smuggling-centres-authorities-raided-smuggling-centers-in-mudhol

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

smuggling centres: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌

ಮುಧೋಳ : ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ‌ ಕಳ್ಳಭಟ್ಟಿ‌ (smuggling centres) ಕೇಂದ್ರದ ಮೇಲೆ‌ ದಾಳಿ‌ ನಡೆಸಿರುವ ಅರಣ್ಯ ಇಲಾಖೆ‌ ಅಧಿಕಾರಿಗಳು ಕಳ್ಳಭಟ್ಟಿ‌ ಕೇಂದ್ರಗಳನ್ನು ನಾಶಪಡಿಸಿದ್ದಾರೆ.

Join Our Telegram: https://t.me/dcgkannada

ಮಾಧ್ಯಮದಲ್ಲಿ ವರದಿ ಪ್ರಕಟಗೊಂಡ ನಂತರ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ದಿನವಿಡೀ‌ ಅರಣ್ಯ ಪ್ರದೇಶದಲ್ಲಿ‌ನ ಮೂರು ಜಾಗಗಳನ್ನು ಜಾಲಾಡಿ ಕಳ್ಳಭಟ್ಟಿ ಕೇಂದ್ರಗಳನ್ನು ಧ್ವಂಸಗೊಳಿಸಿದ್ದಾರೆ.

ಡಿಎಫ್ಒ ಸಿ.ಜೆ.ಮಿರ್ಜಿ, ಜಮಖಂಡಿ‌ ಎಸಿಎಫ್ ಹಾಗೂ ಮುಧೋಳ‌ ವಲಯ ಅರಣ್ಯಾಧಿಕಾರಿ‌ ಎಚ್.ಬಿ. ಡೋಣಿ ಅವರ ಮಾರ್ಗದರ್ಶನದಲ್ಲಿ‌ ನಡೆದ ಕಳ್ಳಭಟ್ಟಿ‌ ಕೇಂದ್ರಗಳ‌‌ ಮೇಲಿನ ದಾಳಿ ಕಾರ್ಯಾಚರಣೆಯಲ್ಲಿ‌ ಉಪವಲಯ ಅರಣ್ಯಾಧಿಕಾರಿ‌ ರಮೇಶ ಮೆಟಗುಡ್ಡ, ಗಸ್ತು ಅರಣ್ಯಪಾಲಕ‌ರಾದ ಚಂದ್ರಶೇಖರ ಉಪ್ಪಾರ, ಶಿವರಾಜ ಸಜ್ಜನ,‌ ಆನಂದ ಸಾಗರ, ಗುರಪ್ಪ ಬಾಗೇವಾಡಿ, ವಾಚರ್ ಗಳಾದ ಹನಮಂತ ತಳವಾರ, ಈರಪ್ಪ‌‌ ಕೋಲೂರ ಹಾಗೂ ತಿಪ್ಪಣ್ಣ ವಾಬನ್ನವರ ಪಾಲ್ಗೊಂಡಿದ್ದರು.

ಇದನ್ನೂ ಓದಿ: ವಿದ್ಯುತ್ ಪ್ರವಹಿಸಿ ಹೊಲದಲ್ಲಿ ದಂಪತಿಗಳ ದಾರುಣ ಸಾವು!

ಯಡಹಳ್ಳಿ‌ ಚೀಂಕಾರ ರಕ್ಷಿತಾರಣ್ಯ ರಕ್ಷಣೆಗೆ ನಮ್ಮ ಸಿಬ್ಬಂದಿ‌ ನಿರಂತರ ಶ್ರಮ ವಹಸುವರು. ಮುಂದಿನ ದಿನಗಳಲ್ಲಿ‌ ನಿತ್ಯ ನಿರಂತರ ದಾಳಿಯಲ್ಲಿ‌ ತೊಡಗುವ ಮೂಲಕ ಅರಣ್ಯ ಸಂಪತ್ತು ಕಾಪಾಡಲು ಕಟಿಬದ್ಧರಾಗಿರುವುದಾಗು ಬಾಗಲಕೋಟೆ ಡಿಎಫ್ಒ ಸಿ.ಜೆ.ಮಿರ್ಜಿ ತಿಳಿಸಿದ್ದಾರೆ.

ಮುಧೋಳ ವ್ಯಾಪ್ತಿಯ ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ ಕಳ್ಳಭಟ್ಟಿ ಕೇಂದ್ರಗಳನ್ನು (smuggling centres) ಮುಂದಿನ ದಿನಗಳಲ್ಲಿ ಗಸ್ತು ಪ್ರಕ್ರಿಯೆ ಚುರುಕುಗೊಳಿಸಿ ಕಳ್ಳಭಟ್ಟಿ ಸಂಪೂರ್ಣವಾಗಿ ನಿಯಂತ್ರಿಸಲಾಗುವುದು ಎಂದು ಮುಧೋಳ ವಲಯ ಅರಣ್ಯ ಸಂರಕ್ಷಣಾಧಿಕಾರಿ‌ ಎಚ್.ಬಿ.ಡೋಣಿ ತಿಳಿಸಿದ್ದಾರೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ