Shravan month friendly gathering plan: Free eye check-up, surgery camp on August 9, 10

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಮುದ್ದೇಬಿಹಾಳ : ರಂಜಾನ್ ಮಾಸದಲ್ಲಿ ಈದ್ ಸೌಹಾರ್ದ ಕೂಟ ಏರ್ಪಡಿಸಿದಂತೆ ಈ ಬಾರಿ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಶ್ರಾವಣ ಮಾಸದ ಸೌಹಾರ್ದ ಕೂಟ ಹಮ್ಮಿಕೊಂಡಿದ್ದೇವೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ತಾಳಿಕೋಟಿ, ಮುದ್ದೇಬಿಹಾಳ ಹಾಗೂ ನಾಲತವಾಡದಲ್ಲಿ ಅನೇಕ ವರ್ಷಗಳಿಂದ ಟ್ರಸ್ಟ್ನಿಂದ ವಿಧವೆಯರಿಗೆ ಪಿಂಚಣಿ, ಈದ್ ಕಿಟ್ ವಿತರಣೆ, ಬೀದಿಯಲ್ಲಿರುವ ನಿರಾಶ್ರಿತರಿಗೆ ಆಶ್ರಯ, ಬಡ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಕಂಪ್ಯೂಟರ್ ತರಬೇತಿ ಮೊದಲಾದ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಕೈಗೊಂಡಿದ್ದು ಈ ಬಾರಿ ಶ್ರಾವಣ ಮಾಸದಲ್ಲಿ ಜಾತಿ, ಬೇಧ ಎನ್ನದೇ ಎಲ್ಲ ಧರ್ಮೀಯರಿಗೂ ಕಣ್ಣಿನ ಉಚಿತ ತಪಾಸಣಾ ಶಿಬಿರ, ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರಿಗೆ ಟ್ರಸ್ಟ್ನಿಂದಲೇ ಚಿಕಿತ್ಸೆಗೆ ಕಳಿಸಿಕೊಡುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.

ಆ.9 ರಂದು ತಾಳಿಕೋಟೆಯಲ್ಲಿ, ಆ.10 ರಂದು ಮುದ್ದೇಬಿಹಾಳ ತಾಲ್ಲೂಕು, ನಾಲತವಾಡ ಪಟ್ಟಣದ ಜನತೆಗೆ ಆಯಾ ಭಾಗದಲ್ಲಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ತಪಾಸಣಾ ಶಿಬಿರ ನಡೆಸಲಾಗುವುದು ಎಂದು ತಿಳಿಸಿದರು.

ಆ.11 ರಿಂದ 14ರವರೆಗೆ ವಿಜಯಪುರದ ಪ್ರಬುಗೌಡ ಲಿಂಗದಳ್ಳಿ ಅವರ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದು ತಿಳಿಸಿದರು.

ಆ.20 ರಂದು ಬಿದರಕುಂದಿಯಲ್ಲಿರುವ ಮನಿಯಾರ ಅವರ ಶಾಲಾ ಕಟ್ಟಡದಲ್ಲಿ ಶ್ರಾವಣ ಮಾಸದ ಸೌಹಾರ್ದ ಕೂಟ ಕಾರ್ಯಕ್ರಮ ಜರುಗಲಿದ್ದು ಅಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾದ ರೋಗಿಗಳಿಗೆ ಔಷಧಿ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಆಸಕ್ತರು ಮೊ.8123277124 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ಸಮಾಜ ಸೇವಕ ಅಯೂಬ ಮನಿಯಾರ ಕಳೆದ 12 ವರ್ಷಗಳಿಂದ ಯಾವುದೇ ಜಾತಿ, ಧರ್ಮ ಭೇದವಿಲ್ಲದೇ ಹಲವು ಸಾಮಾಜಿಕ ಕಾರ್ಯಗಳನ್ನು ಕೈಗೊಂಡಿದ್ದಾರೆ. ಶ್ರಾವಣ ಮಾಸದಲ್ಲಿ ಸೌಹಾರ್ದ ಕೂಟ ಏರ್ಪಡಿಸಿರುವುದು ಅವರ ಸೌಹಾರ್ದತೆಯ ಗುಣಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಹಾಜಿ ಮಹೆಬೂಬ ಹಡಲಗೇರಿ, ರೂಪಸಿಂಗ ಲೋಣಾರಿ, ದಾದಾ ಎತ್ತಿನಮನಿ, ಆಯ್. ಎಲ್. ಮಮದಾಪೂರ, ಫಯಾಜ ಸಾಸನೂರ, ಎಂ. ಎಲ್. ಗೋಲಂದಾಜ, ಅಫ್ತಾಬ ಮನಿಯಾರ, ಹಾಜಿಮಲಂಗ ಯಕೀನ ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ