smuggling-centres-authorities-raided-smuggling-centers-in-mudhol

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

ಮುಧೋಳ : ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ‌ ಕಳ್ಳಭಟ್ಟಿ‌ (smuggling centres) ಕೇಂದ್ರದ ಮೇಲೆ‌ ದಾಳಿ‌ ನಡೆಸಿರುವ ಅರಣ್ಯ ಇಲಾಖೆ‌ ಅಧಿಕಾರಿಗಳು ಕಳ್ಳಭಟ್ಟಿ‌ ಕೇಂದ್ರಗಳನ್ನು ನಾಶಪಡಿಸಿದ್ದಾರೆ.

Join Our Telegram: https://t.me/dcgkannada

ಮಾಧ್ಯಮದಲ್ಲಿ ವರದಿ ಪ್ರಕಟಗೊಂಡ ನಂತರ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ದಿನವಿಡೀ‌ ಅರಣ್ಯ ಪ್ರದೇಶದಲ್ಲಿ‌ನ ಮೂರು ಜಾಗಗಳನ್ನು ಜಾಲಾಡಿ ಕಳ್ಳಭಟ್ಟಿ ಕೇಂದ್ರಗಳನ್ನು ಧ್ವಂಸಗೊಳಿಸಿದ್ದಾರೆ.

ಡಿಎಫ್ಒ ಸಿ.ಜೆ.ಮಿರ್ಜಿ, ಜಮಖಂಡಿ‌ ಎಸಿಎಫ್ ಹಾಗೂ ಮುಧೋಳ‌ ವಲಯ ಅರಣ್ಯಾಧಿಕಾರಿ‌ ಎಚ್.ಬಿ. ಡೋಣಿ ಅವರ ಮಾರ್ಗದರ್ಶನದಲ್ಲಿ‌ ನಡೆದ ಕಳ್ಳಭಟ್ಟಿ‌ ಕೇಂದ್ರಗಳ‌‌ ಮೇಲಿನ ದಾಳಿ ಕಾರ್ಯಾಚರಣೆಯಲ್ಲಿ‌ ಉಪವಲಯ ಅರಣ್ಯಾಧಿಕಾರಿ‌ ರಮೇಶ ಮೆಟಗುಡ್ಡ, ಗಸ್ತು ಅರಣ್ಯಪಾಲಕ‌ರಾದ ಚಂದ್ರಶೇಖರ ಉಪ್ಪಾರ, ಶಿವರಾಜ ಸಜ್ಜನ,‌ ಆನಂದ ಸಾಗರ, ಗುರಪ್ಪ ಬಾಗೇವಾಡಿ, ವಾಚರ್ ಗಳಾದ ಹನಮಂತ ತಳವಾರ, ಈರಪ್ಪ‌‌ ಕೋಲೂರ ಹಾಗೂ ತಿಪ್ಪಣ್ಣ ವಾಬನ್ನವರ ಪಾಲ್ಗೊಂಡಿದ್ದರು.

ಇದನ್ನೂ ಓದಿ: ವಿದ್ಯುತ್ ಪ್ರವಹಿಸಿ ಹೊಲದಲ್ಲಿ ದಂಪತಿಗಳ ದಾರುಣ ಸಾವು!

ಯಡಹಳ್ಳಿ‌ ಚೀಂಕಾರ ರಕ್ಷಿತಾರಣ್ಯ ರಕ್ಷಣೆಗೆ ನಮ್ಮ ಸಿಬ್ಬಂದಿ‌ ನಿರಂತರ ಶ್ರಮ ವಹಸುವರು. ಮುಂದಿನ ದಿನಗಳಲ್ಲಿ‌ ನಿತ್ಯ ನಿರಂತರ ದಾಳಿಯಲ್ಲಿ‌ ತೊಡಗುವ ಮೂಲಕ ಅರಣ್ಯ ಸಂಪತ್ತು ಕಾಪಾಡಲು ಕಟಿಬದ್ಧರಾಗಿರುವುದಾಗು ಬಾಗಲಕೋಟೆ ಡಿಎಫ್ಒ ಸಿ.ಜೆ.ಮಿರ್ಜಿ ತಿಳಿಸಿದ್ದಾರೆ.

ಮುಧೋಳ ವ್ಯಾಪ್ತಿಯ ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ ಕಳ್ಳಭಟ್ಟಿ ಕೇಂದ್ರಗಳನ್ನು (smuggling centres) ಮುಂದಿನ ದಿನಗಳಲ್ಲಿ ಗಸ್ತು ಪ್ರಕ್ರಿಯೆ ಚುರುಕುಗೊಳಿಸಿ ಕಳ್ಳಭಟ್ಟಿ ಸಂಪೂರ್ಣವಾಗಿ ನಿಯಂತ್ರಿಸಲಾಗುವುದು ಎಂದು ಮುಧೋಳ ವಲಯ ಅರಣ್ಯ ಸಂರಕ್ಷಣಾಧಿಕಾರಿ‌ ಎಚ್.ಬಿ.ಡೋಣಿ ತಿಳಿಸಿದ್ದಾರೆ.

Latest News

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು,ಬೆಂಬಲಿಗರನ್ನುದ್ದೇಶಿಸಿ ಸಿಎಂ ಡಿಕೆಶಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.ನಿಮ್ಮ ಆಸೆ,ವಿಚಾರ ನಾನು ಅರಿತಿದ್ದೇನೆ.ನಾಡಗೌಡರ ಬಗ್ಗೆ ಯಾರು