Shravan month friendly gathering plan: Free eye check-up, surgery camp on August 9, 10

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಮುದ್ದೇಬಿಹಾಳ : ರಂಜಾನ್ ಮಾಸದಲ್ಲಿ ಈದ್ ಸೌಹಾರ್ದ ಕೂಟ ಏರ್ಪಡಿಸಿದಂತೆ ಈ ಬಾರಿ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಶ್ರಾವಣ ಮಾಸದ ಸೌಹಾರ್ದ ಕೂಟ ಹಮ್ಮಿಕೊಂಡಿದ್ದೇವೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ತಾಳಿಕೋಟಿ, ಮುದ್ದೇಬಿಹಾಳ ಹಾಗೂ ನಾಲತವಾಡದಲ್ಲಿ ಅನೇಕ ವರ್ಷಗಳಿಂದ ಟ್ರಸ್ಟ್ನಿಂದ ವಿಧವೆಯರಿಗೆ ಪಿಂಚಣಿ, ಈದ್ ಕಿಟ್ ವಿತರಣೆ, ಬೀದಿಯಲ್ಲಿರುವ ನಿರಾಶ್ರಿತರಿಗೆ ಆಶ್ರಯ, ಬಡ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಕಂಪ್ಯೂಟರ್ ತರಬೇತಿ ಮೊದಲಾದ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಕೈಗೊಂಡಿದ್ದು ಈ ಬಾರಿ ಶ್ರಾವಣ ಮಾಸದಲ್ಲಿ ಜಾತಿ, ಬೇಧ ಎನ್ನದೇ ಎಲ್ಲ ಧರ್ಮೀಯರಿಗೂ ಕಣ್ಣಿನ ಉಚಿತ ತಪಾಸಣಾ ಶಿಬಿರ, ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರಿಗೆ ಟ್ರಸ್ಟ್ನಿಂದಲೇ ಚಿಕಿತ್ಸೆಗೆ ಕಳಿಸಿಕೊಡುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.

ಆ.9 ರಂದು ತಾಳಿಕೋಟೆಯಲ್ಲಿ, ಆ.10 ರಂದು ಮುದ್ದೇಬಿಹಾಳ ತಾಲ್ಲೂಕು, ನಾಲತವಾಡ ಪಟ್ಟಣದ ಜನತೆಗೆ ಆಯಾ ಭಾಗದಲ್ಲಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ತಪಾಸಣಾ ಶಿಬಿರ ನಡೆಸಲಾಗುವುದು ಎಂದು ತಿಳಿಸಿದರು.

ಆ.11 ರಿಂದ 14ರವರೆಗೆ ವಿಜಯಪುರದ ಪ್ರಬುಗೌಡ ಲಿಂಗದಳ್ಳಿ ಅವರ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದು ತಿಳಿಸಿದರು.

ಆ.20 ರಂದು ಬಿದರಕುಂದಿಯಲ್ಲಿರುವ ಮನಿಯಾರ ಅವರ ಶಾಲಾ ಕಟ್ಟಡದಲ್ಲಿ ಶ್ರಾವಣ ಮಾಸದ ಸೌಹಾರ್ದ ಕೂಟ ಕಾರ್ಯಕ್ರಮ ಜರುಗಲಿದ್ದು ಅಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾದ ರೋಗಿಗಳಿಗೆ ಔಷಧಿ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಆಸಕ್ತರು ಮೊ.8123277124 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ಸಮಾಜ ಸೇವಕ ಅಯೂಬ ಮನಿಯಾರ ಕಳೆದ 12 ವರ್ಷಗಳಿಂದ ಯಾವುದೇ ಜಾತಿ, ಧರ್ಮ ಭೇದವಿಲ್ಲದೇ ಹಲವು ಸಾಮಾಜಿಕ ಕಾರ್ಯಗಳನ್ನು ಕೈಗೊಂಡಿದ್ದಾರೆ. ಶ್ರಾವಣ ಮಾಸದಲ್ಲಿ ಸೌಹಾರ್ದ ಕೂಟ ಏರ್ಪಡಿಸಿರುವುದು ಅವರ ಸೌಹಾರ್ದತೆಯ ಗುಣಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಹಾಜಿ ಮಹೆಬೂಬ ಹಡಲಗೇರಿ, ರೂಪಸಿಂಗ ಲೋಣಾರಿ, ದಾದಾ ಎತ್ತಿನಮನಿ, ಆಯ್. ಎಲ್. ಮಮದಾಪೂರ, ಫಯಾಜ ಸಾಸನೂರ, ಎಂ. ಎಲ್. ಗೋಲಂದಾಜ, ಅಫ್ತಾಬ ಮನಿಯಾರ, ಹಾಜಿಮಲಂಗ ಯಕೀನ ಇದ್ದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ