HDK vs Siddaramaiah: Union Minister HD Kumaraswamy arrested?

Siddaramaiah: ಸಿಎಂ ಬದಲಾವಣೆ.. ಸ್ಫೋಟಕ ಬಾಂಬ್ ಸಿಡಿಸಿದ ಸಿದ್ದು

Siddaramaiah: ಸಿಎಂ ಬದಲಾವಣೆ.. ಸ್ಫೋಟಕ ಬಾಂಬ್ ಸಿಡಿಸಿದ ಸಿದ್ದು

ಕೊಪ್ಪಳ: ರಾಜ್ಯದ ರಾಜಕಾರಣದಲ್ಲಿ ನವೆಂಬರರ್‌ನಲ್ಲಿ (November) ಕ್ರಾಂತಿ ನಡೆಯುತ್ತದೆ. ಆಗ ಸಿಎಂ ಸಿದ್ದರಾಮಯ್ಯ (Siddaramaiah) (Chief Minister) ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂದು ವದಂತಿಗಳು ಜೋರಾಗಿರುವಾಗಲೇ ಸಿದ್ದರಾಮಯ್ಯ ಅವರು ಭಾರೀ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ‌‌.

ಕೊಪ್ಪಳ ತಾಲೂಕಿನ ಬಸಾಪುರದಲ್ಲಿ ಅ.6ರಂದು ಸುದ್ದಿಗಾರರ ಜೊತೆಗೆ ಮಾತನಾಡುತ್ತಾ ಅವರು, ನವೆಂಬ‌ರ್ ಕ್ರಾಂತಿ ಉಹಾಪೋಹಗಳಿಗೆ ಬ್ರೇಕ್ ಹಾಕಿದರು. ರಾಜ್ಯದ ರಾಜಕಾರಣದಲ್ಲಿ ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ಇಲ್ಲ ಭ್ರಾಂತಿಯೂ ಇಲ್ಲ ಎಂದು ಹೇಳುವ ಮೂಲಕ ತಮ್ಮ ವಿರೋಧಿ ಬಣಕ್ಕೆ ಟಾಂಗ್ ಕೊಟ್ಟರು.

ಇನ್ನು ಇದೇ ವೇಳೆ ಜಿಲ್ಲಾ ಕೇಂದ್ರದ ಸಮೀಪದಲ್ಲಿ ಬಲ್ನೋಟಾ ಕಂಪನಿ ಕಾರ್ಖಾನೆ ವಿಸ್ತರಣೆ ಮಾಡುವ ಕುರಿತ ಪ್ರಶ್ನೆಗೆ ಉತ್ತರಿಸಿ, ಕಾರ್ಖಾನೆಗಾಗಿ ಜಮೀನು ಕಳೆದುಕೊಂಡವರಿಗೆ ಇನ್ನಷ್ಟು ಪರಿಹಾರ ಕೊಡಬೇಕು ಎನ್ನುವ ಬೇಡಿಕೆಯಿದೆ. ಈ ಪ್ರಕರಣ ನ್ಯಾಯಾಲಯದಲ್ಲಿದೆ ಎಂದರು.

ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ. ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಕೊಪ್ಪಳದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ, ಕಡಿಮೆ ಅಂತರದಲ್ಲಿ ಸೋತಿದ್ದರೂ, ಕೊಪ್ಪಳದ ಜನ ತನ್ನನ್ನು ಆಶೀರ್ವದಿಸಿದ್ದರು ಎಂದು ಸ್ಮರಿಸಿ ಜನತೆಗೆ ಧನ್ಯವಾದಗಳನ್ನು ತಿಳಿಸಿದರು.

ಇನ್ನು ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎನ್ನುವ ಬಗ್ಗೆ ಮಾತನಾಡಿದ ಅವರು, ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ, ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು. ಇದರಲ್ಲಿ ಯಾವುದೇ ಎರಡು ಮಾತಿಲ್ಲ ಎಂದು ಸಿಎಂ ತಿಳಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ