ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು ಬೆಂಬಲಿಸುವ ಕಾರ್ಯ ಸಮಾಜ,ಸಂಘಟನೆಗಳು ಮಾಡಬೇಕು ಎಂದು ಸಮಾಜ ಸೇವಕ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.

ವಿದ್ಯಾಸ್ಪೂರ್ತಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಪ್ರಾಚೀನ ಕಾಲದ ಗುರುಕುಲ ಪದ್ಧತಿಯಲ್ಲಿ ಖಾಸಗಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ವಸತಿ ಕಲ್ಪಿಸಿ ಶಿಕ್ಷಣ ಕೊಡುವ ಕಾರ್ಯ ಮಾಡುತ್ತಿವೆ.ನೌಕರರ ಮಕ್ಕಳು,ಸ್ಥಿತಿವಂತರ ಮಕ್ಕಳು ಇಂತಹ ಸಣ್ಣಪುಟ್ಟ ಶಾಲೆಗಳಲ್ಲಿ ಓದುವುದಿಲ್ಲ.ಇಲ್ಲಿ ಓದುವ ಮಕ್ಕಳ ಪಾಲಕರಲ್ಲಿ ಬಹುತೇಕರು ಗೋವಾ,ಮಹರಾಷ್ಟçದ ರಾಜ್ಯಗಳಲ್ಲಿ ಗುಳೇ ಹೋಗಿ ದುಡಿಯುವವರು.ಅದನ್ನು ಲಕ್ಷö್ಯದಲ್ಲಿಟ್ಟುಕೊಂಡು ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟಿಕೊಡಲು ಸಮಾಜ ಮುಂದಾಗಬೇಕೆ ಹೊರತು ಶಿಕ್ಷಣ ಸಂಸ್ಥೆಗಳ ಮೇಲೆ ರಾಜಕೀಯ ವ್ಯಕ್ತಿಗಳು ಕೈ ಆಡಿಸುವುದು ಸರಿಯಾದ ಬೆಳವಣಿಗೆಯಲ್ಲ ಎಂದು ಹೇಳಿದರು.

ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಎಸ್.ಬಿ.ಚಲವಾದಿ ಮಾತನಾಡಿ, ಗುಣಾತ್ಮಕ ಶಿಕ್ಷಣ ಕೊಡುತ್ತಿರುವ ಕಾರಣದಿಂದಲೇ ಶಿಕ್ಷಣ ಸಂಸ್ಥೆಯೊAದು ಬೆಳೆದು ನಿಲ್ಲಲು ಸಾಧ್ಯವಾಗುತ್ತದೆ.ಅಂತಹ ಗುಣಾತ್ಮಕ ಶಿಕ್ಷಣ ನೀಡುವ ಸಂಸ್ಥೆ ವಿದ್ಯಾಸ್ಪೂರ್ತಿ ಶಾಲೆಯಾಗಿದೆ.ಒಳ್ಳೆಯ ಸಂಸ್ಥೆಗಳು ಬೆಳೆಯುವ ಹಂತದಲ್ಲಿ ಕಾಡುವವರು ಬಹಳ ಜನ ಇದ್ದಾರೆ.ಅವರು ಕಾಡುತ್ತಿರುವುದಕ್ಕೆ ಕಾರಣ ಒಳ್ಳೆಯ ಫಲಿತಾಂಶ ಕಾರಣವಾಗಿದೆ. ಸಹದ್ಯೋಗಿ ಸಂಸ್ಥೆಗಳಲ್ಲಿರುವವರು ಅಸೂಯೆ ಭಾವನೆ ಬೆಳೆಯುವಂತೆ ಮಾಡಿ ಹೋರಾಟ ಮಾಡುತ್ತಿದ್ದಾರೆ.ಕಷ್ಟ ನಷ್ಟಗಳು ಬರಬಹುದು.ಅವುಗಳನ್ನು ಎದುರಿಸಬೇಕು.ಮಕ್ಕಳಿಗೆ ಅಕ್ಷರಜ್ಞಾನಕ್ಕಿಂತ ಸಂಸ್ಕಾರವನ್ನು ನೀಡಬೇಕು.ಒಳ್ಳೆಯದಿರುವಲ್ಲಿ ಸಮಾಜ ಬೆನ್ನುತಟ್ಟಿ ಪ್ರೋತ್ಸಾಹಿಸಬೇಕು ಎಂದರು.

ವಿದ್ಯಾಸ್ಪೂರ್ತಿ ಪಬ್ಲಿಕ್ ಶಾಲೆಯ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಸಿದರೆಡ್ಡಿ ಮಾತನಾಡಿ, ಕಳೆದ ಹತ್ತು ವರ್ಷಗಳಲ್ಲಿ ನಮ್ಮ ಶಾಲೆಯಿಂದ ನೂರಾರು ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದು ನವೋದಯ,ಸೈನಿಕ,ಮೊರಾರ್ಜಿ,ಕಿತ್ತೂರು ಚೆನ್ನಮ್ಮ,ಅಳಿಕೆ,ಆರ್.ಎಂ.ಎಸ್.ಎ ಶಾಲೆಯಂತಹ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಂಡಿದ್ದಾರೆ ಎಂದು ಹೇಳಿದರು.

ಸಂಸ್ಥೆಯ ಅಧ್ಯಕ್ಷೆ ಬಸಮ್ಮ ಸಿದರೆಡ್ಡಿ ಮಾತನಾಡಿ, ನಾವು ಹುಟ್ಟಿ ಬೆಳೆದಿದ್ದು ನಾಗರಬೆಟ್ಟದ ಗ್ರಾಮೀಣ ಭಾಗದಲ್ಲಿ.ನಮ್ಮ ಕುಟುಂಬದ ವೃತ್ತಿ ಮುಂಬಯಿನಲ್ಲಿತ್ತು.ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಅಕ್ಷರ ಜ್ಞಾನ ಕೊಡಬೇಕು ಎಂಬ ಸದುದ್ದೇಶದಿಂದ ನಮ್ಮ ಆಸ್ತಿ ಮಾರಿ ಇಲ್ಲಿ ಶಾಲೆಗಳನ್ನು ಆರಂಭಿಸಿದ್ದೇವೆ.ಕೆಲವರು ನಮ್ಮ ಬೆಳವಣಿಗೆ ಸಹಿಸದೇ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ.ಅದಕ್ಕೆ ನಮ್ಮ ಶಾಲೆಯಿಂದ ಮಕ್ಕಳಿಗೆ ದೊರೆಯುತ್ತಿರುವ ಗುಣಾತ್ಮಕ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಶಾಲೆಗಳಲ್ಲಿ ಆಯ್ಕೆಯಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯ ಉತ್ತರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಪ್ರಗತಿಪರ ರೈತ ಯಂಕಪ್ಪಗೌಡ ಕೊಣ್ಣೂರ,
ಸಂಸ್ಥೆಯ ಉಪಾಧ್ಯಕ್ಷ ರಾಮನಗೌಡ ಸಿದರಡ್ಡಿ,ಮಲ್ಲಿಕಾರ್ಜುನ ಸಿದರೆಡ್ಡಿ, ಪಲ್ಲವಿ ಸಿದರೆಡ್ಡಿ,ಶಾಲೆಯ ಮುಖ್ಯಗುರು ಗುರುರಾಜ ಕನ್ನೂರ, ದಸ್ತಗೀರ್, ದಂಡಮ್ಮ, ಜಯಶ್ರೀ, ವಿಜಯಲಕ್ಷ್ಮಿ ಹಾಗೂ ರವಿ ಪತ್ತಾರ,ಚನ್ನಬಸು ಬಳವಾಟ ಪಾಲ್ಗೊಂಡಿದ್ದರು. ಸಾವಿತ್ರಿ ಬಿರಾದಾರ ನಿರೂಪಿಸಿದರು. ವಾಣಿ ಬಿರಾದಾರ ಸ್ವಾಗತಿಸಿದರು. ಪ್ರಿಯಾಂಕ ಮುದ್ದೇಬಿಹಾಳ ವಂದಿಸಿದರು.
ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್–2026 ಪರೀಕ್ಷೆಯಲ್ಲಿ ಹೂವಿನ ಹಿಪ್ಪರಗಿಯ ಆದ್ಯಾ ಶಿವಯೋಗಿ ಪ್ರಥಮ, ನಿಡಗುಂದಿಯ ಸಮನ್ವಿತಾ ಸಜ್ಜನ ದ್ವಿತೀಯ,ಢವಳಗಿಯ ಸ್ಮಿತಿಕಾ ಬಿರಾದಾರ ತೃತೀಯ ಬಹುಮಾನವನ್ನು ಪಡೆದರು. ಉತ್ತಮ ಸಾಧನೆಗೈದ 10 ವಿದ್ಯಾರ್ಥಿಗಳಿಗೆ ಸಮಾಧಾನಕರ ಬಹುಮಾನಗಳನ್ನು ವಿತರಿಸಲಾಯಿತು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ