Skill Training Center at Dharwad, Mysore: Labor Minister Santosh Lad meeting

ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಧಾರವಾಡ, ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಭೆ

ಬೆಂಗಳೂರು, ಜುಲೈ31: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಧಾರವಾಡ ಮತ್ತು ಮೈಸೂರಿನಲ್ಲಿ ಕೌಶಲ್ಯ ತರಬೇತಿ ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಿದ್ದು, ಈ ಸಂಬಂಧ ವಿಕಾಸಸೌಧದಲ್ಲಿ ನಡೆದ ಪ್ರಾತ್ಯಕ್ಷೆಯನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಅಧಿಕಾರಿಗಳೊಂದಿಗೆ ವೀಕ್ಷಿಸಿದರು.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಹೆಚ್ಚುವರಿ ಕೌಶಲ್ಯಗಳನ್ನು ಕಲಿಸಲು ಜಾಗತಿಕ ಮಟ್ಟದ ವೃತ್ತಿ ತರಬೇತಿ ಮತ್ತು ಕೌಶಲ್ಯ ಉನ್ನತೀಕರಣ, ಕಾರ್ಮಿಕರ ನೈಪುಣ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲು ಮಂಡಳಿಯು ಮುಂದಾಗಿದೆ. ಉನ್ನತೀಕರಿಸಿದ ಕೌಶಲ್ಯ ಕೇಂದ್ರಗಳು ಇವಾಗಿದ್ದು, ಈ ಸಂಬಂಧ ಈಗಾಗಲೇ ಇಲಾಖೆಯು ಹಲವು ಹೆಜ್ಜೆಗಳನ್ನು ಇಟ್ಟಿದೆ. ಇತ್ತೀಚೆಗೆ ಭಾಗಿದಾರರೊಂದಿಗೆ ಕೌಶಲ್ಯ ಕೇಂದ್ರಗಳ ಬಗ್ಗೆ ಕಾರ್ಯಾಗಾರವನ್ನೂ ಆಯೋಜಿಸಲಾಗಿತ್ತು.

ಇಂದು ನಡೆದ ಪ್ರಾತ್ಯಕ್ಷಿಕೆಯಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರೋಹಿಣಿ ಸಿಂಧೂರಿ ದಾಸರಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿಗಳಾದ ಭಾರತಿ, ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್, ಮಂಡಳಿಯ ಉಪ ಕಾರ್ಮಿಕ ಆಯುಕ್ತರಾದ ಜಾನ್ಸನ್ ಮಂಡಳಿಯ ಜಂಟಿ ಕಾರ್ಯದರ್ಶಿಗಳಾದ ಉಮೇಶ್ ಪಾಲ್ಗೊಂಡಿದ್ದರು.

Latest News

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

91 ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ: ಕಾರ್ಮಿಕ ಸಚಿವ ಲಾಡ್

ಮೈಸೂರು,ಆ.06: ರಾಜ್ಯದಲ್ಲಿ ಶೇ 83 ರಷ್ಟು ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಸಣ್ಣ ವೃತ್ತಿಯಲ್ಲಿ ತೊಡಗಿರುವ

ಮುದ್ದೇಬಿಹಾಳ ಬಿಇಓ ಕಚೇರಿ ಮುಂದೆ ಧರಣಿ: ಶತಮಾನ ಕಂಡ ಶಾಲೆ ಆರಂಭಕ್ಕೆ ಒಂದು ವಾರ ಗಡುವು

ಮುದ್ದೇಬಿಹಾಳ ಬಿಇಓ ಕಚೇರಿ ಮುಂದೆ ಧರಣಿ: ಶತಮಾನ ಕಂಡ ಶಾಲೆ ಆರಂಭಕ್ಕೆ ಒಂದು ವಾರ ಗಡುವು

ಮುದ್ದೇಬಿಹಾಳ : ಪಟ್ಟಣದ ಹೃದಯ ಭಾಗದಲ್ಲಿರುವ ಬಜಾರ ಸರ್ಕಾರಿ ಉರ್ದು ಶಾಲೆಯನ್ನು ಪುನಃ ಆರಂಭಿಸಬೇಕು

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಹಲವು ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಹಲವು ಯೋಜನೆ ಜಾರಿ

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಉದ್ಘಾಟನೆ ಸಮಾರಂಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಮಳೆರಾಯನ ಮಡಿಲಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕರ ಪ್ರತಿಭಟನೆ

ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೂರನೇ ದಿನದ ಪ್ರಾರಂಭ. ರಾಜ್ಯ ಕಟ್ಟಡ ಮತ್ತು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ಮುದ್ದೇಬಿಹಾಳ : ಆಸ್ತಿ ನೋಡಿಕೊಂಡು ನಾವು ಈ ಮಠಕ್ಕೆ ಬಂದಿಲ್ಲ. ಭಕ್ತರ ಭಕ್ತಿಯೇ ಶ್ರೀಮಠಕ್ಕೆ ಆಸ್ತಿ. ಹುನಗುಂದದಲ್ಲಿರುವ ಗಚ್ಚಿನಮಠಕ್ಕೆ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರನ್ನು ಕರೆಯುತ್ತೇವೆ. ಆ ಸಂಪ್ರದಾಯ ಮುದ್ದೇಬಿಹಾಳದ ಮಠದಲ್ಲೂ ಮುಂದುವರೆಸುತ್ತೇವೆ. ಮಠಕ್ಕೆ ಬರುವವರು ರಾಜಕಾರಣ ಹೊರಗಿಟ್ಟು ಸಾಮಾನ್ಯ ಭಕ್ತರಂತೆ ಬರಬೇಕು ಎಂದು ಮುದ್ದೇಬಿಹಾಳ ಹೊಸಮಠದ ನೂತನ ಸ್ವಾಮೀಜಿ ಅಮರೇಶ್ವರ ದೇವರು ಹೇಳಿದರು. ಮುದ್ದೇಬಿಹಾಳ ಭಕ್ತರ ಆಹ್ವಾನದ ಮೇರೆಗೆ ಪಟ್ಟಣದ ಕಿಲ್ಲಾದಲ್ಲಿರುವ ಹೊಸಮಠಕ್ಕೆ ಭಾನುವಾರ ಆಗಮಿಸಿದ್ದ ಅವರಿಗೆ ಮುದ್ದೇಬಿಹಾಳ

ಅನಿರ್ದಿಷ್ಟವಧಿ ಧರಣಿಯಲ್ಲಿ ಭಾಗವಹಿಸುವ‌ ಕಾರ್ಮಿಕರಿಗೆ ನೆರವು ಘೋಷಿಸಿದ ಅಶ್ವಥ ಟಿ ಮರೀಗೌಡ್ರು

ಅನಿರ್ದಿಷ್ಟವಧಿ ಧರಣಿಯಲ್ಲಿ ಭಾಗವಹಿಸುವ‌ ಕಾರ್ಮಿಕರಿಗೆ ನೆರವು ಘೋಷಿಸಿದ ಅಶ್ವಥ ಟಿ ಮರೀಗೌಡ್ರು

ಹುಬ್ಬಳ್ಳಿ : ಧಾರವಾಡ ವಿಭಾಗದ ನೊಂದಾಯಿತ ಕಾರ್ಮಿಕ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ನಡೆಯಲಿರುವ ಧರಣಿಯಲ್ಲಿ ಧಾರವಾಡ ವಿಭಾಗ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಯಿಂದ ಪ್ರಮುಖ ಕಾರ್ಮಿಕ ಮುಖಂಡರು ಭಾಗವಹಿಸುತ್ತಿದ್ದಾರೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಮಸ್ಯೆ ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಹುಬ್ಬಳ್ಳಿಯ ಕಾರ್ಮಿಕರ ಭವನದವರೆಗೂ ರ್ಯಾಲಿ ಮೂಲಕ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಕಾರ್ಮಿಕ ಸಚಿವರು ಸ್ಥಳಕ್ಕೆ ಆಗಮಿಸಿಲಿದ್ದಾರೆ. ನಮ್ಮ ಮನವಿಗೆ ಸ್ಪಂದಿಸದಿದ್ದಲಿ,