Shravan month friendly gathering plan: Free eye check-up, surgery camp on August 9, 10

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಮುದ್ದೇಬಿಹಾಳ : ರಂಜಾನ್ ಮಾಸದಲ್ಲಿ ಈದ್ ಸೌಹಾರ್ದ ಕೂಟ ಏರ್ಪಡಿಸಿದಂತೆ ಈ ಬಾರಿ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಶ್ರಾವಣ ಮಾಸದ ಸೌಹಾರ್ದ ಕೂಟ ಹಮ್ಮಿಕೊಂಡಿದ್ದೇವೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ತಾಳಿಕೋಟಿ, ಮುದ್ದೇಬಿಹಾಳ ಹಾಗೂ ನಾಲತವಾಡದಲ್ಲಿ ಅನೇಕ ವರ್ಷಗಳಿಂದ ಟ್ರಸ್ಟ್ನಿಂದ ವಿಧವೆಯರಿಗೆ ಪಿಂಚಣಿ, ಈದ್ ಕಿಟ್ ವಿತರಣೆ, ಬೀದಿಯಲ್ಲಿರುವ ನಿರಾಶ್ರಿತರಿಗೆ ಆಶ್ರಯ, ಬಡ ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಕಂಪ್ಯೂಟರ್ ತರಬೇತಿ ಮೊದಲಾದ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಕೈಗೊಂಡಿದ್ದು ಈ ಬಾರಿ ಶ್ರಾವಣ ಮಾಸದಲ್ಲಿ ಜಾತಿ, ಬೇಧ ಎನ್ನದೇ ಎಲ್ಲ ಧರ್ಮೀಯರಿಗೂ ಕಣ್ಣಿನ ಉಚಿತ ತಪಾಸಣಾ ಶಿಬಿರ, ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರಿಗೆ ಟ್ರಸ್ಟ್ನಿಂದಲೇ ಚಿಕಿತ್ಸೆಗೆ ಕಳಿಸಿಕೊಡುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.

ಆ.9 ರಂದು ತಾಳಿಕೋಟೆಯಲ್ಲಿ, ಆ.10 ರಂದು ಮುದ್ದೇಬಿಹಾಳ ತಾಲ್ಲೂಕು, ನಾಲತವಾಡ ಪಟ್ಟಣದ ಜನತೆಗೆ ಆಯಾ ಭಾಗದಲ್ಲಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ತಪಾಸಣಾ ಶಿಬಿರ ನಡೆಸಲಾಗುವುದು ಎಂದು ತಿಳಿಸಿದರು.

ಆ.11 ರಿಂದ 14ರವರೆಗೆ ವಿಜಯಪುರದ ಪ್ರಬುಗೌಡ ಲಿಂಗದಳ್ಳಿ ಅವರ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದು ತಿಳಿಸಿದರು.

ಆ.20 ರಂದು ಬಿದರಕುಂದಿಯಲ್ಲಿರುವ ಮನಿಯಾರ ಅವರ ಶಾಲಾ ಕಟ್ಟಡದಲ್ಲಿ ಶ್ರಾವಣ ಮಾಸದ ಸೌಹಾರ್ದ ಕೂಟ ಕಾರ್ಯಕ್ರಮ ಜರುಗಲಿದ್ದು ಅಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾದ ರೋಗಿಗಳಿಗೆ ಔಷಧಿ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು. ಆಸಕ್ತರು ಮೊ.8123277124 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ಸಮಾಜ ಸೇವಕ ಅಯೂಬ ಮನಿಯಾರ ಕಳೆದ 12 ವರ್ಷಗಳಿಂದ ಯಾವುದೇ ಜಾತಿ, ಧರ್ಮ ಭೇದವಿಲ್ಲದೇ ಹಲವು ಸಾಮಾಜಿಕ ಕಾರ್ಯಗಳನ್ನು ಕೈಗೊಂಡಿದ್ದಾರೆ. ಶ್ರಾವಣ ಮಾಸದಲ್ಲಿ ಸೌಹಾರ್ದ ಕೂಟ ಏರ್ಪಡಿಸಿರುವುದು ಅವರ ಸೌಹಾರ್ದತೆಯ ಗುಣಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಹಾಜಿ ಮಹೆಬೂಬ ಹಡಲಗೇರಿ, ರೂಪಸಿಂಗ ಲೋಣಾರಿ, ದಾದಾ ಎತ್ತಿನಮನಿ, ಆಯ್. ಎಲ್. ಮಮದಾಪೂರ, ಫಯಾಜ ಸಾಸನೂರ, ಎಂ. ಎಲ್. ಗೋಲಂದಾಜ, ಅಫ್ತಾಬ ಮನಿಯಾರ, ಹಾಜಿಮಲಂಗ ಯಕೀನ ಇದ್ದರು.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ