Solve labor problems at factory level: Minister Santosh Lad

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ: ಸಚಿವ ಸಂತೋಷ್‌ ಲಾಡ್‌

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಕಲಬುರಗಿ ಜಿಲ್ಲೆಯ ಮುಳಖೇಡದಲ್ಲಿರುವ ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ವಿಕಾಸಸೌಧದಲ್ಲಿ ಇಂದು ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವರು, ಕಾರ್ಖಾನೆಯ ನೌಕರರ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು. ಬೆಂಗಳೂರಿನವರೆಗೂ ಸಮಸ್ಯೆಗಳನ್ನು ತರಬಾರದು. ಒಂದೇ ಕಡೆ ಕೆಲಸ ಮಾಡುವವರು ಒಂದು ಕುಟುಂಬದಂತೆ ಇರಬೇಕು ಎಂದು ಸಲಹೆ ನೀಡಿದರು.

ಮ್ಯಾನೇಜ್‌ಮೆಂಟ್‌ ಕಾರ್ಮಿಕರ ಸಮಸ್ಯೆಗಳ ಬಗ್ಗೆ ತಿಳಿಯದೇ ಇದ್ದರೆ ಕೇಳದೇ ಇದ್ದರೆ ಅವುಗಳು ಹೆಚ್ಚಾಗುತ್ತವೆ. ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಿಕೊಳ್ಳಬೇಕು. ನೌಕರರ ಸಮಸ್ಯೆಗಳನ್ನು ಮಾನವೀಯತೆಯಿಂದ ಬಗೆಹರಿಸಿಕೊಳ್ಳಬೇಕು. ಪ್ರೀತಿ ಮತ್ತು ಕಾಳಜಿಯಿಂದ ನೌಕರರನ್ನು ನೋಡಿ. ಆಗ ಅವರೂ ದಕ್ಷತೆಯಿಂದ, ಬದ್ಧತೆಯಿಂದ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಕಾರ್ಮಿಕರಿಲ್ಲರೆ ಕಾರ್ಖಾನೆ ಇಲ್ಲ. ಹಾಗೇಯೇ ಕಾರ್ಖಾನೆಗೆ ಕಾರ್ಮಿಕರೇ ಜೀವಾಳ. ಕಾರ್ಮಿಕರ ಸಮಸ್ಯೆ ಹೊತ್ತುಕೊಂಡು ಇಲ್ಲಿವರೆಗೆ ಬರುವುದಕ್ಕಿಂತ ಅಲ್ಲೇ ಪರಿಹರಿಸಿಕೊಳ್ಳಿ. ಆದ್ದರಿಂದ ಕಾರ್ಮಿಕರ ಬಗ್ಗೆ ಕಾಳಜಿ ತೋರಿ ಗೌರವ ಕೊಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಇನ್ನು ಮುಂದೆ ಸಮಸ್ಯೆ ಹೊತ್ತುಕೊಂಡು ನನ್ನ ಬಳಿ ಬರಬೇಡಿ ಎಂದರು.

ಈ ವೇಳೆ ನೌಕರರು ತಮಗೆ ವೈದ್ಯಕೀಯ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಇವುಗಳ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಲಾಡ್‌ ಅವರು ಭರವಸೆ ನೀಡಿದರು.

ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಕಾರ್ಖಾನೆಗಳು ಮತ್ತು ಬಾಯ್ಲರ್ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಶ್ರೀ ರಾಥೋಡ್, ಉಪ ನಿರ್ದೇಶಕರಾದ ಶ್ರೀ ನಂಜಪ್ಪ, ಕೇಂದ್ರ ಕಾರ್ಮಿಕ ಇಲಾಖೆಯ ಉಪ ಆಯುಕ್ತರು ಮತ್ತು ಕೇಂದ್ರ ಕಾರ್ಮಿಕ ಇಲಾಖೆಯ ಸಹಾಯ ಕಾರ್ಮಿಕ ಆಯುಕ್ತರು, ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಮ್ಯಾನೇಜರ್ ನಾರಾಯಣ್, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು, ಕಾರ್ಖಾನೆಯ ನೌಕರರು ಪಾಲ್ಗೊಂಡಿದ್ದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು