Solve labor problems at factory level: Minister Santosh Lad

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ: ಸಚಿವ ಸಂತೋಷ್‌ ಲಾಡ್‌

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಕಲಬುರಗಿ ಜಿಲ್ಲೆಯ ಮುಳಖೇಡದಲ್ಲಿರುವ ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ವಿಕಾಸಸೌಧದಲ್ಲಿ ಇಂದು ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವರು, ಕಾರ್ಖಾನೆಯ ನೌಕರರ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು. ಬೆಂಗಳೂರಿನವರೆಗೂ ಸಮಸ್ಯೆಗಳನ್ನು ತರಬಾರದು. ಒಂದೇ ಕಡೆ ಕೆಲಸ ಮಾಡುವವರು ಒಂದು ಕುಟುಂಬದಂತೆ ಇರಬೇಕು ಎಂದು ಸಲಹೆ ನೀಡಿದರು.

ಮ್ಯಾನೇಜ್‌ಮೆಂಟ್‌ ಕಾರ್ಮಿಕರ ಸಮಸ್ಯೆಗಳ ಬಗ್ಗೆ ತಿಳಿಯದೇ ಇದ್ದರೆ ಕೇಳದೇ ಇದ್ದರೆ ಅವುಗಳು ಹೆಚ್ಚಾಗುತ್ತವೆ. ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಿಕೊಳ್ಳಬೇಕು. ನೌಕರರ ಸಮಸ್ಯೆಗಳನ್ನು ಮಾನವೀಯತೆಯಿಂದ ಬಗೆಹರಿಸಿಕೊಳ್ಳಬೇಕು. ಪ್ರೀತಿ ಮತ್ತು ಕಾಳಜಿಯಿಂದ ನೌಕರರನ್ನು ನೋಡಿ. ಆಗ ಅವರೂ ದಕ್ಷತೆಯಿಂದ, ಬದ್ಧತೆಯಿಂದ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಕಾರ್ಮಿಕರಿಲ್ಲರೆ ಕಾರ್ಖಾನೆ ಇಲ್ಲ. ಹಾಗೇಯೇ ಕಾರ್ಖಾನೆಗೆ ಕಾರ್ಮಿಕರೇ ಜೀವಾಳ. ಕಾರ್ಮಿಕರ ಸಮಸ್ಯೆ ಹೊತ್ತುಕೊಂಡು ಇಲ್ಲಿವರೆಗೆ ಬರುವುದಕ್ಕಿಂತ ಅಲ್ಲೇ ಪರಿಹರಿಸಿಕೊಳ್ಳಿ. ಆದ್ದರಿಂದ ಕಾರ್ಮಿಕರ ಬಗ್ಗೆ ಕಾಳಜಿ ತೋರಿ ಗೌರವ ಕೊಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಇನ್ನು ಮುಂದೆ ಸಮಸ್ಯೆ ಹೊತ್ತುಕೊಂಡು ನನ್ನ ಬಳಿ ಬರಬೇಡಿ ಎಂದರು.

ಈ ವೇಳೆ ನೌಕರರು ತಮಗೆ ವೈದ್ಯಕೀಯ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಇವುಗಳ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಲಾಡ್‌ ಅವರು ಭರವಸೆ ನೀಡಿದರು.

ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಕಾರ್ಖಾನೆಗಳು ಮತ್ತು ಬಾಯ್ಲರ್ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಶ್ರೀ ರಾಥೋಡ್, ಉಪ ನಿರ್ದೇಶಕರಾದ ಶ್ರೀ ನಂಜಪ್ಪ, ಕೇಂದ್ರ ಕಾರ್ಮಿಕ ಇಲಾಖೆಯ ಉಪ ಆಯುಕ್ತರು ಮತ್ತು ಕೇಂದ್ರ ಕಾರ್ಮಿಕ ಇಲಾಖೆಯ ಸಹಾಯ ಕಾರ್ಮಿಕ ಆಯುಕ್ತರು, ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಮ್ಯಾನೇಜರ್ ನಾರಾಯಣ್, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು, ಕಾರ್ಖಾನೆಯ ನೌಕರರು ಪಾಲ್ಗೊಂಡಿದ್ದರು.

Latest News

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್ ಕುಂಬಾರವಾಡಿ ಹಾಗೂ ಬಷಿರಅಹ್ಮದ್ ಕಡದರಾಳ ಅವರ ಕುಟುಂಬಕ್ಕೆ ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಆರ್ಥಿಕ ನೆರವು ನೀಡಿದರು. ಇಬ್ಬರು ಸಂತ್ರಸ್ಥರ ಕುಟುಂಬಕ್ಕೆ ಭೇಟಿ ಮಾಡಿದ ಅಧ್ಯಕ್ಷ ಅಸ್ಕಿ ಅವರು ಸಾಂತ್ವನ ಹೇಳಿ ಒಂದು ಲಕ್ಷ ರೂ. ಧನ ಸಹಾಯ ಮಾಡಿದರು. ಈ ಸಮಯದಲ್ಲಿ ತಾಳಿಕೋಟಿ ಧಾರ್ಮಿಕ ಮುಖಂಡ ಸೈಯದ ಶಕೀಲಅಹ್ಮದ್ ಖಾಜಿ, ಗ್ಯಾರಂಟಿ ಸಮಿತಿ

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದ ವೇಳೆ ಅನುದಾನ ದುರುಪಯೋಗದ ಆರೋಪದ ಮೇಲೆ ಅಧಿಕಾರಿ ವಿಜಯಾ ಮುದಗಲ್ ಅವರನ್ನು ಅಮಾನತುಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ ಆದೇಶಿಸಿದ್ದಾರೆ. ಪ್ರಕರಣವೇನು : ಸನ್ 2019-20 ರಿಂದ 2021-22ನೇ ಅವಧಿಯ ಯರಝರಿ ಗ್ರಾಮ ಪಂಚಾಯಿತಿ ವಿಜಯಪುರ ಜಿಲ್ಲೆಯಲ್ಲಿ ಎಸ್.ಸಿ/ಎಸ್ಟಿ ಜನಾಂಗದ ಅಭಿವೃದ್ಧಿಗಾಗಿ ಮೀಸಲಿರಿಸಿದ