ವಚನಗಳಿಂದ ಸಮಾಜ ಸುಧಾರಣೆ-ತಹಶೀಲ್ದಾರ್ ಚಾಲಕ್

ವಚನಗಳಿಂದ ಸಮಾಜ ಸುಧಾರಣೆ-ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : ಹನ್ನೆರಡನೇ ಶತಮಾನದಲ್ಲಿದ್ದ ವಚನಕಾರರು ರಚಿಸಿರುವ ವಚನಗಳಿಂದ ಸಮಾಜದ ಸುಧಾರಣೆ ಆಗಿದೆ.ನಂಬಿಕೆಗೆ ಮತ್ತೊಂದು ಹೆಸರು ನಿಜ ಶರಣ ಅಂಬಿಗರ ಚೌಡಯ್ಯನವರು ಎಂದು ತಹಶೀಲ್ದಾರ ಕೀರ್ತಿ ಚಾಲಕ್ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿದ್ದ ಅನಿಷ್ಟ ಪದ್ಧತಿಗಳಿಗೆ ವಚನಗಳ ಮೂಲಕ ಪರಿಹಾರ ಕಂಡುಕೊoಡವರು ಶರಣರು.ಅಂತಹ ವಚನಕಾರರಲ್ಲಿ ಅಂಬಿಗರ ಚೌಡಯ್ಯನವರು ಮುಂಚೂಣಿ ಸಾಲಿನಲ್ಲಿ ನಿಲ್ಲುತ್ತಾರೆ ಎಂದರು.

ಉಪನ್ಯಾಸಕರಾಗಿ ಚಿರ್ಚನಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಟಿ.ಡಿ ಲಮಾಣಿ ಮಾತನಾಡಿ, ಅಂಬಿಗರ ಚೌಡಯ್ಯನವರ ಕ್ರಾಂತಿಕಾರಿ ಮಾತುಗಳನ್ನು ಮತ್ತು ಅತ್ಯಂತ ಕಠಿಣವಾದ ವಚನಗಳನ್ನು ರಚಿಸಿ ಸಮಾಜದ ಸುಧಾರಣೆಗೆ ಯತ್ನಿಸಿದರು.ಅವರಿಗೆ ನಿಜ ಶರಣ ಎಂದು ಬಿರುದು ಕೊಟ್ಟವರು ಬಸವಣ್ಣನವರು.ಸ್ವಾಭಿಮಾನದ ಬದುಕು ಅಂಬಿಗರ ಚೌಡಯ್ಯನವರದಾಗಿತ್ತು.ಅಂಬಿಗ ಸಮಾಜದ ಬಾಂಧವರು ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದರು.

ಬಿಇಒ ಬಿ.ಎಸ್.ಸಾವಳಗಿ ಮಾತನಾಡಿ, ಚೌಡಯ್ಯನವರ ಜೀವನ ಮತ್ತು ಅವರು ಬೆಳೆದು ಬಂದ ಹಾದಿ ಅವರ ವಚನಗಳು ಮತ್ತು 12 ನೇ ಶತಮಾನದ ಶರಣರ ಕುರಿತು ಮಾತನಾಡಿದರು.

ಸಮಾಜದ ಮುಖಂಡ ವೆಂಕಟೇಶ ಅಂಬಿಗೇರ,ಶಿಕ್ಷಕ ನಾಟೀಕಾರ ಮಾತನಾಡಿದರು. ತಾಲ್ಲೂಕು ಆಡಳಿತದಿಂದ ತಂಗಡಗಿ ರಸ್ತೆಯಲ್ಲಿರುವ ಚೌಡಯ್ಯನವರ ಮೂರ್ತಿಗೆ ಪೂಜೆ ಸಲ್ಲಿಸಿ ವಾದ್ಯಮೇಳದ ಮೂಲಕ ಬಸವೇಶ್ವರ ವೃತ್ತ,ಚನ್ನಮ್ಮ ದ್ವಾರದ ಮೂಲಕ ತಹಶೀಲ್ದಾರ ಕಚೇರಿಗೆ ಆಗಮಿಸಿ ಚೌಡಯ್ಯನವರ ಭಾವಚಿತ್ರಕ್ಕೆ ಅಧಿಕಾರಿಗಳು ಪೂಜೆ ಸಲ್ಲಿಸಿದರು.


ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಶಿವಾನಂದ ಮೇಟಿ,ಅಕ್ಷರ ದಾಸೋಹ ನಿರ್ದೇಶಕ ಎಂ.ಎo.ಬೆಳಗಲ್ಲ, ಪಿಡಬ್ಲೂಡಿ ಇಲಾಖೆಯ ಮುತ್ತು ಢವಳಗಿ, ಆರೋಗ್ಯ ಇಲಾಖೆಯ ಅನಸೂಯಾ ತೇರದಾಳ, ಸಮಾಜದ ಅಧ್ಯಕ್ಷ ಚಂದ್ರಶೇಖರ ಅಂಬಿಗೇರ,ನಿAಗಣ್ಣ ಕಟ್ಟಿಮನಿ,ಸಂದೀಪ ಬಿದರಕೋಟಿ,ಸಾಯಬಣ್ಣ ಕಟ್ಟಿಮನಿ,ನಾಗೇಶ ದನಗೊಂಡ,ಶಿವಪ್ಪ ಚಿಮ್ಮಲಗಿ,ಭಿಮಣ್ಣ ಹಿರೇಅಂಬಿಗೇರ,ಹಣಮoತರಾಯ ನಾಟೀಕಾರ,ಚಂದ್ರಕಾoತ ಮನಗೂಳಿ,ಸಾಗರ.ಎಂ.ಉಕ್ಕಲಿ, ರಾಜಶೇಖರ ಮನಗೂಳಿ, ಸುನೀಲ್ ಎಂ.ಉಕ್ಕಲಿ,ಮೋಹನ ತಳವಾರ, ಸಿದ್ದಪ್ಪ ತಳವಾರ, ಸಂದೀಪ್ ಮನಗೂಳಿ, ಯಲ್ಲಪ್ಪ ಅಂಬಿಗೇರ,ಸಿದ್ದಣ ಶಾಸ್ತ್ರಿ,ಆನಂದ,ಸೇರಿದoತೆ ಸಮಾಜದ ಅನೇಕರು ಉಪಸ್ಥಿತರಿದ್ದರು.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ