ಚೆನ್ನೈ: ಬೆಂಗಳೂರಿನ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಸಂಬಂಧ ತಾವು ಈ ಹಿಂದೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ (Shobha karandlaje) ಮತ್ತೊಮ್ಮೆ ತಮಿಳುನಾಡಿನ ಜನರ ಕ್ಷಮೆ ಕೋರಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada
ಈ ಕುರಿತು ಮದ್ರಾಸ್ ಹೈಕೋರ್ಟ್ಗೆ ಮಂಗಳವಾರ ಅಫಿಡವಿಟ್ ಸಲ್ಲಿಸಿರುವ ಶೋಭಾ ಕರಂದ್ಲಾಜೆ (Shobha karandlaje) ಅವರು, ನಾನು ತಮಿಳುನಾಡಿನ ಸಂಸ್ಕೃತಿ ಮತ್ತು ಜನರ ಬಗ್ಗೆ ನನಗೆ ಗೌರವವಿದೆ. ಈಗಾಗಲೇ ನಾನು ಕ್ಷಮೆಯಾಚಿಸಿದ್ದೇನೆ. ಆದರೂ ಮತ್ತೊಮ್ಮೆ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.
ಕಳೆದ ಮಾರ್ಚ್ 1 ರಂದು ಬೆಂಗಳೂರಿನ ಖಾಸಗಿ ಕೆಫೆಯಲ್ಲಿ ಸ್ಫೋಟಗೊಂಡ ಬಾಂಬ್ ತಮಿಳುನಾಡಿನವರೇ ಬಂದು ಇಟ್ಟು ಹೋಗಿದ್ದಾರೆ ಎಂಬ ಹೇಳಿಕೆಯನ್ನು ಶೋಭಾ ಕರಂದ್ಲಾಜೆ ವಾರು ನೀಡಿದ್ದರು.
ಇದನ್ನೂ ಓದಿ: Actor Darshan: ನಟ ದರ್ಶನ್ ಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ..! ಇನ್ನು ಎಷ್ಟು ದಿನ ‘ಡಿ ಬಾಸ್’ ಜೈಲಿನಲ್ಲಿರಬೇಕು?
ಈ ಕುರಿತು ಮಧುರೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆ ಮತ್ತೊಮ್ಮೆ ಕ್ಷಮೆಯಾಚಿಸಿದ್ದಾರೆ.