Sneha Sangam is the anniversary of the circle of friends

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹಿತರ ಬಳಗದಿಂದ ಸಮಾಜಮುಖಿ ಕಾರ್ಯಗಳಾಗಲಿ-ಹಂಚಲಿ

ಮುದ್ದೇಬಿಹಾಳ : ಸ್ನೇಹಿತರ ಬಳಗಗಳು ಕೇವಲ ವೈಯಕ್ತಿಕ ಸಮಸ್ಯೆಗಳಿಗೆ ಬಳಕೆಯಾಗದೇ ಸಮಾಜಮುಖಿ ಕಾರ್ಯಗಳಿಗೂ ಕೈ ಜೋಡಿಸುವ ಕಾರ್ಯ ಆಗಬೇಕು ಎಂದು ಬ.ಬಾಗೇವಾಡಿ ಸರಕಾರಿ ಪ್ರೌಢಶಾಲೆ ಸಹ ಶಿಕ್ಷಕ ಅಶೋಕ ಹಂಚಲಿ ಹೇಳಿದರು.

ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ಸ್ನೇಹ ಸಂಗಮ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ,1990-91ನೇ ಸಾಲಿನ ಎಸ್.ಎಸ್.ಎಲ್.ಸಿ ಗೆಳೆಯರ 50ನೇ ವರ್ಷದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ತುಳಿತಕ್ಕೊಳಗಾದವರಿಗೆ ನೆರವು ನೀಡುವ ಕಾರ್ಯಕ್ಕೆ ಮುಂದಾದಲ್ಲಿ ದೂರದಲ್ಲಿ ಇರುವವ ಸ್ನೇಹಿತರು ಅಂತಹದ್ದಕ್ಕೆ ಬೆಂಬಲಿಸುತ್ತಾರೆ. ಗೆಳೆಯರು ಸೇರಿದ್ದಲ್ಲಿ ಸ್ವರ್ಗ ನಿರ್ಮಾಣ ಆಗುತ್ತದೆ. ಸ್ನೇಹಕ್ಕೆ ಕೃಷ್ಣ ಕುಚೇಲರ ಗೆಳೆತನ ಮಾದರಿಯಾದದ್ದು ಎಂದರು.

ಸಾನಿಧ್ಯ ವಹಿಸಿದ್ದ ಹಿರೂರು ಅನ್ನದಾನೇಶ್ವರ ಹಿರೇಮಠದ ಜಯಸಿದ್ಧೇಶ್ವರ ಶಿವಾಚಾರ್ಯರು ಮಾತನಾಡಿ, ಗೆಳೆಯರು ಎಂದರೆ ಅಲ್ಲಿ ನಗು, ಆತ್ಮೀಯ, ಸುಖ, ದುಃಖದ ಭಾವ ಸೇರಿ ಎಲ್ಲವೂ ಇದೆ. ಆಗಿನ ಶಾಲೆಯಲ್ಲಿ ಬಾಂಧವ್ಯ ಇತ್ತು. ಇಂದಿನ ಶಾಲೆಯಲ್ಲಿ ಆ ಬಾಂಧವ್ಯ ಇಲ್ಲ. ಕಷ್ಟದಲ್ಲಿ ಇರುತ್ತೇನೆ ಎಂದಾಗಲಷ್ಟೇ ಸಹಾಯ ಮಾಡುತ್ತೇನೆ ಎನ್ನುವುದು ಗೆಳೆತನ ಅಲ್ಲ. ದುಃಖ ನನಗೆ ಇರಲಿ, ನೀನು ಆರೋಗ್ಯವಾಗಿರು ಎಂದು ಹೇಳುವುದು ನಿಜವಾದ ಸ್ನೇಹ ಎಂದರು.

ಗೆಳೆಯರ ಬಳಗದ ನೂತನ ಅಧ್ಯಕ್ಷ ವಿಶ್ವನಾಥ ಪಾಟೀಲ, ನಿಕಟಪೂರ್ವ ಅಧ್ಯಕ್ಷ ಶಿವಾಜಿ ಬಿಜಾಪೂರ, ಉಪಾಧ್ಯಕ್ಷ ಡಾ. ಸಿ. ಕೆ. ಶಿವಯೋಗಿಮಠ, ಪ್ರಧಾನ ಕಾರ್ಯದರ್ಶಿ ನಬಿರಸೂಲ ಮುದ್ನಾಳ, ಸಹ ಕಾರ್ಯದರ್ಶಿ ಮುಸ್ತಾಕ ಬಾಗವಾನ, ಖಜಾಂಚಿ ಆನಂದ ಜಂಬಗಿ, ಲೋಹಿತ ನಾಲತವಾಡ, ಶ್ರೀಶೈಲ ಭಾವಿಕಟ್ಟಿ ಮೊದಲಾದವರು ಇದ್ದರು. ಕಾರ್ಯಕ್ರಮದಲ್ಲಿ ಬೇರೆ ಜಿಲ್ಲೆ, ರಾಜ್ಯ, ವಿದೇಶದಲ್ಲಿರುವ ಗೆಳೆಯರು ಭಾಗವಹಿಸಿದ್ದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ