ರೀಕಾಂತ ಶೆಟ್ಟಿ ನಿರ್ಬಂಧದ ಸ್ಥಾನ ತುಂಬಿದ ಪುನೀತ

ಭಾರತ ಸ್ವರ್ಗಕ್ಕೆ ದ್ವಾರ ; ಪುನೀತ ಕೆರೆಹಳ್ಳಿ

ಮುಧೋಳ: ಭಾರತ ಸ್ವರ್ಗಕ್ಕೆ ದ್ವಾರ ಇಲ್ಲಿ ಹುಟ್ಟಿದವರು ಎಲ್ಲವನ್ನೂ ದೈವಸಮಾನವಾಗಿ ಕಾಣುತ್ತಾರೆ ಇಲ್ಲಿನ ಸಂಸ್ಕಾರ ಸಂಸ್ಕೃತಿ ಅಂತದ್ದು ಎಂದು‌ ದೇವಾನುದೇವತೆಗಳು‌ ಭಾರತದ ಬಗ್ಗೆ ಮೆಚ್ಚುವೆ ವ್ಯಕ್ತಪಡಿಸಿದ್ದಾರೆ.

ನಮ್ಮಲ್ಲಿ‌‌ ರಾಜರ ಆಡಳಿತವಿದ್ದಾಗ. ಪ್ರತಿಯೊಬ್ಬ‌ ರಾಜ ತಾನು ಯುದ್ದಗೆದ್ದ ಬಳಿಕ‌ ಜಯದ ಸಂಕೇತವಾಗಿ ಒಂದು ದೇವಾಲಯ ಕಟ್ಟಿಸುತ್ತಿದ್ದರು. ಇಂತಹ ಸುಸಂಸ್ಕೃತ ರಾಷ್ಟ್ರದ‌‌ ಮೇಲೆ‌ ಇಸ್ಲಾಂ‌ ಧರ್ಮದ‌ ಕ್ರೂರತೆಯ ದಾಳಿ‌ ನಡೆದು‌ ನಮ್ಮ ಸಂಸ್ಕೃತಿಯ ಮೇಲೆ‌ ಹಾನಿಯೆಸಗಿತು ಎಂದು ಪುನೀತ ಕೆರೆಹಳ್ಳಿ ಹೇಳಿದರು.

ಶನಿವಾರ ನಗರದ ವೆಂಕಟೇಶ ಮಹಾರಾಜ ಕೆರೆಯ ಹತ್ತಿರ ಶಿವಾಜಿ ನಗರದಲ್ಲಿ  ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಮೂರ್ತಿ ಅನಾವರಣಾ ಸಮಾರಂಭದಲ್ಲಿ ಅನೀರಿಕ್ಷಿತವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಧರ್ಮಪಾಲನೆಗೆ ಹೆಸರಾಗಿದ್ದ ಪೃಥ್ವಿರಾಜ್‌ ಚೌವಾಣ ಮಹ್ಮದ ಘೋರಿಯ ಸೈನ್ಯ ನಿರಾಯುಧವಾಗಿದ್ದಾಗ ಕತ್ತಿ‌ ಎತ್ತುವುದಿಲ್ಲ‌. ಆದರೆ ಸೂರ್ಯಾಸ್ತದ ಸಮಯದಲ್ಲಿ‌ ನಿರಾಯಧರಾದ ಪೃಥ್ವಿರಾಜ್‌ ಚೌವಾಣ್ ಸೈನ್ಯದ ಮೇಲೆ ಘೋರಿ ದಾಳಿ‌ ಮಾಡಿ ಮೋಸದಿಂದ ಯುದ್ದ ಗೆಲ್ಲುತ್ತಾನೆ. ಇಸ್ಲಾಮಿಗರಿಗೆ ನಿಯತ್ತು ಇಲ್ಲ ಎಂಬುದು ಇತಿಹಾಸದಿಂದಲೇ‌ ಗೊತ್ತಾಗುತ್ತದೆ ಎಂದರು.

ನಮ್ಮ ರಾಜರು ಆರಂಭದಲ್ಲಿ ಯದ್ದವನ್ನು ಸೋತಿರುವ ಇತಿಹಾಸವೇ ಇಲ್ಲ. ಆದರೆ ನಾವು ಧರ್ಮಪಾಲನೆಯಿಂದ‌ ಯುದ್ದವನ್ನು ಸೋತಿರುವೆವು. ಆದರೂ ಇಂದಿಗೂ ನಮ್ಮ ಧರ್ಮ ತನ್ನ ಶ್ರೇಷ್ಠತೆ ಕಾಪಾಡಿಕೊಳ್ಳುವುದಕ್ಕೆ ನಮ್ಮ ಧರ್ಮನಿಷ್ಠೆಯೇ‌ ಕಾರಣ ಎಂದರು.

ರಜಪೂತರು ನಮ್ಮ ಧರ್ಮ‌ ರಕ್ಷಣೆಗೆ ಅಪಾರ‌ ಕೊಡುಗೆ ನೀಡಿದ್ದಾರೆ ಒಬ್ಬರ ನಂತರ‌ ಒಬ್ಬರಂತೆ‌ ಮುಸ್ಲಿಂ ರಾಜರು ಮುಕ್ಕಾಲು ಭಾಗ ಭಾರತವನ್ನು‌ ವಶಪಡಿಸಿಕೊಂಡಿರುತ್ತಾರೆ. 15-16ನೇ ಶತಮಾನದಲ್ಲಿ ದಕ್ಷಿಣ ಭಾರತದಲ್ಲಿ‌ ಓರ್ವ ಜಹಾಗೀರದಾರನ ಮಗನಾಗಿ ಹುಟ್ಟಿ ಛತ್ರಪತಿ‌ ಶಿವಾಜಿ‌ ಮಹಾರಾಜ ಕ್ರೌರ್ಯಕ್ಕೆ ಕ್ರೌರ್ಯ, ಶೌರ್ಯಕ್ಕೆ‌ ಶೌರ್ಯದಿಂದ ವೈರಿಗಳ‌ ಭಾಷೆಯಲ್ಲಿಯೇ ಉತ್ತರ ನೀಡಿ‌ ಹಿಂದು ಧರ್ಮರಕ್ಷಣೆಗೆ ಕಂಕಣ ಕಟ್ಟಿ‌ನಿಂತ ಕೀರ್ತಿ‌ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ ಎಂದರು.

  ಕನ್ಹೇರಿಮಠದ ಶ್ರೀ ಅದೃಷ್ಯ ಕಾಡಸಿದ್ದೇಶ್ವರ ಮಹಾ ಸ್ವಾಮೀಜಿ ಮಾತನಾಡಿ ಶಿವಾಜಿ ಮಹಾರಾಜರ ತತ್ವ ಆದರ್ಶ ಇಂದಿನ‌ಜನರಿಗೆ ಸ್ಪೂರ್ತಿ ಅವರಲ್ಲಿನ ಶೌರ್ಯ,ಸಾಹಸದ ವ್ಯಕ್ತಿತ್ವ ಅನುಕರಣೀಯ ಎಂದು ಅವರ ಜೀವನದ ಹಲವಾರು ಘಟನೆಗಳನ್ನು ನೆನಪಿಸಿದರು.

 ಶಿರೋಳದ ರಾಮಾರೂಢ ಮಠದ ಶ್ರೀ ಶಂಕರಾರೂಢ ಮಹಾ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಶ್ಯಾಮ‌ ನಿಂಬಾಳಕರ, ಆನಂದ ತೋಟದಾರ,ಸುರೇಶ ಶಿಂಧೆ,ಯುವರಾಜ ಪವಾರ,ಸಾಗರ ರಜಪೂತ ,ಮಂಜುನಾಥ ಘೋರ್ಪಡೆ,ಸುನೀಲ ನಿಂಬಾಳಕರ,ಸದಾ ಜಾದವ ಸೇರಿದಂತೆ ಇತರರು ಇದ್ದರು.

ಶ್ರೀ ಕಾಂತ ಶೆಟ್ಟಿಗೆ‌ ನಿರ್ಬಂಧ ಕೋಮು ಸಾಮರಸ್ಯಕ್ಕೆ ಧಕ್ಕೆ : ನಗರದ ಶಿವಾಜಿ ನಗರದಲ್ಲಿ ಹಿಂದು ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜ ಅವರ ಕಂಚಿನ ಮೂರ್ತಿ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಾರಿ ಪ್ರಮಾಣದಲ್ಲಿ ಹಿಂದು ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಮುಖ್ಯ ಭಾಷಣಕಾರರಾಗಿ ಶ್ರೀಕಾಂತ ಶೆಟ್ಟಿ ಪಾಲ್ಗೊಳ್ಳುವವರಿದ್ದರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದನ್ನು ತಡೆಯಲು ಅವರಿಗೆ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಗರ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು, ಮತೀಯವಾಗಿ ಸಣ್ಣ ಘಟನೆ ಸಂಭವಿಸಿದರೂ ರಾಜ್ಯ, ರಾಷ್ಟ್ರ ವ್ಯಾಪ್ತಿಯಲ್ಲಿ ಪ್ರಚಾರ ಪಡೆಯುತ್ತದೆ. ಬಳಿಕ ವಿವಿಧ ಅನ್ಯ ಧಮೀರ್ಯ ನಾಯಕರು ಭೇಟಿ ನೀಡಿ ಭಾಷಣ ಮಾಡುವುದರಿಂದ ಸಾಮರಸ್ಯದ ಜೀವನಕ್ಕೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಭವ ಇರುತ್ತದೆ. ಮುಧೋಳದಲ್ಲಿದ್ದ ಮತೀಯ ದ್ವೇಷಮಯ ವಾತಾವರಣ ತಿಳಿಯಾಗುತ್ತಿದ್ದು, ಉಭಯ ಕೋಮಿನವರು ಹಿಂದಿನ ಕಹಿ ಘಟನೆ ಮರೆತು ಸಾಮರಸ್ಯದಿಂದ ಇದ್ದಾರೆ. ಮತ್ತೆ ಈ ಪ್ರದೇಶದಲ್ಲಿ ಶ್ರೀಕಾಂತ ಶೆಟ್ಟಿ ಪ್ರಚೋದನಕಾರಿ ಭಾಷಣ ಮಾಡಿ, ಕೋಮು ಸಾಮರಸ್ಯ ಹದಗೆಡಬಹುದು. ಅವರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ವಿವಿಧೆಡೆ ಪ್ರಕರಣವೂ ದಾಖಲಾಗಿದೆ ಎಂಬ ಒಕ್ಕಣೆ ಜಿಲ್ಲಾಡಳಿತದ ಆದೇಶದಲ್ಲಿದೆ. ಈ ಕಾರಣಕ್ಕಾಗಿ ಅವರ ಬದಲಿಗೆ ಪುನೀತ ಕೆರೆಹಳ್ಳಿ ಅಗಮಿಸಿ ಭಾಷಣ ಮಾಡಿದರು.

ನಗರದೆಲ್ಲೆಡೆ ಪೋಲಿಸ್ ಬಂದೂಬಸ್ತ ಎದ್ದು ಕಾಣುತ್ತಿತ್ತು ಯಾವೂದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ