Sneha Sangam is the anniversary of the circle of friends

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹಿತರ ಬಳಗದಿಂದ ಸಮಾಜಮುಖಿ ಕಾರ್ಯಗಳಾಗಲಿ-ಹಂಚಲಿ

ಮುದ್ದೇಬಿಹಾಳ : ಸ್ನೇಹಿತರ ಬಳಗಗಳು ಕೇವಲ ವೈಯಕ್ತಿಕ ಸಮಸ್ಯೆಗಳಿಗೆ ಬಳಕೆಯಾಗದೇ ಸಮಾಜಮುಖಿ ಕಾರ್ಯಗಳಿಗೂ ಕೈ ಜೋಡಿಸುವ ಕಾರ್ಯ ಆಗಬೇಕು ಎಂದು ಬ.ಬಾಗೇವಾಡಿ ಸರಕಾರಿ ಪ್ರೌಢಶಾಲೆ ಸಹ ಶಿಕ್ಷಕ ಅಶೋಕ ಹಂಚಲಿ ಹೇಳಿದರು.

ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ಸ್ನೇಹ ಸಂಗಮ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ,1990-91ನೇ ಸಾಲಿನ ಎಸ್.ಎಸ್.ಎಲ್.ಸಿ ಗೆಳೆಯರ 50ನೇ ವರ್ಷದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ತುಳಿತಕ್ಕೊಳಗಾದವರಿಗೆ ನೆರವು ನೀಡುವ ಕಾರ್ಯಕ್ಕೆ ಮುಂದಾದಲ್ಲಿ ದೂರದಲ್ಲಿ ಇರುವವ ಸ್ನೇಹಿತರು ಅಂತಹದ್ದಕ್ಕೆ ಬೆಂಬಲಿಸುತ್ತಾರೆ. ಗೆಳೆಯರು ಸೇರಿದ್ದಲ್ಲಿ ಸ್ವರ್ಗ ನಿರ್ಮಾಣ ಆಗುತ್ತದೆ. ಸ್ನೇಹಕ್ಕೆ ಕೃಷ್ಣ ಕುಚೇಲರ ಗೆಳೆತನ ಮಾದರಿಯಾದದ್ದು ಎಂದರು.

ಸಾನಿಧ್ಯ ವಹಿಸಿದ್ದ ಹಿರೂರು ಅನ್ನದಾನೇಶ್ವರ ಹಿರೇಮಠದ ಜಯಸಿದ್ಧೇಶ್ವರ ಶಿವಾಚಾರ್ಯರು ಮಾತನಾಡಿ, ಗೆಳೆಯರು ಎಂದರೆ ಅಲ್ಲಿ ನಗು, ಆತ್ಮೀಯ, ಸುಖ, ದುಃಖದ ಭಾವ ಸೇರಿ ಎಲ್ಲವೂ ಇದೆ. ಆಗಿನ ಶಾಲೆಯಲ್ಲಿ ಬಾಂಧವ್ಯ ಇತ್ತು. ಇಂದಿನ ಶಾಲೆಯಲ್ಲಿ ಆ ಬಾಂಧವ್ಯ ಇಲ್ಲ. ಕಷ್ಟದಲ್ಲಿ ಇರುತ್ತೇನೆ ಎಂದಾಗಲಷ್ಟೇ ಸಹಾಯ ಮಾಡುತ್ತೇನೆ ಎನ್ನುವುದು ಗೆಳೆತನ ಅಲ್ಲ. ದುಃಖ ನನಗೆ ಇರಲಿ, ನೀನು ಆರೋಗ್ಯವಾಗಿರು ಎಂದು ಹೇಳುವುದು ನಿಜವಾದ ಸ್ನೇಹ ಎಂದರು.

ಗೆಳೆಯರ ಬಳಗದ ನೂತನ ಅಧ್ಯಕ್ಷ ವಿಶ್ವನಾಥ ಪಾಟೀಲ, ನಿಕಟಪೂರ್ವ ಅಧ್ಯಕ್ಷ ಶಿವಾಜಿ ಬಿಜಾಪೂರ, ಉಪಾಧ್ಯಕ್ಷ ಡಾ. ಸಿ. ಕೆ. ಶಿವಯೋಗಿಮಠ, ಪ್ರಧಾನ ಕಾರ್ಯದರ್ಶಿ ನಬಿರಸೂಲ ಮುದ್ನಾಳ, ಸಹ ಕಾರ್ಯದರ್ಶಿ ಮುಸ್ತಾಕ ಬಾಗವಾನ, ಖಜಾಂಚಿ ಆನಂದ ಜಂಬಗಿ, ಲೋಹಿತ ನಾಲತವಾಡ, ಶ್ರೀಶೈಲ ಭಾವಿಕಟ್ಟಿ ಮೊದಲಾದವರು ಇದ್ದರು. ಕಾರ್ಯಕ್ರಮದಲ್ಲಿ ಬೇರೆ ಜಿಲ್ಲೆ, ರಾಜ್ಯ, ವಿದೇಶದಲ್ಲಿರುವ ಗೆಳೆಯರು ಭಾಗವಹಿಸಿದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ