ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ ಮಠ್ಸ್ ಸಮೂಹ ಸಂಸ್ಥೆಯ ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಶೃತಿ ಶಿವನಗೌಡ ಪೀರಾಪೂರ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ.

ಈ ಮೊದಲು ಫಲಿತಾಂಶ ಪ್ರಕಟಗೊಂಡಾಗ ಶೃತಿಗೆ 617 ಅಂಕ ಪಡೆದುಕೊಂಡಿದ್ದಳು.ಶಾಲೆಯ ಆಡಳಿತ ಮಂಡಳಿ ಹಾಗೂ ಪಾಲಕರು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಮತ್ತೆ ಏಳು ಅಂಕಗಳು ಶೃತಿಗೆ ಲಭಿಸಿವೆ.ಆ ಮೂಲಕ ಶೃತಿ ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನವನ್ನು ಪಡೆದುಕೊಂಡು ಸಂಸ್ಥೆಯ,ಊರಿನ ಕೀರ್ತಿ ಹೆಚ್ಚಿಸಿದ್ದಾಳೆ.

ಆಂಗ್ಲ ಮಾಧ್ಯಮ ವಿಭಾಗದಲ್ಲಿ ಹರ್ಷಿತಾ ನಾಗೂರ ಈ ಮುಂಚೆ 620 ಅಂಕ ಪಡೆದುಕೊಂಡಿದ್ದು ಮರುಮೌಲ್ಯಪಾಲನದಲ್ಲಿ ಮತ್ತೆ ಎರಡು ಅಂಕ ಬಂದಿದ್ದು 622 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದುಕೊಂಡಿದ್ದಾಳೆ.ಕನ್ನಡ ಮಾಧ್ಯಮದಲ್ಲಿ ಸವಿತಾ ಲೊಟಗೇರಿ ಮೊದಲು ಫಲಿತಾಂಶ ಪ್ರಕಟಗೊಂಡಾಗ 612 ಅಂಕ ಪಡೆದುಕೊಂಡಿದ್ದು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ 10 ಅಂಕಗಳು ಬಂದಿದ್ದು ಒಟ್ಟು 622 ಅಂಕಗಳೊoದಿಗೆ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದುಕೊಂಡು ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದಾಳೆ. ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ. ಜಿ. ಮಠ, ಆಡಳಿತಾಧಿಕಾರಿ ಪ್ರಜ್ವಲ್ ಬಿ. ಮಠ, ಕಾರ್ಯದರ್ಶಿ ಸಿದ್ದಯ್ಯ ಮಠ,ಮುಖ್ಯಗುರು ಹೀರೂ ನಾಯಕ,ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿನ ಪ್ರಾಚಾರ್ಯ ಇರ್ಫಾನ್ ಬಾಗವಾನ್,ಮಾರ್ಗದರ್ಶಕ ಎಂ.ಎ.ನದಾಫ ಅಭಿನಂದಿಸಿದ್ದಾರೆ.

ಮೌಲ್ಯಮಾಪಕರ ವಿರುದ್ಧ ಕ್ರಮ-ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್:
ಆಕ್ಸಫರ್ಡ್ ಮಠ್ಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಇಬ್ಬರು ವಿದ್ಯಾರ್ಥಿಗಳಿಗೆ ಆರಕ್ಕಿಂತ ಹೆಚ್ಚು ಅಂಕ ಲಭಿಸಿದ್ದು ತಪ್ಪು ಮೌಲ್ಯಮಾಪನ ಮಾಡಿದ ಮೌಲ್ಯಮಾಪಕರಿಗೆ ದಂಡ ವಿಧಿಸಲು ಅವಕಾಶ ಇದೆ.ನಿಯಮದಂತೆ ಆರಕ್ಕಿಂತ ಹೆಚ್ಚು ಅಂಕ ವಿದ್ಯಾರ್ಥಿ ಪಡೆದರೆ ಆ ಪತ್ರಿಕೆಯನ್ನು ಮೌಲ್ಯಮಾಪನ ಮಾಡಿದ ತಪ್ಪಿತಸ್ಥ ಮೌಲ್ಯಮಾಪಕರಿಂದ ದಂಡ ವಸೂಲಿ ಮಾಡಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್ ಮಾಡಲಾಗುತ್ತದೆ ಎಂದು ಬಿಇಒ ಬಿ.ಎಸ್.ಸಾವಳಗಿ ತಿಳಿಸಿದ್ದಾರೆ.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,