Sneha Sangam is the anniversary of the circle of friends

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹಿತರ ಬಳಗದಿಂದ ಸಮಾಜಮುಖಿ ಕಾರ್ಯಗಳಾಗಲಿ-ಹಂಚಲಿ

ಮುದ್ದೇಬಿಹಾಳ : ಸ್ನೇಹಿತರ ಬಳಗಗಳು ಕೇವಲ ವೈಯಕ್ತಿಕ ಸಮಸ್ಯೆಗಳಿಗೆ ಬಳಕೆಯಾಗದೇ ಸಮಾಜಮುಖಿ ಕಾರ್ಯಗಳಿಗೂ ಕೈ ಜೋಡಿಸುವ ಕಾರ್ಯ ಆಗಬೇಕು ಎಂದು ಬ.ಬಾಗೇವಾಡಿ ಸರಕಾರಿ ಪ್ರೌಢಶಾಲೆ ಸಹ ಶಿಕ್ಷಕ ಅಶೋಕ ಹಂಚಲಿ ಹೇಳಿದರು.

ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ಸ್ನೇಹ ಸಂಗಮ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ,1990-91ನೇ ಸಾಲಿನ ಎಸ್.ಎಸ್.ಎಲ್.ಸಿ ಗೆಳೆಯರ 50ನೇ ವರ್ಷದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ತುಳಿತಕ್ಕೊಳಗಾದವರಿಗೆ ನೆರವು ನೀಡುವ ಕಾರ್ಯಕ್ಕೆ ಮುಂದಾದಲ್ಲಿ ದೂರದಲ್ಲಿ ಇರುವವ ಸ್ನೇಹಿತರು ಅಂತಹದ್ದಕ್ಕೆ ಬೆಂಬಲಿಸುತ್ತಾರೆ. ಗೆಳೆಯರು ಸೇರಿದ್ದಲ್ಲಿ ಸ್ವರ್ಗ ನಿರ್ಮಾಣ ಆಗುತ್ತದೆ. ಸ್ನೇಹಕ್ಕೆ ಕೃಷ್ಣ ಕುಚೇಲರ ಗೆಳೆತನ ಮಾದರಿಯಾದದ್ದು ಎಂದರು.

ಸಾನಿಧ್ಯ ವಹಿಸಿದ್ದ ಹಿರೂರು ಅನ್ನದಾನೇಶ್ವರ ಹಿರೇಮಠದ ಜಯಸಿದ್ಧೇಶ್ವರ ಶಿವಾಚಾರ್ಯರು ಮಾತನಾಡಿ, ಗೆಳೆಯರು ಎಂದರೆ ಅಲ್ಲಿ ನಗು, ಆತ್ಮೀಯ, ಸುಖ, ದುಃಖದ ಭಾವ ಸೇರಿ ಎಲ್ಲವೂ ಇದೆ. ಆಗಿನ ಶಾಲೆಯಲ್ಲಿ ಬಾಂಧವ್ಯ ಇತ್ತು. ಇಂದಿನ ಶಾಲೆಯಲ್ಲಿ ಆ ಬಾಂಧವ್ಯ ಇಲ್ಲ. ಕಷ್ಟದಲ್ಲಿ ಇರುತ್ತೇನೆ ಎಂದಾಗಲಷ್ಟೇ ಸಹಾಯ ಮಾಡುತ್ತೇನೆ ಎನ್ನುವುದು ಗೆಳೆತನ ಅಲ್ಲ. ದುಃಖ ನನಗೆ ಇರಲಿ, ನೀನು ಆರೋಗ್ಯವಾಗಿರು ಎಂದು ಹೇಳುವುದು ನಿಜವಾದ ಸ್ನೇಹ ಎಂದರು.

ಗೆಳೆಯರ ಬಳಗದ ನೂತನ ಅಧ್ಯಕ್ಷ ವಿಶ್ವನಾಥ ಪಾಟೀಲ, ನಿಕಟಪೂರ್ವ ಅಧ್ಯಕ್ಷ ಶಿವಾಜಿ ಬಿಜಾಪೂರ, ಉಪಾಧ್ಯಕ್ಷ ಡಾ. ಸಿ. ಕೆ. ಶಿವಯೋಗಿಮಠ, ಪ್ರಧಾನ ಕಾರ್ಯದರ್ಶಿ ನಬಿರಸೂಲ ಮುದ್ನಾಳ, ಸಹ ಕಾರ್ಯದರ್ಶಿ ಮುಸ್ತಾಕ ಬಾಗವಾನ, ಖಜಾಂಚಿ ಆನಂದ ಜಂಬಗಿ, ಲೋಹಿತ ನಾಲತವಾಡ, ಶ್ರೀಶೈಲ ಭಾವಿಕಟ್ಟಿ ಮೊದಲಾದವರು ಇದ್ದರು. ಕಾರ್ಯಕ್ರಮದಲ್ಲಿ ಬೇರೆ ಜಿಲ್ಲೆ, ರಾಜ್ಯ, ವಿದೇಶದಲ್ಲಿರುವ ಗೆಳೆಯರು ಭಾಗವಹಿಸಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ