Solve labor problems at factory level: Minister Santosh Lad

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ: ಸಚಿವ ಸಂತೋಷ್‌ ಲಾಡ್‌

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಕಲಬುರಗಿ ಜಿಲ್ಲೆಯ ಮುಳಖೇಡದಲ್ಲಿರುವ ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ವಿಕಾಸಸೌಧದಲ್ಲಿ ಇಂದು ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸಚಿವರು, ಕಾರ್ಖಾನೆಯ ನೌಕರರ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು. ಬೆಂಗಳೂರಿನವರೆಗೂ ಸಮಸ್ಯೆಗಳನ್ನು ತರಬಾರದು. ಒಂದೇ ಕಡೆ ಕೆಲಸ ಮಾಡುವವರು ಒಂದು ಕುಟುಂಬದಂತೆ ಇರಬೇಕು ಎಂದು ಸಲಹೆ ನೀಡಿದರು.

ಮ್ಯಾನೇಜ್‌ಮೆಂಟ್‌ ಕಾರ್ಮಿಕರ ಸಮಸ್ಯೆಗಳ ಬಗ್ಗೆ ತಿಳಿಯದೇ ಇದ್ದರೆ ಕೇಳದೇ ಇದ್ದರೆ ಅವುಗಳು ಹೆಚ್ಚಾಗುತ್ತವೆ. ಸಮಸ್ಯೆಗಳನ್ನು ಅಲ್ಲಿಯೇ ಪರಿಹರಿಸಿಕೊಳ್ಳಬೇಕು. ನೌಕರರ ಸಮಸ್ಯೆಗಳನ್ನು ಮಾನವೀಯತೆಯಿಂದ ಬಗೆಹರಿಸಿಕೊಳ್ಳಬೇಕು. ಪ್ರೀತಿ ಮತ್ತು ಕಾಳಜಿಯಿಂದ ನೌಕರರನ್ನು ನೋಡಿ. ಆಗ ಅವರೂ ದಕ್ಷತೆಯಿಂದ, ಬದ್ಧತೆಯಿಂದ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಕಾರ್ಮಿಕರಿಲ್ಲರೆ ಕಾರ್ಖಾನೆ ಇಲ್ಲ. ಹಾಗೇಯೇ ಕಾರ್ಖಾನೆಗೆ ಕಾರ್ಮಿಕರೇ ಜೀವಾಳ. ಕಾರ್ಮಿಕರ ಸಮಸ್ಯೆ ಹೊತ್ತುಕೊಂಡು ಇಲ್ಲಿವರೆಗೆ ಬರುವುದಕ್ಕಿಂತ ಅಲ್ಲೇ ಪರಿಹರಿಸಿಕೊಳ್ಳಿ. ಆದ್ದರಿಂದ ಕಾರ್ಮಿಕರ ಬಗ್ಗೆ ಕಾಳಜಿ ತೋರಿ ಗೌರವ ಕೊಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಇನ್ನು ಮುಂದೆ ಸಮಸ್ಯೆ ಹೊತ್ತುಕೊಂಡು ನನ್ನ ಬಳಿ ಬರಬೇಡಿ ಎಂದರು.

ಈ ವೇಳೆ ನೌಕರರು ತಮಗೆ ವೈದ್ಯಕೀಯ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಇವುಗಳ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಲಾಡ್‌ ಅವರು ಭರವಸೆ ನೀಡಿದರು.

ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಡಾ. ಮಂಜುನಾಥ್, ಕಾರ್ಖಾನೆಗಳು ಮತ್ತು ಬಾಯ್ಲರ್ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಶ್ರೀ ರಾಥೋಡ್, ಉಪ ನಿರ್ದೇಶಕರಾದ ಶ್ರೀ ನಂಜಪ್ಪ, ಕೇಂದ್ರ ಕಾರ್ಮಿಕ ಇಲಾಖೆಯ ಉಪ ಆಯುಕ್ತರು ಮತ್ತು ಕೇಂದ್ರ ಕಾರ್ಮಿಕ ಇಲಾಖೆಯ ಸಹಾಯ ಕಾರ್ಮಿಕ ಆಯುಕ್ತರು, ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಮ್ಯಾನೇಜರ್ ನಾರಾಯಣ್, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು, ಕಾರ್ಖಾನೆಯ ನೌಕರರು ಪಾಲ್ಗೊಂಡಿದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ