Rape in broad daylight in the middle of the road

Shocking news: ಕೋಲಾರದ ಮುನಿಯಪ್ಪನ ಮೊಬೈಲ್ ನಲ್ಲಿ ಹೆಣ್ಮಕ್ಕಳ 5000ಕ್ಕೂ ಹೆಚ್ಚು ನಗ್ನ ದೃಶ್ಯಗಳು!

Shocking news: ಕೋಲಾರದ ಮುನಿಯಪ್ಪನ ಮೊಬೈಲ್ ನಲ್ಲಿ ಹೆಣ್ಮಕ್ಕಳ 5000ಕ್ಕೂ ಹೆಚ್ಚು ನಗ್ನ ದೃಶ್ಯಗಳು!

ಕೋಲಾರ: ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಬಾಲಕಿಯರು ಬಟ್ಟೆ ಬದಲಿಸುವ ಸಮಯದ 5000ಕ್ಕೂ ಹೆಚ್ಚು ಫೋಟೋ ಹಾಗೂ ನೂರಾರು ವಿಡಿಯೋ ಸೆರೆಹಿಡಿದ ಆರೋಪ ಕೇಳಿ ಬಂದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪೋಕೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿಯಲ್ಲಿ ಚಿತ್ರಕಲಾ ಶಿಕ್ಷಕನೊಬ್ಬನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಪ್ರಕರಣ ಸಂಬಂಧ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಚಿತ್ರಕಲಾ ಶಿಕ್ಷಕ ಮುನಿಯಪ್ಪ (46) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಸಾರಾಸಗಟಾಗಿ ತಿರಸ್ಕರಿಸಿದೆ.

ಪೋಕೋ ಕಾಯ್ದೆ ಸೆಕ್ಷನ್ 11 ಪ್ರಕಾರ, ಮಕ್ಕಳ ದೇಹ ಅಥವಾ ದೇಹದ ಯಾವುದೇ ಭಾಗವನ್ನು ಅಸಭ್ಯ ರೀತಿಯಲ್ಲಿ ಪ್ರದರ್ಶಿಸು ವುದು ಲೈಂಗಿಕ ಕಿರುಕುಳವಾಗುತ್ತದೆ. ಈ ಅಪರಾಧವು ಕಾಯ್ದೆಯ ಸೆಕ್ಷನ್ 12ರಡಿ ಶಿಕ್ಷಾರ್ಹವಾಗಿದೆ.

ಪ್ರಕರಣದ ತನಿಖೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ದಾಖಲೆಗಳ ಪ್ರಕಾರ, ಅರ್ಜಿದಾರ ಐದು ಮೊಬೈಲ್ ಫೋನ್ ಹೊಂದಿದ್ದಾರೆ. ಪ್ರತಿ ಮೊಬೈಲ್‌ನಲ್ಲೂ ಸುಮಾರು ಒಂದು ಸಾವಿರ ಚಿತ್ರ ಮತ್ತು ಸಾವಿರಾರು ವಿಡಿಯೋಗಳಿರುವುದು ಆಘಾತ ಮೂಡಿಸಿದೆ.

ಇಷ್ಟು ಮೊಬೈಲ್‌ಗಳನ್ನು ಓರ್ವ ಚಿತ್ರಕಲಾ ಶಿಕ್ಷಕ ಏಕೆ ಹೊಂದಿದ್ದ? ಆ ವಿಡಿಯೋ ಹಾಗೂ ಚಿತ್ರಗಳು ಯಾವುವು? ಎಂಬುದುಪೂರ್ಣ ಪ್ರಮಾಣದತನಿಖೆ ಮತ್ತು ವಿಚಾರಣೆಯಿಂದಬಹಿರಂಗವಾಗಬೇಕಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಅಲ್ಲದೆ, ಅರ್ಜಿದಾರನ ಕೃತ್ಯವು ಭಯಾನಕತೆಗಿಂತ ಹೆಚ್ಚಿನ ಛಾಯೆ ಹೊಂದಿದೆ. ಒಬ್ಬ ಶಿಕ್ಷಕನಾಗಿ ಇಂತಹ ವಿಡಿಯೋ ಚಿತ್ರೀಕರಿಸಿರುವುದು ನಿಜಕ್ಕೂ ಅಸಭ್ಯ. ಶಿಕ್ಷಕನ ಈ ಕೃತ್ಯ ಕ್ಷಮಿಸುವಂಥದ್ದಲ್ಲ. ಈ ಕೃತ್ಯವಲ್ಲದೆ ಮತ್ಯಾವುದು ಅಪರಾಧವಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು.

ಅರ್ಜಿದಾರ ಪೂರ್ಣ ಪ್ರಮಾಣದ ವಿಚಾರಣೆಯಿಂದ ಆರೋಪಮುಕ್ತವಾಗಿ ಬರಲಿ. ಅದು ಬಿಟ್ಟು ಈ ಹಂತದಲ್ಲಿ ಪ್ರಕರಣ ರದ್ದುಪಡಿಸಿದರೆ ಶಿಕ್ಷಕನ ಅಕ್ರಮ ಚಟುವಟಿಕೆಗಳನ್ನು ಉತ್ತೇಜಿಸಿದಂತಾಗುತ್ತದೆ ಎಂದು ತೀಕ್ಷ್ಮವಾಗಿ ನುಡಿದ ನ್ಯಾಯಪೀಠ, ಅರ್ಜಿಯನ್ನು ತಿರಸ್ಕರಿಸಿ ಆದೇಶಿಸಿದೆ.

ಪ್ರಕರಣವೇನು?:

ಕೋಲಾರಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿಶಾಲೆಯೊಂದರಲ್ಲಿ ಚಿತ್ರಕಲಾ ಶಿಕ್ಷಕನಾಗಿ ಮುನಿಯಪ್ಪ ನೇಮಕಗೊಂಡಿದ್ದರು. ಈಗಲೂ ಅದೇ ಹುದ್ದೆಯಲ್ಲಿದ್ದಾರೆ. ವಸತಿ ಶಾಲೆಯಲ್ಲಿ ಬಟ್ಟೆ ಬದಲಿಸುವ ಸಮಯದಲ್ಲಿ ಬಾಲಕಿಯರ ಚಿತ್ರ ಹಾಗೂ ವಿಡಿಯೋವನ್ನು ತೆಗೆದ ಆರೋಪದ ಮೇಲೆ ಅರ್ಜಿದಾರರ ಬಗ್ಗೆ 2023ರ ಡಿ.15ರಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ನಿಯಂತ್ರಣ ಕೊಠಡಿ ಮೂಲಕ ದೂರು ಸ್ವೀಕರಿಸಿದ್ದರು. ನಂತರ ಮಾಸ್ತಿ ಪೊಲೀಸ್ ಠಾಣೆಯಲ್ಲಿ 2023ರ ಡಿ.17ರಂದು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಇದನ್ನೂ ಓದಿ: ಇಂದು ಈ‌ ರಾಶಿಯವರಿಗೆ ಭಾರೀ ಸಂಕಷ್ಟ!

ಈ ಎಫ್‌ಐಆರ್ ಮತ್ತು ಆ ಕುರಿತ ಕೋಲಾರ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ (ಪೋಕ್ಟೋ ವಿಶೇಷ ಕೋರ್ಟ್)ದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಮುನಿಯಪ್ಪ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದರು.

Latest News

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ 'ಸೆಂಟರ್ ಆಫ್ ಎಕ್ಸಲೆನ್ಸ್' ಸ್ಥಾಪನೆ, ಹಾಗೂ ಹೊಸ 'ಮತ್ಸ್ಯದರ್ಶಿನಿ'ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ತಾಲ್ಲೂಕು ಪದಾಧಿಕಾರಿಗಳು ಶಾಸಕ ಸಿ.ಎಸ್.ನಾಡಗೌಡ ಹಾಗೂ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಇಲಾಖೆಯಿಂದ ಔಷಧಿ