ಬನ್ನಿಕೊಪ್ಪದ ಶ್ರೀ ಚನ್ನಬಸವೇಶ್ವರ ಸ್ವಾಮೀಜಿ ಮಹಾರಥೋತ್ಸವ ಸಂಪನ್ನ

ಬನ್ನಿಕೊಪ್ಪದ ಶ್ರೀ ಚನ್ನಬಸವೇಶ್ವರ ಸ್ವಾಮೀಜಿ ಮಹಾರಥೋತ್ಸವ ಸಂಪನ್ನ

ಕೊಪ್ಪಳ: ಜಿಲ್ಲೆಯ ಕೂಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದ ಶ್ರೀ ಚನ್ನಬಸವೇಶ್ವರ ಸ್ವಾಮೀಜಿ 16ನೇ ವರ್ಷದ ಮಹಾರಥೋತ್ಸವ ಸಾವಿರಾರೂ ಭಕ್ತರ ಸಮ್ಮುಖದಲ್ಲಿ ಗುರುವಾರ ಸಂಜೆ ಅದ್ಧೂರಿಯಾಗಿ ಜರುಗಿತು.

ಮಹಾರಥೋತ್ಸವದಲ್ಲಿ ದೇಗುಲದ ಮುಂಭಾಗ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ದೇಗುಲದಿಂದ ಆರಂಭಗೊಂಡು ರಥೋತ್ಸವ ಸುಮಾರು 500 ಮೀಟರ್ ದೂರದಲ್ಲಿರುವ ಪಾದಗಟ್ಟಿಗೆ ತಲುಪಿ ಪುನಃ ದೇಗುಲದ ಬಳಿಗೆ ಭಕ್ತರ ಹರ್ಷೋದ್ಘಾರರೊಂದಿಗೆ ಎಳೆಯಲ್ಪಟ್ಟಿತು. ಈ ವೇಳೆ ಭಕ್ತರು ರಥಕ್ಕೆ ಉತ್ತತ್ತಿ ಅರ್ಪಿಸಿ, ರಥವನ್ನು ಎಳೆದು ಭಕ್ತಿ ಮೆರೆದರು.

ತದನಂತರ ಮಕ್ಕಳು ಆಟಿಕೆ ವಸ್ತುಗಳ ಕಡೆಗೆ ಆಕರ್ಷಿತರಾದರು. ಮಹಿಳೆಯರು, ಹೆಣ್ಣು ಮಕ್ಕಳು ಜಾತ್ರೆಯಲ್ಲಿ ವಿವಿಧ ವಸ್ತುಗಳನ್ನು ಖರೀದಿಸುವ ದೃಶ್ಯ ಕಂಡುಬಂತು.

ಮಹಾರಥೋತ್ಸವದ ಪ್ರಯುಕ್ತ ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಮಹಾ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ರಥೋತ್ಸವದ ನಂತರವೂ ಪ್ರಸಾದ ವಿತರಣೆಗೆ ಗ್ರಾಮಸ್ಥರು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಡಿ ಬಾಸ್ ಬಿಡುಗಡೆಗಾಗಿ ಅಭಿಮಾನಿಗಳ ಪ್ರಾರ್ಥನೆ:
ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ ಅವರು ಆದಷ್ಟು ಬೇಗ ಬಿಡುಗಡೆ ಆಗಲಿದೆ ಎಂದು ಪ್ರಾರ್ಥಿಸಿ ಬನ್ನಿಕೊಪ್ಪ ಗ್ರಾಮದ ಡಿ ಬಾಸ್ ಅಭಿಮಾನಿಗಳು ರಥ ಬಿದಿಯಲ್ಲಿ ದರ್ಶನ್ ಭಾವಚಿತ್ರ ಕರ್ಪೂರದ ಆರತಿ ಬೆಳಗಿ ಚನ್ನಬಸವೇಶ್ವರ ಸ್ವಾಮೀಜಿಯಲ್ಲಿ ಪ್ರಾರ್ಥಿಸಿಕೊಂಡರು.

ಈ ವೇಳೆ ಬನ್ನಿಕೊಪ್ಪ ಗ್ರಾಮದ ದರ್ಶನ್ ಅಭಿಮಾನಿಗಳಾದ ಜಗ್ಗು ನಾಯಕ್, ಸೃಜನ್ ದೊಡ್ಡಮನಿ, ಸಮೀರ್ ಸೋಪುರ, ಮಂಜು ಚಲವಾದಿ, ಗಿರೀಶ್ ಚಂಡಿ, ಫಯಾಜ್ ಉಂಡೆಕಾರ, ಯಶವಂತ್ ಡಂಬಳ ಇದ್ದರು.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ