Silver Festival Guruvandana program at Yadwada

ಯಾದವಾಡದಲ್ಲಿ ಬೆಳ್ಳಿ ಹಬ್ಬದ ಗುರುವಂದನಾ ಕಾರ್ಯಕ್ರಮ

ಯಾದವಾಡದಲ್ಲಿ ಬೆಳ್ಳಿ ಹಬ್ಬದ ಗುರುವಂದನಾ ಕಾರ್ಯಕ್ರಮ

ವಿದ್ಯೆ ಅರಿಸಿಬಂದವರಿಗೆ ಬದುಕು ಕೊಡುವ ಗುಣ ಯಾದವಾಡದ ಮಣ್ಣಿಗಿದೆ: ಪಂಚಗಾರ

ಮುಧೋಳ: ವಿದ್ಯೆ ಅರಿಸಿಕೊಂಡು ಬಂದವರಿಗೆ ಅಪ್ಪಿಕೊಂಡು ಬದುಕು ಕಟ್ಟಿಕೊಳ್ಳಲು ಅಪ್ಪಿಕೊಂಡ ಮಣ್ಣಿನ ಗುಣ ಯಾದವಾಡದ ಮಣ್ಣಿನಲ್ಲಿದೆ ಇದೊಂದು ಒಂದು ಶಕ್ತಿ ಕೇಂದ್ರ, ಕವಿಪುಂಗವರು ಸ್ವಾತಂತ್ರ್ಯ ಹೋರಾಟಗಾರರಿಗೆ ಜನ್ಮ ನೀಡಿದ ಭೂಮಿ ಇಲ್ಲಿ ವಿದ್ಯೆ ಅರಿಸಿ ಬಂದ ಅದೆಷ್ಟೋ ವಿದ್ಯಾರ್ಥಿಗಳು ಇಂದು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದು ಸ್ಮರಣೀಯವಾದುದು ಎಂದು ನಿವೃತ್ತ ಪ್ರಾಚಾರ್ಯ ಎನ್.ಎಸ್. ಪಂಚಗಾರ ಹೇಳಿದರು.

ಸಮೀಪದ ಯಾದವಾಡ ಪಟ್ಟಣದ ಚನ್ನಬಸಪ್ಪ ಹುಬ್ಬಳ್ಳಿ ಮುತ್ಯಾ ಸುಮಂಗಲಾ ಕಲ್ಯಾಣ ಮಂಟಪದಲ್ಲಿ ಜಿ.ಎನ್.ಎಸ್ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ೨೦೦೦ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಲ್ಲಿ ಕಲಿತ ಎಲ್ಲರೂ ಪುಣ್ಯವಂತರು ಹೆತ್ತ ಮಕ್ಕಳು ಕೂಡಾ ಗೌರವಿಸದ ಈ ಕಾಲ ಘಟ್ಟದಲ್ಲಿ ಹಳೆ ವಿದ್ಯಾರ್ಥಿಗಳು ನಮ್ಮನ್ನು ನಡೆಸಿಕೊಂಡ ರೀತಿ ಅದ್ಭುತ, ಅದನ್ನು ಮಾತಿನಲ್ಲಿ ವರ್ಣಿಸಲ ಸಾಧ್ಯ ಎಂದು ಭಾವುಕರಾದರು.

ಪತ್ರಕರ್ತ ವೆಂಕಟೇಶ ಗುಡೆಪ್ಪನವರ, ಶಿಕ್ಷಕಿ ಮಹಾದೇವಿ ವಕ್ಕುಂದ, ಅಣ್ಣಪ್ಪ ಗಾಣಗೇರ, ಶ್ರೀಶೈಲ್ ಶಂಕರಶೆಟ್ಟಿ, ಮಂಜುನಾಥ ಗಾಣಗೇರ, ಮಾತನಾಡಿ ಬದುಕಿನಲ್ಲಿ ಯಾವುದೇ ಸಾಧನೆಯ ಹಿಂದೆ ಗುರುಗಳ ಮಾರ್ಗದರ್ಶನ ಜೀವನುದುದ್ದಕ್ಕೂ ಅಗತ್ಯ, ಅದರಲ್ಲಿಯೂ ಬದುಕಿನ ಆರಂಭದ ಮೆಟ್ಟಿಲುಗಳನ್ನು ಕಲಿಸುವ ಪ್ರೌಢಶಾಲಾ ಶಿಕ್ಷಕರನ್ನಂತೂ ಮೆರೆಯಲು ಅಸಾಧ್ಯ ಎಂದು ಅಭಿಪ್ರಾಯಪಟ್ಟರು.

ರಾಜ್ಯ ಸಂಪನ್ಮೂಲ ಶಿಕ್ಷಕ ಎಸ್.ಎಸ್. ಬಳೂರಗಿ ಮಾತನಾಡಿ ಜಿ.ಎನ್.ಎಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳೇ ಬದುಕು, ಸಮಾಜದಲ್ಲಿ ಛಲ, ಹಿಂಜರಿಕೆಯಿಲ್ಲದೇ ಮುನ್ನಡೆಯಲು ಸಾಧ್ಯ ಎಂದರು.

ಹುಬ್ಬಳ್ಲಿ ಮಠದ ಶ್ರೀ ಚನ್ನಬಸಪ್ಪ ಮಹಾಸ್ವಾಮಿಗಳು ಸಾನಿಧ್ಯವಹಿಸಿ ಮಾತನಾಡಿ ಎಸ್.ಸಿ.ಗಾಣಗಿ, ಎಂ.ಗೋಪಾಲ, ಪಿ.ಬಿ.ದೇಶಪಾಂಡೆ, ಪಿ.ಎಸ್.ಕಲ್ಯಾಣಿ, ಜಿ.ಎಚ್.ಕಾಂಬಳೆ, ಹನಮಂತ ಮಾದರ ಶಿಕ್ಷಕರು ಮಾತನಾಡುವುದುರ ಜೊತಗೆ ಹಾಡು ಹಾಡಿ ರಂಜಿಸಿದರು. ಎನ್.ಡಿ.ಅತ್ತಾರ ಎಸ್.ಪಿ.ಗಾಣಗಿ, ಎಸ್.ಎಸ್.ಹೊಸಮನಿ, ಆಯ್,ಎಚ್.ಪಠಾಣ, ಪತ್ರಕರ್ತ ವೆಂಕಟೇಶ ಗುಡೆಪ್ಪನವರ, ಶಿಕ್ಷಕಿ ಮಹಾದೇವಿ ವಕ್ಕುಂದ ಶ್ರೀಶೈಲ್ ಶಂಕರಶೆಟ್ಟಿ, ಮಂಜುನಾಥ ಗಾಣಗೇರ, ಲಲಿತಾ ಶೆಗುಣಸಿ, ಸುಮನ್ ಚನ್ನಾಳ, ಡಾ.ಇಂದಿರಾ ಪಾಲಬಾವಿ ಮಾತನಾಡಿದರು.

ಬಿ.ಜಿ.ಕಾಗವಾಡ, ವಿಠ್ಠಲ ಮೇತ್ರಿ, ಯಶವಂತ ತೊಂಡಕಟ್ಟಿ, ವಿಲಾಸ ಬಂಡಿ, ಹಣಮಂತ ಕೆಂಜೋಳ ಸೇರಿದಂತೆ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗೆ ಸನ್ಮಾನಿಸಿಲಾಯಿತು. ಎಲ್ಲ ವೃತ್ತಿಯಲ್ಲಿರುವ ಹಾಗೂ ನಿವೃತ್ತ ಶಿಕ್ಷಕ ಹಾಗೂ ಶಿಕ್ಷಕೇತರ ಶಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಹಳೆ ವಿದ್ಯಾರ್ಥಿಗಳಿಂದ ಮನರಂಜನೆ ಕಾರ್ಯಕ್ರಮ, ಆಟಗಳು ಜರುಗಿದವು, ಶಿಕ್ಷಕರನ್ನು ಮೆರವಣಿಗೆಯ ಮೂಲಕ ಕಾರ್ಯಕ್ರಮದ ಹಾಲ್‌ಗೆ ಪುಷ್ಪಾರ್ಚನೆಯ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು ತದನಂತರದಲ್ಲಿ ಎಲ್ಲರಿಗೂ ಸಾಮೂಹಿಕ ಬೋಜನ ಕೂಟ ಏರ್ಪಡಿಸಲಾಯಿತು. ಅನ್ವರ ಜಿಡ್ಡಿಮನಿ, ಸ್ವಾಗತಿಸಿ, ಮಹಾದೇವಿ ವಕ್ಕುಂದ ಪ್ರಶಾಂತ ಚಿಕ್ಕೇಗೌಡರ ನಿರೂಪಿಸಿ ವೀಣಾ ತಿರ್ಲಾಪುರ ವಂದಿಸಿದರು. ಎಲ್‌ಇಡಿ ಪರದೆಯ ಮೇಲೆ ಬಿತ್ತರಿಸಿದ ಇಂದಿನ ಹಾಗೂ ಹಳೆಯ ನೆನಪುಗಳು ಭಾವುಕರಾಗುವಂತೆ ಮಾಡಿದವು. ಬಸವರಾಜ ಕೌಜಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

“ನಮ್ಮ ಪ್ರೌಢ ಶಾಲಾ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿರುವುದು ನಮ್ಮ ಶಿಕ್ಷಕ ವೃತ್ತಿಗೆ ಹೆಮ್ಮೆ ತಂದಿದೆ. ಶಿಷ್ಯರು ಉನ್ನತ ಮಟ್ಟಕ್ಕೆ ಬೆಳೆದಾಗ ಗುರುವಿಗೆ ಸಂತಸ, ಸಾರ್ಥಕ ಭಾವ ಬರುತ್ತದೆ”.
ಎಸ್.ಎಸ್.ಬಳೂರಗಿ ಗಣಿತ ಶಿಕ್ಷಕರು

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ