ವಚನಗಳಿಂದ ಸಮಾಜ ಸುಧಾರಣೆ-ತಹಶೀಲ್ದಾರ್ ಚಾಲಕ್

ವಚನಗಳಿಂದ ಸಮಾಜ ಸುಧಾರಣೆ-ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : ಹನ್ನೆರಡನೇ ಶತಮಾನದಲ್ಲಿದ್ದ ವಚನಕಾರರು ರಚಿಸಿರುವ ವಚನಗಳಿಂದ ಸಮಾಜದ ಸುಧಾರಣೆ ಆಗಿದೆ.ನಂಬಿಕೆಗೆ ಮತ್ತೊಂದು ಹೆಸರು ನಿಜ ಶರಣ ಅಂಬಿಗರ ಚೌಡಯ್ಯನವರು ಎಂದು ತಹಶೀಲ್ದಾರ ಕೀರ್ತಿ ಚಾಲಕ್ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿದ್ದ ಅನಿಷ್ಟ ಪದ್ಧತಿಗಳಿಗೆ ವಚನಗಳ ಮೂಲಕ ಪರಿಹಾರ ಕಂಡುಕೊoಡವರು ಶರಣರು.ಅಂತಹ ವಚನಕಾರರಲ್ಲಿ ಅಂಬಿಗರ ಚೌಡಯ್ಯನವರು ಮುಂಚೂಣಿ ಸಾಲಿನಲ್ಲಿ ನಿಲ್ಲುತ್ತಾರೆ ಎಂದರು.

ಉಪನ್ಯಾಸಕರಾಗಿ ಚಿರ್ಚನಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಟಿ.ಡಿ ಲಮಾಣಿ ಮಾತನಾಡಿ, ಅಂಬಿಗರ ಚೌಡಯ್ಯನವರ ಕ್ರಾಂತಿಕಾರಿ ಮಾತುಗಳನ್ನು ಮತ್ತು ಅತ್ಯಂತ ಕಠಿಣವಾದ ವಚನಗಳನ್ನು ರಚಿಸಿ ಸಮಾಜದ ಸುಧಾರಣೆಗೆ ಯತ್ನಿಸಿದರು.ಅವರಿಗೆ ನಿಜ ಶರಣ ಎಂದು ಬಿರುದು ಕೊಟ್ಟವರು ಬಸವಣ್ಣನವರು.ಸ್ವಾಭಿಮಾನದ ಬದುಕು ಅಂಬಿಗರ ಚೌಡಯ್ಯನವರದಾಗಿತ್ತು.ಅಂಬಿಗ ಸಮಾಜದ ಬಾಂಧವರು ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದರು.

ಬಿಇಒ ಬಿ.ಎಸ್.ಸಾವಳಗಿ ಮಾತನಾಡಿ, ಚೌಡಯ್ಯನವರ ಜೀವನ ಮತ್ತು ಅವರು ಬೆಳೆದು ಬಂದ ಹಾದಿ ಅವರ ವಚನಗಳು ಮತ್ತು 12 ನೇ ಶತಮಾನದ ಶರಣರ ಕುರಿತು ಮಾತನಾಡಿದರು.

ಸಮಾಜದ ಮುಖಂಡ ವೆಂಕಟೇಶ ಅಂಬಿಗೇರ,ಶಿಕ್ಷಕ ನಾಟೀಕಾರ ಮಾತನಾಡಿದರು. ತಾಲ್ಲೂಕು ಆಡಳಿತದಿಂದ ತಂಗಡಗಿ ರಸ್ತೆಯಲ್ಲಿರುವ ಚೌಡಯ್ಯನವರ ಮೂರ್ತಿಗೆ ಪೂಜೆ ಸಲ್ಲಿಸಿ ವಾದ್ಯಮೇಳದ ಮೂಲಕ ಬಸವೇಶ್ವರ ವೃತ್ತ,ಚನ್ನಮ್ಮ ದ್ವಾರದ ಮೂಲಕ ತಹಶೀಲ್ದಾರ ಕಚೇರಿಗೆ ಆಗಮಿಸಿ ಚೌಡಯ್ಯನವರ ಭಾವಚಿತ್ರಕ್ಕೆ ಅಧಿಕಾರಿಗಳು ಪೂಜೆ ಸಲ್ಲಿಸಿದರು.


ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಶಿವಾನಂದ ಮೇಟಿ,ಅಕ್ಷರ ದಾಸೋಹ ನಿರ್ದೇಶಕ ಎಂ.ಎo.ಬೆಳಗಲ್ಲ, ಪಿಡಬ್ಲೂಡಿ ಇಲಾಖೆಯ ಮುತ್ತು ಢವಳಗಿ, ಆರೋಗ್ಯ ಇಲಾಖೆಯ ಅನಸೂಯಾ ತೇರದಾಳ, ಸಮಾಜದ ಅಧ್ಯಕ್ಷ ಚಂದ್ರಶೇಖರ ಅಂಬಿಗೇರ,ನಿAಗಣ್ಣ ಕಟ್ಟಿಮನಿ,ಸಂದೀಪ ಬಿದರಕೋಟಿ,ಸಾಯಬಣ್ಣ ಕಟ್ಟಿಮನಿ,ನಾಗೇಶ ದನಗೊಂಡ,ಶಿವಪ್ಪ ಚಿಮ್ಮಲಗಿ,ಭಿಮಣ್ಣ ಹಿರೇಅಂಬಿಗೇರ,ಹಣಮoತರಾಯ ನಾಟೀಕಾರ,ಚಂದ್ರಕಾoತ ಮನಗೂಳಿ,ಸಾಗರ.ಎಂ.ಉಕ್ಕಲಿ, ರಾಜಶೇಖರ ಮನಗೂಳಿ, ಸುನೀಲ್ ಎಂ.ಉಕ್ಕಲಿ,ಮೋಹನ ತಳವಾರ, ಸಿದ್ದಪ್ಪ ತಳವಾರ, ಸಂದೀಪ್ ಮನಗೂಳಿ, ಯಲ್ಲಪ್ಪ ಅಂಬಿಗೇರ,ಸಿದ್ದಣ ಶಾಸ್ತ್ರಿ,ಆನಂದ,ಸೇರಿದoತೆ ಸಮಾಜದ ಅನೇಕರು ಉಪಸ್ಥಿತರಿದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,