smuggling-centres-authorities-raided-smuggling-centers-in-mudhol

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

ಮುಧೋಳ : ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ‌ ಕಳ್ಳಭಟ್ಟಿ‌ (smuggling centres) ಕೇಂದ್ರದ ಮೇಲೆ‌ ದಾಳಿ‌ ನಡೆಸಿರುವ ಅರಣ್ಯ ಇಲಾಖೆ‌ ಅಧಿಕಾರಿಗಳು ಕಳ್ಳಭಟ್ಟಿ‌ ಕೇಂದ್ರಗಳನ್ನು ನಾಶಪಡಿಸಿದ್ದಾರೆ.

Join Our Telegram: https://t.me/dcgkannada

ಮಾಧ್ಯಮದಲ್ಲಿ ವರದಿ ಪ್ರಕಟಗೊಂಡ ನಂತರ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ದಿನವಿಡೀ‌ ಅರಣ್ಯ ಪ್ರದೇಶದಲ್ಲಿ‌ನ ಮೂರು ಜಾಗಗಳನ್ನು ಜಾಲಾಡಿ ಕಳ್ಳಭಟ್ಟಿ ಕೇಂದ್ರಗಳನ್ನು ಧ್ವಂಸಗೊಳಿಸಿದ್ದಾರೆ.

ಡಿಎಫ್ಒ ಸಿ.ಜೆ.ಮಿರ್ಜಿ, ಜಮಖಂಡಿ‌ ಎಸಿಎಫ್ ಹಾಗೂ ಮುಧೋಳ‌ ವಲಯ ಅರಣ್ಯಾಧಿಕಾರಿ‌ ಎಚ್.ಬಿ. ಡೋಣಿ ಅವರ ಮಾರ್ಗದರ್ಶನದಲ್ಲಿ‌ ನಡೆದ ಕಳ್ಳಭಟ್ಟಿ‌ ಕೇಂದ್ರಗಳ‌‌ ಮೇಲಿನ ದಾಳಿ ಕಾರ್ಯಾಚರಣೆಯಲ್ಲಿ‌ ಉಪವಲಯ ಅರಣ್ಯಾಧಿಕಾರಿ‌ ರಮೇಶ ಮೆಟಗುಡ್ಡ, ಗಸ್ತು ಅರಣ್ಯಪಾಲಕ‌ರಾದ ಚಂದ್ರಶೇಖರ ಉಪ್ಪಾರ, ಶಿವರಾಜ ಸಜ್ಜನ,‌ ಆನಂದ ಸಾಗರ, ಗುರಪ್ಪ ಬಾಗೇವಾಡಿ, ವಾಚರ್ ಗಳಾದ ಹನಮಂತ ತಳವಾರ, ಈರಪ್ಪ‌‌ ಕೋಲೂರ ಹಾಗೂ ತಿಪ್ಪಣ್ಣ ವಾಬನ್ನವರ ಪಾಲ್ಗೊಂಡಿದ್ದರು.

ಇದನ್ನೂ ಓದಿ: ವಿದ್ಯುತ್ ಪ್ರವಹಿಸಿ ಹೊಲದಲ್ಲಿ ದಂಪತಿಗಳ ದಾರುಣ ಸಾವು!

ಯಡಹಳ್ಳಿ‌ ಚೀಂಕಾರ ರಕ್ಷಿತಾರಣ್ಯ ರಕ್ಷಣೆಗೆ ನಮ್ಮ ಸಿಬ್ಬಂದಿ‌ ನಿರಂತರ ಶ್ರಮ ವಹಸುವರು. ಮುಂದಿನ ದಿನಗಳಲ್ಲಿ‌ ನಿತ್ಯ ನಿರಂತರ ದಾಳಿಯಲ್ಲಿ‌ ತೊಡಗುವ ಮೂಲಕ ಅರಣ್ಯ ಸಂಪತ್ತು ಕಾಪಾಡಲು ಕಟಿಬದ್ಧರಾಗಿರುವುದಾಗು ಬಾಗಲಕೋಟೆ ಡಿಎಫ್ಒ ಸಿ.ಜೆ.ಮಿರ್ಜಿ ತಿಳಿಸಿದ್ದಾರೆ.

ಮುಧೋಳ ವ್ಯಾಪ್ತಿಯ ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ ಕಳ್ಳಭಟ್ಟಿ ಕೇಂದ್ರಗಳನ್ನು (smuggling centres) ಮುಂದಿನ ದಿನಗಳಲ್ಲಿ ಗಸ್ತು ಪ್ರಕ್ರಿಯೆ ಚುರುಕುಗೊಳಿಸಿ ಕಳ್ಳಭಟ್ಟಿ ಸಂಪೂರ್ಣವಾಗಿ ನಿಯಂತ್ರಿಸಲಾಗುವುದು ಎಂದು ಮುಧೋಳ ವಲಯ ಅರಣ್ಯ ಸಂರಕ್ಷಣಾಧಿಕಾರಿ‌ ಎಚ್.ಬಿ.ಡೋಣಿ ತಿಳಿಸಿದ್ದಾರೆ.

Latest News

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು ಜತನದಿಂದ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಹಿಳಾಪರ ಚಿಂತಕಿ ರಾಜೇಶ್ವರಿ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 80 ನೇ ಸ್ವಾತಂತ್ರ್ಯೋ್ತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳಲ್ಲಿ ದೇಶಾಭಿಮಾನ,ದೇಶಪ್ರೇಮ ಭಾವನೆ ಮೂಡಿಸಲು ಶಿಕ್ಷಕರು ,ಪಾಲಕರು ಶ್ರಮಿಸಬೇಕು ಎಂದರು. ಶಾಲೆಯ ಅಧ್ಯಕ್ಷ ಬಸಮ್ಮ ಸಿದರಡ್ಡಿ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಪೊಲೀಸ  ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಎಎಸ್ಐ ಎಂ.ಪಿ.ಹೋಕಳೆ, ಪೊಲೀಸ ಸಿಬ್ಬಂದಿ ಬಸವರಾಜ ಸಜ್ಜನ ಹಾಗೂ ತಂಗಡಗಿ ಗ್ರಾಮದ ವಿಕಾಸ ಕಮಲಾಪೂರ ಹಾಗೂ ಬಂಡಿನಾಥ ಕಮಲಾಪೂರ ,ರವಿ ಹಾಲ್ಯಾಳ ಅವರನ್ನು ಸನ್ಮಾನಿಸಲಾಯಿತು. ಎಎಸ್ಐ ಎಂ.ಪಿ.ಹೋಕಳೆ ಧ್ವಜಾರೋಹಣ ಮಾಡಿದರು.ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡರಾದ ರಾಜುಗೌಡ ಕೊಂಗಿ,ಸ್ನೇಹಸಿರಿ ಸೇವಾ ಸಂಘದ ಸಂಚಾಲಕ ಬಸವರಾಜ ನಿಡಗುಂದಿ ಸೇರಿದಂತೆ